ಸದ್ಯ ಮಠದ ಕಡೆ ಬರಲ್ಲ ನಡೆದಾಡುವ ದೇವರು

Public TV
1 Min Read
SIDDAGANGA 1

ತುಮಕೂರು: ಸಿದ್ದಗಂಗಾ ಶ್ರೀಗಳಿಗೆ ತೀವ್ರವಾಗಿ ನಿಶ್ಯಕ್ತಿ ಕಾಡುತ್ತಿರುವ ಪರಿಣಾಮ ಅವರಿಗೆ ಉಸಿರಾಡಲು ತೊಂದರೆಯಾಗುತ್ತಿದೆ ಆದ್ದರಿಂದ ಶ್ರೀಗಳ ಆರೋಗ್ಯ ಸುಧಾರಿಸುವವರೆಗೆ ಮಠಕ್ಕೆ ಶಿಫ್ಟ್ ಮಾಡಲ್ಲ ಅಂತ ಡಾ. ಪರಮೇಶ್ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀಗಳಿಗೆ ನಿಶಕ್ತಿ ಕಾಡುತ್ತಿದೆ. ಹಾಗಾಗಿ ಉಸಿರಾಡಲು ಕಷ್ಟ ಪಡುತ್ತಿದ್ದಾರೆ. ಕೇವಲ ಅರ್ಧಗಂಟೆಕಾಲ ಅಷ್ಟೇ ಶ್ರೀಗಳು ಸಹಜವಾಗಿ ಉಸಿರಾಡುತ್ತಿದ್ದಾರೆ. ಬಳಿಕ ಪುನಃ ವೆಂಟಿಲೇಟರ್ ಅಳವಡಿಸಬೇಕಾಗುತ್ತದೆ ಎಂದು ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

tmk siddagannga shri

ಶ್ರೀಗಳ ಶ್ವಾಸಕೋಶದ ಸೋಂಕು ಸಂಪೂರ್ಣ ಕಡಿಮೆಯಾಗಿದ್ದು, ಶ್ವಾಸಕೋಶದ ನೀರು ನಿನ್ನೆ ತೆಗೆದಿದ್ದೇವೆ. ಶ್ರೀಗಳ ದೇಹದಲ್ಲಿ ಪ್ರೋಟೀನ್ ಅಂಶವೂ 2.9 ಮಿಲಿ ಗ್ರಾಮ್‍ಗೆ ಏರಿಕೆಯಾಗಿದೆ. ನಿಶ್ಯಕ್ತಿ ಹೊರತುಪಡಿಸಿದರೆ ಬೇರೆ ಯಾವುದೇ ಏರುಪೇರು ಇಲ್ಲ. ಆದ್ರೆ ಸದ್ಯ ಸಿದ್ದಗಂಗಾ ಶ್ರೀಗಳನ್ನು ಮಠಕ್ಕೆ ಶಿಫ್ಟ್ ಮಾಡುವ ಯಾವುದೇ ಆಲೋಚನೆ ಇಲ್ಲ. ಕಿರಿಯ ಶ್ರೀಗಳ ಮಾರ್ಗದರ್ಶನದಂತೆ ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಡಾ. ಪರಮೇಶ್ ಸ್ಪಷ್ಟಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *