Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಕಮಲ ಯಶಸ್ವಿಯಾಗಲು ದೋಸ್ತಿ ಸರ್ಕಾರ ಮಾಡಿದ ತಪ್ಪುಗಳು ಪಟ್ಟಿ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಪರೇಷನ್ ಕಮಲ ಯಶಸ್ವಿಯಾಗಲು ದೋಸ್ತಿ ಸರ್ಕಾರ ಮಾಡಿದ ತಪ್ಪುಗಳು ಪಟ್ಟಿ ಇಲ್ಲಿದೆ

Bengaluru City

ಆಪರೇಷನ್ ಕಮಲ ಯಶಸ್ವಿಯಾಗಲು ದೋಸ್ತಿ ಸರ್ಕಾರ ಮಾಡಿದ ತಪ್ಪುಗಳು ಪಟ್ಟಿ ಇಲ್ಲಿದೆ

Public TV
Last updated: January 16, 2019 8:44 am
Public TV
Share
3 Min Read
hdk revanna siddu dkshi
SHARE

ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿ ಆಪರೇಷನ್ ಕಮಲ ತಂತ್ರವನ್ನು ಪ್ರಯೋಗಿಸಲು ಮುಂದಾಗಿದೆ. ಇದರ ಪರಿಣಾಮ ಪಕ್ಷೇತರರ ಶಾಸಕರಾದ ಹೆಚ್.ನಾಗೇಶ್ ಮತ್ತು ಆರ್.ಶಂಕರ್ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ವಾಪಸ್ ಪಡೆದುಕೊಂಡರು. ಸರ್ಕಾರ ರಚನೆಯಾದ ಬಳಿಕ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದುವು. ಆದರೆ ಎಲ್ಲಿಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲ ನಾಯಕರು ನಾವು ಯಾರನ್ನು ಸಂಪರ್ಕ ಮಾಡಿಲ್ಲ. ಅವರಾಗಿಯೇ ಬಂದರೆ ಸ್ವಾಗತ ಅಂತಾನೇ ಹೇಳುತ್ತಿದ್ದರು.

ಇಬ್ಬರು ಪಕ್ಷೇತರರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ತೆಗೆದುಕೊಳ್ಳುವಂತೆ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಎಲ್ಲಿಯೂ ಬಿಜೆಪಿ ನಾಯಕರು ನಾವೇ ಅವರನ್ನು ಬರಮಾಡಿಕೊಂಡಿದ್ದೇವೆ ಅಂತಾ ಹೇಳಿಲ್ಲ. ಆದ್ರೆ ಯಡಿಯೂರಪ್ಪ ಮೊಗದಲ್ಲಿ ಮಂದಹಾಸ ಮೂಡಿರುವುದು ಮಾತ್ರ ಸತ್ಯ. ಸರ್ಕಾರ ರಚನೆಯ ಬಳಿಕ ಸಿಎಂ ಸೇರಿದಂತೆ ಕಾಂಗ್ರೆಸ್ ಕೆಲ ನಾಯಕರು ಗೊತ್ತೋ, ಗೊತ್ತಿಲ್ಲದ ತಪ್ಪುಗಳು ಬಿಜೆಪಿಗೆ ವರವಾಯ್ತಾ ಎಂಬ ವಿಮರ್ಶೆಗಳು ಆರಂಭವಾಗಿವೆ. ಹಾಗಾದ್ರೆ ದೋಸ್ತಿ ಸರ್ಕಾರದ ತಪ್ಪುಗಳೇನು? ಇಲ್ಲಿದೆ ಮಾಹಿತಿ. ಇದನ್ನೂ ಓದಿ: ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು ಯಾಕೆ: ಕಾರಣ ಕೊಟ್ಟ ಪಕ್ಷೇತರರು

karnataka govt formation 759

ಸಿದ್ದರಾಮಯ್ಯ ಮಾಡಿದ ತಪ್ಪುಗಳು:
ಸಮನ್ವಯ ಸಮಿತಿ ಸಭೆ ಮಾಡದೇ ಇರೋದು. ಬಹಿರಂಗವಾಗಿ ಸಿಎಂಗೆ ಪತ್ರ, ಟ್ವಿಟ್ ಮೂಲಕ ಪರೋಕ್ಷ ಟೀಕೆ. ಬಳ್ಳಾರಿ ಶಾಸಕರ ಬಂಡಾಯ ಶಮನ ಮಾಡದೇ ಇದ್ದಿದ್ದು. ತನ್ನದೇ ಶಿಷ್ಯರು ಬಂಡಾಯ ಎದ್ದಾಗಲು ಸುಮ್ಮನಿದ್ದಿದ್ದು, ರಾಜ್ಯದಲ್ಲಿ ಬಂಡಾಯ ಎದ್ದಾಗಲೆಲ್ಲಾ ದೂರ ವಿದೇಶ ಪ್ರವಾಸ ಕೈಗೊಂಡಿದ್ದು, ಮೈತ್ರಿ, ಲೋಕ ಚುನಾವಣೆವರೆಗೆ ಮಾತ್ರ ಅಂತ ಅರಂಭದಲ್ಲೆ ಶಾಂತಿವನದಲ್ಲಿ ಕೂತು ಹೇಳಿಕೆ ನೀಡಿದ್ದರು.ಗಂಭೀರವಾಗಿ ಆಪರೇಶನ್ ನಡೀತಾ ಇದ್ರು `ಡೋಂಟ್ ಕೇರ್’ ಸ್ವಭಾವ ಪ್ರದರ್ಶಿಸಿದ್ದು, ನಿಗಮ ಮಂಡಳಿ ನೇಮಕ ವಿಚಾರದಲ್ಲೂ ತನ್ನದೇ ಕೈ ಮೇಲಾಗುವಂತೆ ನೋಡಿಕೊಂಡು ಅತೃಪ್ತರ ಅಸಮಾಧಾನ ಹೆಚ್ಚಾಗುವಂತೆ ಮಾಡಿದ್ದು ಆಪರೇಷನ ಕಮಲಕ್ಕೆ ಮುಂದಾಗುವಂತೆ ಮಾಡಿತು. ಸಂಪುಟ ವಿಸ್ತರಣೆ ವೇಳೆ ತನ್ನವರಿಗೆ ಪ್ರಬಲ ಖಾತೆ ಕೊಡಿಸಿದ್ದು, ಕೊನೆ ಕ್ಷಣದವರೆಗೂ ತಮ್ಮ ಶಾಸಕರು ಕೈ ಕೊಡಲ್ಲ ಅಂತ ಅತಿಯಾದ ಆತ್ಮವಿಶ್ವಾಸ ತೋರಿಸಿದ್ದು ದೋಸ್ತಿಗೆ ಕಂಟಕವಾಗಿರುವ ಸಾಧ್ಯತೆಗಳಿವೆ. ಇದನ್ನೂ ಓದಿ: ಮೈತ್ರಿ ಸರ್ಕಾರದಲ್ಲಿನ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣವೇ?

HDK SIDDU

ಸಿಎಂ ಕುಮಾರಸ್ವಾಮಿ ಮಾಡಿದ ತಪ್ಪುಗಳು:
ಎಲ್ಲಾ ಅಧಿಕಾರ ನನಗೆ ಮತ್ತು ನಮ್ಮ ಮನೆಯವರಿಗೆ ಎಂಬ ಪರಿಪಾಠ. ಸಚಿವ ರೇವಣ್ಣ ಎಷ್ಟೇ ತಪ್ಪು ಮಾಡಿದ್ರು ಸಹೋದರನ ಪರವಹಿಸಿದ್ದರು. ಆಪರೇಷನ್ ಕಮಲ ಆಗಲ್ಲ ಅನ್ನೋ ಅತಿಯಾದ ಕಾನ್ಫಿಡೆನ್ಸ್ ಹೊಂದಿದ್ದರು. ಶತ್ರುವಿನ ಸಾಮರ್ಥ್ಯವನ್ನ ಅರಿಯದೇ ನಿರ್ಲಕ್ಷ್ಯ ತೋರಿದ್ದರು. ಸಂಪುಟ ವಿಸ್ತರಣೆ ಮುಂದೂಡುತ್ತಲೇ ಬಂದಿದ್ದು ಮತ್ತು ದೋಸ್ತಿ ಪಕ್ಷದ ವಿರುದ್ಧದ ಕೆಲ ಹೇಳಿಕೆಗಳು ನೀಡಿದ್ದರು. ಹಲವು ಬಾರಿ ಬಹಿರಂಗವಾಗಿ ತಮ್ಮ ಅಸಹಾಯಕತೆ ಪ್ರದರ್ಶಿಸಿದ್ದರು. ಇದನ್ನೂ ಓದಿ: ದೋಸ್ತಿ ಸರ್ಕಾರ ಉರುಳುತ್ತಾ? ಬಿಜೆಪಿ ಅಧಿಕಾರಕ್ಕೆ ಏರಬೇಕಾದರೆ ಏನೆಲ್ಲ ‘ಮ್ಯಾಜಿಕ್’ ನಡೆಯಬೇಕು?

ಹೆಚ್.ಡಿ. ರೇವಣ್ಣ ಮಾಡಿದ ತಪ್ಪುಗಳು: 
ಎಲ್ಲಾ ನಮಗೇ ಬೇಕು ಅನ್ನೋ ರೀತಿಯ ಮನೋಭಾವ. ಎಲ್ಲಾ ವಿಚಾರ ಮತ್ತು ಖಾತೆಯಲ್ಲೂ ಹಸ್ತಕ್ಷೇಪ ಮಾಡಿದ ಆರೋಪಗಳ ಜೊತೆಗೆ ಸೂಪರ್ ಸಿಎಂ ರೀತಿಯ ವರ್ತನೆ. ಕಾಂಗ್ರೆಸ್ ಶಾಸಕರಿಗೆ, ಸಚಿವರಿಗೆ ಬೆಲೆಯೇ ಕೊಡದೆ ಇದ್ದಿದ್ದು ಮತ್ತು ನಮ್ ದಾರಿ ನಮಗೆ, ನಿಮ್ ದಾರಿ ನಿಮಗೆ ಹೇಳಿಕೆ ಕೊಟ್ಟಿದ್ದು ಬಿಜೆಪಿ ವರವಾಗಿದ್ದರು ಆಗಿರಬಬುದು.

h. d revanna

ಡಿಕೆ ಶಿವಕುಮಾರ್ ಮಾಡಿದ ತಪ್ಪುಗಳು:
ಅವಶ್ಯಕತೆ ಇಲ್ಲದಿದ್ದರೂ ಬೆಳಗಾವಿ ಪಾಲಿಟಿಕ್ಸ್ ಗೆ ಮೂಗು ತೂರಿಸಿದ್ದರು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‍ಗೆ ಸಪೋರ್ಟ್ ಮಾಡಿ ಬೆಳಗಾವಿ ಬ್ರದರ್ಸ್ ಬಂಡಾಯಕ್ಕೆ ದಾರಿ ಮಾಡಿಕೊಟ್ಟಿದ್ದು. ಆಪರೇಷನ್ ಕಮಲವನ್ನ ಲಘುವಾಗಿ ತೆಗೆದುಕೊಂಡಿದ್ದು, ಎಂಥಾ ಪರಿಸ್ಥಿತಿ ಬಂದ್ರೂ ನಿಭಾಯಿಸುತ್ತೇನು ಅನ್ನೋ ಅತಿಯಾದ ಆತ್ಮವಿಶ್ವಾಸ ಹೊಂದಿದ್ದು ಆಪರೇಷನ್ ಕಮಲಕ್ಕೆ ದಾರಿ ಮಾಡಿಕೊಟ್ಟಂತೆ ಕಾಣುತ್ತಿದೆ. ಬಳ್ಳಾರಿ ಉಪಚುನಾವಣೆಗೆ ಸ್ಥಳೀಯ ಶಾಸಕರ ವಿರೋಧ ಕಟ್ಟಿಕೊಂಡು ಹೊರಗಿನ ವ್ಯಕ್ತಿಗೆ ಟಿಕೆಟ್ ಕೊಡಿಸಿ, ಶಾಸಕ ನಾಗೇಂದ್ರನ ಸಹೋದರನಿಗೆ ಕಳೆದ ಎಂಪಿ ಟಿಕೆಟ್ ತಪ್ಪಿಸಿದ್ದರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹೇಗೆ ಬೇಕೋ ಹಾಗೆ ಸುದ್ದಿ ಹಾಕಿ – ಮಾಧ್ಯಮಗಳ ವಿರುದ್ಧ ಸಿಎಂ ಕೆಂಡಾಮಂಡಲ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpcongressDK Shivakumarhd kumaraswamyHD ReveannaOperation Lotussiddaramaiahಆಪರೇಷನ್ ಕಮಲಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿಹೆಚ್ ಡಿ ರೇವಣ್ಣ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
5 minutes ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
23 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
30 minutes ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
1 hour ago
Tejasvi Surya
Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
By Public TV
1 hour ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?