Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಠದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದೆ ದಾಸೋಹದ ವ್ಯವಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಠದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದೆ ದಾಸೋಹದ ವ್ಯವಸ್ಥೆ

Districts

ಮಠದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದೆ ದಾಸೋಹದ ವ್ಯವಸ್ಥೆ

Public TV
Last updated: January 22, 2019 10:10 am
Public TV
Share
2 Min Read
tmk dasoha
SHARE

ತುಮಕೂರು: ನಡೆದಾಡುವ ದೇವರು, ಕಲಿಯುಗದ ಬಸವಣ್ಣ ಶತಾಯುಷಿ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯ ಅಂತಿಮ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಸಾಗರ ತುಮಕೂರು ಸಿದ್ದಗಂಗಾ ಮಠದತ್ತ ಹರಿದು ಬರುತ್ತಿದ್ದು, ಭಕ್ತರಿಗಾಗಿ ಅಚ್ಚುಕಟ್ಟಾಗಿ ದಾಸೋಹದ ವ್ಯವಸ್ಥೆಯನ್ನು ಮಾಡಲಾಗಿದೆ.

ಶಿವಕುಮಾರ ಸ್ವಾಮೀಜಿಗಳು ಮಠಕ್ಕೆ ಆಗಮಿಸುವ ಭಕ್ತರಿಗೆ ದಾಸೋಹ ತಪ್ಪಬಾರದು. ತಡವಾದರೂ ದಾಸೋಹ ಸಿಗದೇ ಭಕ್ತರು ತೆರಳಬಾರದು ಎಂದು ಹೇಳುತ್ತಿದ್ದರು. ನಡೆದಾಡುವ ದೇವರ ಈ ವಾಕ್ಯ ಈಗಲೂ ಪಾಲನೆಯಾಗುತ್ತಿದ್ದು, ಅಂತಿಮ ದರ್ಶನಕ್ಕೆ ಬರುತ್ತಿರುವ ಭಕ್ತರಿಗೆ ಯಾವುದೇ ಅನಾನುಕೂಲ ಉಂಟಾಗದಂತೆ ಹಾಗೂ ಪ್ರಸಾದ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ರಾತ್ರಿಯಿಂದಲೇ ಪ್ರಸಾದವನ್ನ ತಯಾರಿಸಿ, ಊಟದ ವ್ಯವಸ್ಥೆಯನ್ನ ಅಚ್ಚುಕಟ್ಟಾಗಿ ನೀಡಲಾಗುತ್ತಿದೆ.  ಇದನ್ನೂ ಓದಿ:ನಡೆದಾಡುವ ದೇವರ ಅಂತಿಮ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ

tmk dasoha 1

ದಾಸೋಹದಲ್ಲಿ ಸಹಾಯ ಮಾಡಲು ಹಲವಾರು ಭಕ್ತರು ಕೂಡ ಕೈ ಜೋಡಿಸುತ್ತಿದ್ದಾರೆ. ದೇವರ ಮೇಲಿನ ಪ್ರೀತಿಗಾಗಿ ದಾಸೋಹ ಕೇಂದ್ರಕ್ಕೆ ಬಂದು ತರಕಾರಿ ಕತ್ತರಿಸಿಕೊಟ್ಟು, ಭಕ್ತ ಸಮೂಹ ಪ್ರಸಾದ ತಯಾರಿಗೆ ಸಹಾಯ ಮಾಡುತ್ತಿದ್ದಾರೆ. ಇದನ್ನೂ ಓದಿ: ಶ್ರೀಗಳು ಇಲ್ಲದ ರಾತ್ರಿ ಕಳೆದ ಮಠದ ಮಕ್ಕಳು- ಒಬ್ಬರಿಗೆ ಒಬ್ಬರು ಆಸರೆಯಾಗಿ ಮಲಗಿದ್ರು

ಸಿದ್ದಗಂಗಾ ಮಠದಲ್ಲಿ ಒಟ್ಟು 10 ಕಡೆ ದಾಸೋಹ ವ್ಯವಸ್ಥೆ ನಡೆಯುತ್ತಿದ್ದು, ಹೊಸ ಮಠ ದಾಸೋಹ ಭವನ ಹಾಗೂ ಹೊಸ ಮಠದ ಶ್ರೀಗಳ ಕಚೇರಿಯ ಬಳಿ ಕೂಡ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಹೊಸ ಮಠದ ಹಿಂಭಾಗದಲ್ಲಿ 3 ಕಡೆ, ಕ್ಯಾತಸಂದ್ರ ಸರ್ಕಲ್, ಮಠದ ಹಿಂದಿನ ಗೇಟ್, ಬಂಡೇಪಾಳ್ಯ, ಶ್ರೀನಗರ ಕ್ರಾಸ್ ಹಾಗೂ ವಜ್ರಮಹೋತ್ಸವ ಕಟ್ಟಡದ ಬಳಿ ತಲಾ ಒಂದೊಂದರಂತೆ ಒಟ್ಟು 10 ಕಡೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ.

tmk dasoha 2

ಸಿದ್ದಗಂಗಾ ಮಠಕ್ಕೆ ಬಂದ ಭಕ್ತರು ಖಾಲಿ ಹೊಟ್ಟೆಯಲ್ಲಿ ಹೋಗಬಾರದೆಂದು ಅನ್ನದಾಸೋಹ 24 ಗಂಟೆಯಿಂದ ನಡೆಯುತ್ತಿದೆ. ಇವರೆಗೆ 2.5 ಲಕ್ಷ ಜನ ಅನ್ನ ದಾಸೋಹ ಸಹ ಪಡೆದಿದ್ದಾರೆ. ಉಪ್ಪಿಟ್ಟು, ಕೇಸರಿ ಬಾತ್, ಅನ್ನ, ಸಾಂಬರ್ ಸೇರಿದಂತೆ ಹಲವು ಪದಾರ್ಥಗಳು ಸಿದ್ಧವಾಗುತ್ತಲೇ ಇದೆ. ಸಿದ್ದಗಂಗಾ ಮಠದಲ್ಲಿ ಅಡವಿ ಶ್ರೀಗಳು ಆರಂಭಿಸಿದ ಅನ್ನ ದಾಸೋಹ ಪದ್ಧತಿ ನೂರಾರು ವರ್ಷದಿಂದ ನಡೆದುಕೊಂಡು ಬಂದಿದ್ದು, ಇಂದು ಕೂಡ ಮುಂದುವರಿದಿದೆ.  ಇದನ್ನೂ ಓದಿ:ಜೀವಿತಾವಧಿಯಲ್ಲಿ 5 ಬಾರಿ ವಿಮಾನ ಪ್ರಯಾಣ – ಸರಳತೆಗೆ ಮತ್ತೊಂದು ಹೆಸರೇ ‘ನಡೆದಾಡುವ ದೇವರು’

ಕೇವಲ ಸಿದ್ದಗಂಗಾ ಮಠದಲ್ಲಿ ಮಾತ್ರವಲ್ಲದೇ ತುಮಕೂರು ನಾಗರೀಕರ ವೇದಿಕೆಯಿಂದ ಉಚಿತ ಊಟ ಹಾಗೂ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಉಪಹಾರ ಮತ್ತು ಊಟವನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಒಟ್ಟು ಜಿಲ್ಲೆಯಲ್ಲಿ 60 ಕಡೆ ರೈಸ್ ಮಿಲ್ ಮಾಲೀಕರ ಸಂಘ ಊಟ, ಉಪಹಾರ ವ್ಯವಸ್ಥೆ ಕಲ್ಪಿಸಿಕೊಟ್ಟಿದೆ. ಹಾಗೆಯೇ ಜಿಲ್ಲೆಯ ಹಲವೆಡೆ ಹೋಟೆಲ್‍ಗಳ ಬಂದ್ ಹಿನ್ನಲೆ ಊಟ, ಉಪಹಾರಕ್ಕೆ ಸಮಸ್ಯೆಯಾಗದಂತೆ ನಾಗರೀಕರು ಹಾಗು ಸಂಘ, ಸಂಸ್ಥೆಗಳು ಕಾಳಜಿ ವಹಿಸಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಹಾಗೂ ಬಸ್ ನಿಲ್ದಾಣದ ಬಳಿ ಊಟ, ಉಪಹಾರ ವ್ಯವಸ್ಥೆ ಮಾಡಲಾಗಿದೆ.

https://www.youtube.com/watch?v=mxA9HE4qgJQ

https://www.youtube.com/watch?v=WTHN3QhN8Zg

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:devoteesfoodPublic TVShri shivakumara swamijisiddaganga mutttumkuruತುಮಕೂರುದಾಸೋಹಪಬ್ಲಿಕ್ ಟಿವಿಭಕ್ತಾಧಿಗಳುಶ್ರೀ ಶಿವಕುಮಾರ ಸ್ವಾಮೀಜಿಸಿದ್ದಗಂಗಾ ಮಠ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
3 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
3 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
3 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
4 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
4 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?