ಮೈಸೂರು: ರೈತರ ಪ್ರತಿಭಟನೆಗೆ ಹೆದರಿ ಜೀಪ್ ಬಿಟ್ಟು ಅರಣ್ಯಾಧಿಕಾರಿ ಓಡಿ ಹೋಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೇಟಿಗುಪ್ಪೆ ವಲಯದಲ್ಲಿ ನಡೆದಿದೆ.
ಮೇಟಿಗುಪ್ಪೆ ವ್ಯಾಪ್ತಿಯಲ್ಲಿ ಹುಲಿ ಕಾಟ ಹೆಚ್ಚಾಗಿದ್ದು, ಹುಲಿ ಹತ್ತಾರು ಹಸುಗಳ ತಿಂದು ಕೊಂದು ಹಾಕಿದೆ. ಹೀಗಾಗಿ ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಎ.ಸಿ.ಎಫ್ ಕೇಶವಗೌಡ ತಮ್ಮ ಸಿಬ್ಬಂದಿಯ ಜೊತೆ ಬಂದಿದ್ದಾರೆ.
ಈ ವೇಳೆ ಸ್ಥಳದಲ್ಲೇ ಪರಿಹಾರ ಘೋಷಣೆ ಆಗಬೇಕು. ಹುಲಿ ಹಿಡಿಯುವ ಕಾರ್ಯಾಚರಣೆ ಆರಂಭಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಅಧಿಕಾರಿ ನೀಡಿದ ಉತ್ತರದಿಂದ ಜನರು ಸಮಾಧಾನಗೊಂಡಿಲ್ಲ. ಬಳಿಕ ಗ್ರಾಮಸ್ಥರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಅಧಿಕಾರಿಯ ಜೀಪಿಗೆ ಅಡ್ಡ ಕುಳಿತ್ತಿದ್ದಾರೆ. ಹೀಗಾಗಿ ಅಧಿಕಾರಿ ಗ್ರಾಮಸ್ಥರ ಮನವೊಲಿಸಲು ಮುಂದಾಗಿದ್ದಾರೆ. ಆದರೆ ಅದು ಸಾಧ್ಯವಾಗದೇ ಕೊನೆಗೆ ಅರಣ್ಯಾಧಿಕಾರಿ ತಮ್ಮ ಜೀಪನ್ನು ಅಲ್ಲೆ ಬಿಟ್ಟು ಅಲ್ಲಿಂದ ಓಡಿಹೋಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv