Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈತ್ರಿ ಸರ್ಕಾರದಲ್ಲಿನ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣವೇ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈತ್ರಿ ಸರ್ಕಾರದಲ್ಲಿನ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣವೇ?

Bengaluru City

ಮೈತ್ರಿ ಸರ್ಕಾರದಲ್ಲಿನ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣವೇ?

Public TV
Last updated: January 15, 2019 9:10 pm
Public TV
Share
2 Min Read
SIDDU ASSEMBLE
SHARE

ಬೆಂಗಳೂರು: ಮೈತ್ರಿ ಸರ್ಕಾರ ಗೊಂದಲದ ಗೂಡಾಗಲು ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣವಾದರೇ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೈತ್ರಿ ಸರ್ಕಾರದಲ್ಲಿ ನಾನು ಹೇಳಿದ್ದೆ ನಡೆಯಬೇಕು ಎನ್ನುವ ಅಹಂ ವರ್ತನೆಯೇ ಇವತ್ತಿನ ಈ ಎಲ್ಲ ಹೈಡ್ರಾಮಕ್ಕೆ ಪ್ರಮುಖ ಕಾರಣವಂತೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರು ಬಂಡಾಯದ ಬೆಂಕಿ ಏಳುತ್ತಿರುವಾಗಲೇ ಶಮನ ಮಾಡಬಹುದಿತ್ತು. ಹಿರಿಯರಾದ ಕಾರಣ ಅವರ ಮಾತನ್ನು ಶಾಸಕರು ಕೇಳುತ್ತಿದ್ದರು. ಆದರೆ ಅವರು ಸಂಪುಟ ವಿಸ್ತರಣೆ ಸಮಯದಲ್ಲಿ ನಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡಿದ್ದರಿಂದ ಬಂಡಾಯದ ಬೆಂಕಿ ಈಗ ಜ್ವಾಲೆಯಾಗಿ ವ್ಯಾಪಿಸತೊಡಗಿದೆ ಎನ್ನುವ ವಿಚಾರವನ್ನು ಕಾಂಗ್ರೆಸ್ ಶಾಸಕರು ತಮ್ಮ ಆಪ್ತರ ಜೊತೆ ಹೇಳಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಲಭ್ಯವಾಗಿದೆ. ಇದನ್ನೂ ಓದಿ: ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು ಯಾಕೆ: ಕಾರಣ ಕೊಟ್ಟ ಪಕ್ಷೇತರರು

karnataka govt formation 759

ಮಾಜಿ ಸಿಎಂ ಮೇಲಿರೋ ಆರೋಪಗಳೇನು?:
ಸಂಪುಟ ವಿಸ್ತರಣೆಯಲ್ಲಿ ಪಕ್ಷೇತರ ಶಾಸಕ ಆರ್.ಶಂಕರ್ ಅವರನ್ನು ಕೈಬಿಟ್ಟು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದು ದೊಡ್ಡ ತಪ್ಪು. ಈ ಬೆಳವಣಿಗೆಯಿಂದ ಇಬ್ಬರು ಪಕ್ಷೇತರ ಶಾಸಕರ ಬೆಂಬಲವನ್ನು ಮೈತ್ರಿ ಸರ್ಕಾರ ಕಳೆದುಕೊಂಡಿತು. ಇತ್ತ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಅವರಿಂದ ಸಚಿವ ಸ್ಥಾನ ಪಡೆದು, ಅವರ ಸಹೋದರ ಸತೀಶ್ ಜಾರಕಿಹೊಳಿ ಅವರಿಗೆ ಕೊಟ್ಟಿದ್ದು ಮೈತ್ರಿಗೆ ಬಿದ್ದ ಮತ್ತೊಂದು ಹೊಡೆತ.

ಬೆಳಗಾವಿಯಲ್ಲಿ ಕೈತಪ್ಪಿದ್ದನ್ನು ಬಳ್ಳಾರಿಯಲ್ಲಿ ಸರಿಪಡಿಸಿ, ರಮೇಶ್ ಜಾರಕಿಹೊಳಿ ಅವರ ಆಪ್ತ ಶಾಸಕ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿದ್ದರೆ ಸ್ವಲ್ಪ ಮಟ್ಟಿಗೆ ಭಿನಮತವನ್ನು ಶಮನ ಮಾಡಬಹುದಾಗಿತ್ತು. ಆದರೆ ಸಿದ್ದರಾಮಯ್ಯನವರು ತನ್ನ ಆಪ್ತ ಪರಮೇಶ್ವರ್ ನಾಯ್ಕ್ ಗೆ ಸಚಿವ ಸ್ಥಾನ ನೀಡಿದ್ದು ಉಳಿದವರ ಕಣ್ಣು ಕೆಂಪಗೆ ಮಾಡಿತು. ಇದನ್ನೂ ಓದಿ: ದೋಸ್ತಿ ಸರ್ಕಾರ ಉರುಳುತ್ತಾ? ಬಿಜೆಪಿ ಅಧಿಕಾರಕ್ಕೆ ಏರಬೇಕಾದರೆ ಏನೆಲ್ಲ ‘ಮ್ಯಾಜಿಕ್’ ನಡೆಯಬೇಕು?

JDS COngress 1

ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕಾತಿಯನ್ನು ಲೋಕಸಭಾ ಚುನಾವಣೆಯ ನಂತರ ಮಾಡೋಣ. ಈಗ ಈ ಪ್ರಕ್ರಿಯೆ ಮಾಡಿದರೆ ಶಾಸಕರ ಅಸಮಾಧಾನ ಮತ್ತಷ್ಟು ಜಾಸ್ತಿಯಾಗಲಿದೆ ಎಂದು ನಾನು ಮೊದಲೇ ಹೇಳಿದ್ದೆ. ಆದರೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ಸಿನ ಹಿರಿಯ ಮುಖಂಡರು ನನ್ನ ಮಾತನ್ನು ಪುರಸ್ಕರಿಸಲಿಲ್ಲ. ಪಟ್ಟು ಹಿಡಿದು ನೇಮಕಾತಿ ಮಾಡಿದ್ದಕ್ಕೆ ಹೀಗಾಯ್ತು ನೋಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮುಂದೆಯೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಸಿಎಂ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಹೇಗೆ ಬೇಕೋ ಹಾಗೆ ಸುದ್ದಿ ಹಾಕಿ – ಮಾಧ್ಯಮಗಳ ವಿರುದ್ಧ ಸಿಎಂ ಕೆಂಡಾಮಂಡಲ

ಕುಮಾರಸ್ವಾಮಿ ಆರೋಪಗಳಿಗೆ, ಕಾಲ ಮಿಂಚಿಲ್ಲ, ಸರ್ಕಾರ ಬೀಳಲ್ಲ, ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಅಂತ ಹೇಳಿ ಸಿಎಂಗೆ ವೇಣುಗೋಪಾಲ್ ಅಭಯ ನೀಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

JDS COngress 3

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:congressjdskannada newssiddaramaiahಆಪರೇಷನ್ ಕಮಲಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
44 seconds ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
9 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
12 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
24 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
56 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?