ಬೆಂಗಳೂರು: ಹರಿಯಾಣದ ರೆಸಾರ್ಟ್ ನಲ್ಲಿ ಕೋಟಿಗಟ್ಟಲೆ ಹಣ ಖರ್ಚು ಮಾಡಿಲ್ಲ. ಅಷ್ಟೇ ಅಲ್ಲದೆ ನಮ್ಮ ಜೇಬಿನಿಂದ ಹಣ ಹಾಕಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹರಿಯಾಣದಲ್ಲಿ ನಮ್ಮ ಹಿತೈಶಿಗಳಿದ್ದಾರೆ. ಅವರೇ ರೆಸಾರ್ಟ್ ಖರ್ಚು ನೋಡಿಕೊಂಡಿದ್ದಾರೆ ಎಂದ ಅವರು, ಗುರುಗ್ರಾಮದ ರೆಸಾರ್ಟ್ ನಲ್ಲಿರುವ ಶಾಸಕರಿಗೆ ಶುಕ್ರವಾರ ರಾತ್ರಿ 11 ಗಂಟೆಗೆ ಫೋನ್ ಮಾಡಿ ವಾಪಸ್ ಬನ್ನಿ ಅಂತ ಹೇಳಿದ್ದರು. ಹೀಗಾಗಿ ಎಲ್ಲ ಶಾಸಕರೂ ಅವರವರ ಕ್ಷೇತ್ರಕ್ಕೆ ಹೋಗಿದ್ದಾರೆ ಎಂದು ಹೇಳಿದರು. ಇದನ್ನು ಓದಿ: ಬಿಜೆಪಿ ಶಾಸಕರ 5 ದಿನ ವಾಸ್ತವ್ಯಕ್ಕೆ 3.16 ಕೋಟಿ ರೂ. ಖರ್ಚು
ನಾವೇನೂ ಪ್ರಯತ್ನ ಮಾಡದಿದ್ದರೂ ಕಾಂಗ್ರೆಸ್ ಕುಸಿದು ಬೀಳುತ್ತದೆ. ಅವರು ಆಂತರಿಕ ಗೊಂದಲಗಳಲ್ಲಿ ಬಿದ್ದು ಒದ್ದಾಡುತ್ತಿದ್ದಾರೆ. ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ದೂರುತ್ತಿದ್ದಾರೆ. ಅವರಿಗೆ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಇಲ್ಲ ಅಂತ ಅವರು ಒಪ್ಪಿಕೊಳ್ಳಲಿ. ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಕುಡುಕರು ಕೂಡ ಅವರಂತೆ ಮಾತನಾಡುವುದಿಲ್ಲ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆದಷ್ಟು ಬೇಗ ಅಧಿಕಾರಕ್ಕೆ ಬರುತ್ತದೆ. ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನು ಓದಿ: ಕೈ ಶಾಸಕರು ಉಳಿದುಕೊಂಡಿರುವ ಈಗಲ್ಟನ್ ರೆಸಾರ್ಟಿನಿಂದ ಸರ್ಕಾರಕ್ಕೆ ಬರಬೇಕಿದೆ 982 ಕೋಟಿ ರೂ.
ಸಿದ್ದರಾಮಯ್ಯ ಅವರಿಗೆ ದುಬಾರಿ ಕಾರು ಉಡುಗೊರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೆ.ಎಸ್.ಈಶ್ವರಪ್ಪ, ಅವರು ಮಾನ ಮರ್ಯಾದೆ ಇರೋರಲ್ವಾ? ಅಷ್ಟು ದುಬಾರಿ ಕಾರು ಉಡುಗೊರೆ ಕೊಟ್ಟಿದ್ಯಾರು? ಯಾಕೆ ದುಬಾರಿ ಕಾರು ಕೊಟ್ಟಿದ್ದಾರೆ ಅಂತ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv