ಮಂತ್ರಾಲಯಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭೇಟಿ

Public TV
1 Min Read
rcr puneeth rajkumar collage copy

ರಾಯಚೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಪತ್ನಿ ಅಶ್ವಿನಿ ಜೊತೆ ಮಠಕ್ಕೆ ಆಗಮಿಸಿದ ಪುನೀತ್ ರಾಜಕುಮಾರ್ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಹಳ ದಿನಗಳಿಂದ ಮಂತ್ರಾಲಯಕ್ಕೆ ಬರಲು ಆಗಿರಲಿಲ್ಲ. ಈಗ ಫೆಬ್ರವರಿ 7ರಂದು ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾಯರ ಆಶೀರ್ವಾದ ಪಡೆಯಲು ಬಂದಿದ್ದೇನೆ. ಅಲ್ಲದೇ ಮಂತ್ರಾಲಯದಲ್ಲಿನ ರಾಜ್‍ಕುಮಾರ್ ಭವನದ ನವೀಕರಣ ಕಾರ್ಯ ಪೂರ್ಣಗೊಂಡಿದ್ದು, ಈಗ ಸಾರ್ವಜನಿಕರ ಉಪಯೋಗಕ್ಕೆ ಬರುತ್ತದೆ” ಎಂದು ಹೇಳಿದ್ದಾರೆ.

rcr puneeth rajkumar

ಇದೇ ವೇಳೆ ಪುನೀತ್ ರಾಜ್‍ಕುಮಾರ್ ಅವರಿಗೆ ಐಟಿ ದಾಳಿ ಬಗ್ಗೆ ಪ್ರಶ್ನಿಸಿದ್ದಾಗ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಬಳಿಕ ಫೆಬ್ರವರಿ 8, 9 ಹಾಗೂ 10ರಂದು ನಡೆಯುವ ಸುಜಯೀಂದ್ರ ತೀರ್ಥರ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸ್ವಾಮಿಗಳು ಆಹ್ವಾನ ನೀಡಿದ್ದಾರೆ ಎಂದು ಪುನೀತ್ ಹೇಳಿದ್ದಾರೆ. ಈ ವೇಳೆ ಪುನೀತ್ ರಾಜಕುಮಾರ್ ಅವರನ್ನು ನೋಡಲು ಬಂದ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು. ಇದರಿಂದಾಗಿ ಅಲ್ಲಿ ಕೆಲ ಹೊತ್ತು ನೂಕು ನುಗ್ಗಲು ಉಂಟಾಯಿತು.

rcr puneeth rajkumar 4

ನಟಸಾರ್ವಭೌಮ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶನ ಮಾಡಿದ್ದು, ರಾಕ್‍ಲೈನ್ ವೆಂಕಟೇಶ್ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಅವರಿಗೆ ನಾಯಕಿಯಾಗಿ ಡಿಂಪಲ್ ಬೆಡಗಿ ರಚಿತಾ ರಾಮ್ ಹಾಗೂ ಅನುಪಮ ಪರಮೇಶ್ವರನ್ ನಟಿಸಿದ್ದಾರೆ. ಈ ಹಿಂದೆ ಪವನ್ ಒಡೆಯರ್, ಪುನೀತ್ ರಾಜ್‍ಕುಮಾರ್ ಅವರ `ರಣವಿಕ್ರಮ’ ಚಿತ್ರವನ್ನು ನಿರ್ದೇಶಿಸಿದ್ದರು.

https://www.youtube.com/watch?v=qZ-3tkezU3c&feature=youtu.be

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *