Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2011ರಲ್ಲೇ ಕಿರಿಯ ಶ್ರೀಗಳಿಗೆ ಮಠದ ಅಧಿಕಾರ ಹಸ್ತಾಂತರಿಸಿದ್ದರು ಶ್ರೀಗಳು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 2011ರಲ್ಲೇ ಕಿರಿಯ ಶ್ರೀಗಳಿಗೆ ಮಠದ ಅಧಿಕಾರ ಹಸ್ತಾಂತರಿಸಿದ್ದರು ಶ್ರೀಗಳು!

Districts

2011ರಲ್ಲೇ ಕಿರಿಯ ಶ್ರೀಗಳಿಗೆ ಮಠದ ಅಧಿಕಾರ ಹಸ್ತಾಂತರಿಸಿದ್ದರು ಶ್ರೀಗಳು!

Public TV
Last updated: January 21, 2019 5:26 pm
Public TV
Share
3 Min Read
KIRIYA SWAMIJI
SHARE

ತುಮಕೂರು: ಏಳು ಶತಮಾನಗಳ ಐತಿಹ್ಯ ಹೊಂದಿರುವ ಶ್ರೀ ಸಿದ್ದಗಂಗಾ ಕ್ಷೇತ್ರದಲ್ಲಿ 2011ರ ಆಗಸ್ಟ್ 4 ರಂದು ಹಸ್ತ ನಕ್ಷತ್ರ ನಾಗರ ಪಂಚಮಿಯಂದು ಶ್ರೀ ಶಿವಕುಮಾರ ಮಹಾಸ್ವಾಮೀಜಿ ಶ್ರೀ ಕ್ಷೇತ್ರದ ಉತ್ತರಾಧಿಕಾರಿಗಳೂ ಹಾಗೂ ಕಿರಿಯ ಶ್ರೀಗಳಾದ ಶ್ರೀ ಸಿದ್ದಲಿಂಗ ಸ್ವಾಮಿಗಳಿಗೆ ಸಿದ್ದಗಂಗಾ ಮಠದ ಅಧಿಕಾರವನ್ನು ಅಧಿಕೃತ ಛಾಪಾ ಕಾಗದದ ಮೂಲಕ ಹಸ್ತಾಂತರಿಸಿದರು.

ಅಧಿಕಾರ ಹಸ್ತಾಂತರಕ್ಕೂ ಮುನ್ನ ತಮ್ಮ ಕಚೇರಿಯಲ್ಲಿ ಕಿರಿಯ ಸ್ವಾಮೀಜಿಯವರ ಹೆಸರಿಗೆ ಬರೆಸಿದ ಉಯಿಲನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರಿಂದ ಓದಿಸಲಾಯಿತು. ಜೊತೆಗೆ ಶ್ರೀ ಶಿವಕುಮಾರ ಸ್ವಾಮೀಜಿಯವರೂ ಸಹ ಒಮ್ಮೆ ಓದಿ ಸಹಿ ಹಾಕಿದರು. ಅಪಾರ ಭಕ್ತರು ಭಾವುಕರಾಗಿ ಕಾರ್ಯಕ್ರಮದಲ್ಲಿ ಸಾಕ್ಷಿಯಾದರು. ಅಧಿಕಾರ ಹಸ್ತಾಂತರ ಮಾಡಿದ ಶ್ರೀಗಳು ಆಶೀರ್ವಚನ ನೀಡಿದರು.

sri 6

ಆಶೀರ್ವಚನದಲ್ಲಿ ಹೇಳಿದ್ದು ಏನು?
ಭಗವಂತನ ಸೃಷ್ಟಿಯಲ್ಲಿ ಮನುಷ್ಯನಿಗೆ ಶ್ರೇಷ್ಠವಾದ ಸ್ಥಾನವಿದೆ. ಅದನ್ನು ಅರಿತು ನಡೆದುಕೊಂಡರೆ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ. ಮನುಷ್ಯತ್ವ ಬೆಳೆಯಲು ಧರ್ಮಪೀಠಗಳು ನೆರವಾಗಬೇಕು. ಭಕ್ತರಲ್ಲಿ ಸಮಾಜಮುಖಿ ಭಾವನೆ ಬೆಳೆಸುವುದು ಧರ್ಮಪೀಠಗಳ ಕರ್ತವ್ಯ. ಭ್ರಷ್ಟಾಚಾರದ ಪಿಡುಗು ತೊಲಗಿಸಲು ಕೇವಲ ಕಾನೂನಿನಿಂದ ಸಾಧ್ಯವಿಲ್ಲ. ಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ವಯಸ್ಸಿನಿಂದಲೇ ದೇಶದ ಬಗ್ಗೆ ನಿಷ್ಠೆ ಹಾಗೂ ಉದಾತ್ತ ಭಾವನೆ ಬೆಳೆಸಬೇಕು. ಶಿಕ್ಷಣದಿಂದ ಈ ಬದಲಾವಣೆ ಸಾಧ್ಯ. ಯಾರೂ ಯಾವುದೇ ಒಂದು ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಹಲವು ಟೀಕೆ ಟಿಪ್ಪಣಿಗಳು ಬರುತ್ತವೆ. ಅವುಗಳನ್ನು ಲೆಕ್ಕಿಸದೇ ಸಮಾಜದ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕಿದೆ. ಅಂತಹ ದಕ್ಷತೆಯನ್ನು ಬೆಳೆಸಿಕೊಳ್ಳಲು ಕೆಲವು ತತ್ವಗಳನ್ನು ಅರಿಯಬೇಕಾಗಿದೆ. ಮನುಷ್ಯ, ಮನುಷ್ಯನಿಗಾಗಿ ಬಾಳಬೇಕು. ಮಾನವ ಧರ್ಮಕ್ಕೆ ಬದ್ಧರಾದರೆ ಬಡತನ, ದಾರಿದ್ರ್ಯ, ಭ್ರಷ್ಟತೆಗಳು ತಾನಾಗಿಯೇ ಕಣ್ಮರೆಯಾಗುತ್ತದೆ. ಈ ನಿಟ್ಟಿನಲ್ಲಿ ಕಿರಿಯ ಶ್ರೀಗಳು ತಮ್ಮ ಜವಾಬ್ದಾರಿಯನ್ನು ಸುಸೂತ್ರವಾಗಿ ನಿರ್ವಹಿಸಲಿದ್ದಾರೆ ಎಂಬ ನಂಬಿಕೆ ನನ್ನಲ್ಲಿದೆ.

TMK SHREE

ಶ್ರೀ ಮಠದ ಕಾರ್ಯವ್ಯಾಪ್ತಿಗಳು ದಿನೇ ದಿನೇ ವಿಸ್ತಾರವಾಗುತ್ತಾ ನಡೆದಿವೆ. ವಿದ್ಯಾಸಂಸ್ಥೆಗಳು ಅಧಿಕಗೊಂಡಿವೆ. ಭಕ್ತರು ಸಂಪತ್ತು ಅಪಾರವಾಗಿ ಬೆಳೆದಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. ಸಭೆ-ಸಮಾರಂಭಗಳು, ಭಕ್ತರ ಮನೆಯ ಆಹ್ವಾನಗಳು ದಿನೇ ದಿನೇ ಅಧಿಕವಾಗುತ್ತಿವೆ. ನಮಗೆ ಈ ಎಲ್ಲಾ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ವಯೋಧರ್ಮದಿಂದ ಸಾಧ್ಯವಾಗುತ್ತಿಲ್ಲ. ಈ ಇಳಿ ವಯಸ್ಸಿನಲ್ಲಿ ದೇಹಧರ್ಮ ಸಹಜವಾಗಿ ಕಾರ್ಯ ನಿರ್ವಹಿಸುವಲ್ಲಿ ಆಶಕ್ತವಾಗಿದೆ. ಈ ಎಲ್ಲಾ ಅಂಶಗಳನ್ನು ಮನಗಂಡು ನಮ್ಮ ಉತ್ತಾರಾಧಿಕಾರಿಗಳಾಗಿರುವ ಶ್ರೀ ಸಿದ್ದಲಿಂಗಸ್ವಾಮಿ ಅವರಿಗೆ ಶ್ರೀ ಮಠದ ಮಠಾಧ್ಯಕ್ಷತೆಯನ್ನು ವಹಿಸಿಕೊಟ್ಟು, ನಡೆಸಿಕೊಂಡು ಹೋಗಲು ಬಿಟ್ಟುಕೊಟ್ಟಲ್ಲಿ ಮಠದ ಎಲ್ಲಾ ಕೆಲಸ ಕಾರ್ಯಗಳು ಮತ್ತು ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತದೆಂಬ ಸದ್ಭಾವನೆ ನಮ್ಮಲ್ಲಿ ಇದೆ. ಈ ಲೌಕಿಕ ವ್ಯವಹಾರಗಳಿಂದ ನಿವೃತ್ತಿ ಹೊಂದಿ ಆಧ್ಯಾತ್ಮಿಕ ಸಂಪತ್ತನ್ನು ಭಕ್ತಾದಿಗಳಿಗೆ ನೀಡಿ ಅವರಲ್ಲಿ ಪೂಜಾ ನಿಷ್ಠೆಯನ್ನು ಬೆಳೆಸಿ, ಸಮಾಜಕ್ಕೆ ಯೋಗ್ಯ ಮಾರ್ಗದರ್ಶನ ಮಾಡಬೇಕೆಂಬ ಆಸಕ್ತಿಯುಳ್ಳವರಾಗಿರುತ್ತೇವೆ.

SRII copy 1

ಶ್ರೀ ಸಿದ್ದಲಿಂಗಸ್ವಾಮೀಜಿಯವರು ಅಂದಿನಿಂದ ಇಂದಿನವರೆಗೆ ನಮ್ಮ ಆಜ್ಞಾನುಸಾರ ನಡೆದುಕೊಳ್ಳುತ್ತಿದ್ದಾರೆ. ಮಠದ ಕಾರ್ಯಗಳನ್ನು ಸದಾಚಾರ, ಗುರುನಿಷ್ಠೆ ಮತ್ತು ಪೂಜಾ ನಿಷ್ಠೆಯಿಂದ ನಿರ್ವಹಿಸಿದ್ದಾರೆ. ಮಠದ ಪವಿತ್ರ ಪರಂಪರೆಯನ್ನು ಮುಂದುವರಿಸಿಕೊಂಡು, ಚಾರಿತ್ರ್ಯ ಸಂಪನ್ನರಾಗಿ ರೂಪುಗೊಂಡಿದ್ದಾರೆ. ಸಿದ್ದಲಿಂಗ ಸ್ವಾಮೀಜಿಗೆ ಅಧಿಕಾರ ವಹಿಸಿಕೊಟ್ಟರೆ ಮಠದ ಶ್ರೇಯೋಭಿವೃದ್ಧಿಯಾಗುತ್ತದೆ ಎಂಬ ಬಗ್ಗೆ ದೃಢ ನಂಬಿಕೆ ಇದೆ.

ಈ ಎಲ್ಲಾ ಅಂಶಗಳನ್ನು ಮನಗಂಡು, ನಮಗೆ ಈಗಾಗಲೇ 103 ಸಂವತ್ಸರಗಳು ತುಂಬಿದ್ದು, 104ನೇ ಸಂವತ್ಸರಗಳಲ್ಲಿ ಇರುವುದರಿಂದ ಹಾಗೂ ಕಳೆದು 2-3 ಮಾಸಗಳಿಂದ ಪದೇ ಪದೇ ದೇಹಾಲಸ್ಯ ಉಂಟಾಗುತ್ತಿರುವುದರಿಂದ, ಹೊರಗಡೆ ದೂರ ಪ್ರಯಾಣ ಮಾಡಲು ಹಾಗೂ ಭಕ್ತರ ಕೋರಿಕೆಯನ್ನು ನೆರವೇರಿಸಲು ಕಷ್ಟಕರವಾಗುತ್ತಿರುವುದರಿಂದ, ಶ್ರೀ ಮಠದ ದೈನಂದಿನ ಕಾರ್ಯಕ್ರಮಗಳಿಗೆ ಮತ್ತು ಶ್ರೇಯೋಭಿವೃದ್ಧಿಗೆ ಕುಂದು ಬಾರದಿರಲೆಂಬ ಸದುದ್ದೇಶದಿಂದ ಹರಗುರು ಚರಮೂರ್ತಿಗಳು, ಮಠಾಧ್ಯಕ್ಷರುಗಳು ಹಾಗೂ ಭಕ್ತರ ಸಮ್ಮುಖದಲ್ಲಿ ಈ ದಿನ ಅಂದರೆ 2011ರ ಆಗಸ್ಟ್ 4 ರಂದು ನಮ್ಮ ಉತ್ತರಾಧಿಕಾರಿಯಾಗಿ ಮುಂದುವರಿದಿರುವ ಶ್ರೀ ಸಿದ್ದಲಿಂಗಸ್ವಾಮಿ ಅವರನ್ನ, ಶ್ರೀ ಮಠದ ಘನತೆ, ಗೌರವ, ಪ್ರತಿಷ್ಠೆಗಳಿಗೆ ಕುಂದುಬಾರದಂತೆ ನಡೆಸಿಕೊಂಡು ಹೋಗಲು ಹಾಗೂ ಶ್ರೀ ಸಿದ್ದಗಂಗಾ ಮಠದ ಮಠಾಧ್ಯಕ್ಷತೆಯನ್ನು ವಹಿಸಿಕೊಟ್ಟು ಅವರನ್ನು ಮಠಾಧ್ಯಕ್ಷರನ್ನಾಗಿ ನೇಮಿಸಿ ಆಶೀರ್ವದಿಸಿರುವೆ.

https://www.youtube.com/watch?v=SQorcppSI_8

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:siddaganga muttSiddaganga ShriSiddalinga SwamiSutur Mutttumkurತುಮಕೂರುಸಿದ್ದಗಂಗಾ ಮಠಸಿದ್ದಗಂಗಾ ಶ್ರೀಗಳುಸಿದ್ದಲಿಂಗ ಸ್ವಾಮಿಸುತ್ತೂರು ಮಠ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Raichuru Accident NS Bosaraju
Crime

ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ, ರೈತ ಸಾವು – ಮಾರ್ಗಮಧ್ಯೆ ಘಟನೆ ಕಂಡು ಸ್ಥಳಕ್ಕೆ ಭೇಟಿ, ಸಾಂತ್ವನ ಹೇಳಿದ ಸಚಿವ ಬೋಸರಾಜು

Public TV
By Public TV
9 minutes ago
DKSHI HDK
Bengaluru City

ಮನರೇಗಾ ವಿಚಾರವಾಗಿ ಹೆಚ್‌ಡಿಕೆ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಡಿಕೆಶಿ

Public TV
By Public TV
25 minutes ago
cricket news India vs New Zealand 1st ODI india need 301 runs to win
Cricket

IND vs NZ | ಭಾರತಕ್ಕೆ 301 ರನ್‌ಗಳ ಗುರಿ ನೀಡಿದ ಕಿವೀಸ್‌

Public TV
By Public TV
26 minutes ago
ayatollah ali khamenei donald trump
Latest

ಇಸ್ರೇಲ್‌, ಅಮೆರಿಕ ವಾಯುನೆಲೆಗಳ ಮೇಲೆ ದಾಳಿ ಮಾಡ್ತೀವಿ: ಟ್ರಂಪ್‌ಗೆ ಇರಾನ್‌ ವಾರ್ನಿಂಗ್‌

Public TV
By Public TV
1 hour ago
hockey
Crime

ಸ್ಟೇಡಿಯಂನ ಬಾತ್ರೂಮ್‌ನಲ್ಲಿ ಅಪ್ರಾಪ್ತ ಹಾಕಿ ಆಟಗಾರ್ತಿಯ ಮೇಲೆ ರೇಪ್, ಬಳಿಕ ಗರ್ಭಪಾತ – ಕೋಚ್ ಅರೆಸ್ಟ್

Public TV
By Public TV
1 hour ago
bengaluru girl murder case accused raped her before murder
Bengaluru City

ಬೆಂಗಳೂರು | ತಾಯಿ ಮೇಲಿನ ಸಿಟ್ಟಿಗೆ ಬಾಲಕಿ ಹತ್ಯೆ ಕೇಸ್‌ – ಕೊಲೆಗೂ ಮುನ್ನ ಅತ್ಯಾಚಾರ ಎಸಗಿದ್ದ ಆರೋಪಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?