Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ತಂದೆಯವರೇ ಪಿಎಂ ಸ್ಥಾನ ಬಿಟ್ಟು ಬಂದಿರುವಾಗ ಮಗನಾಗಿ ನಾನು ಸಿಎಂ ಸ್ಥಾನ ಬಿಡಲು ಹಿಂದೇಟು ಹಾಕ್ತೀನಾ: ಎಚ್‍ಡಿಕೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಂದೆಯವರೇ ಪಿಎಂ ಸ್ಥಾನ ಬಿಟ್ಟು ಬಂದಿರುವಾಗ ಮಗನಾಗಿ ನಾನು ಸಿಎಂ ಸ್ಥಾನ ಬಿಡಲು ಹಿಂದೇಟು ಹಾಕ್ತೀನಾ: ಎಚ್‍ಡಿಕೆ

Bengaluru City

ತಂದೆಯವರೇ ಪಿಎಂ ಸ್ಥಾನ ಬಿಟ್ಟು ಬಂದಿರುವಾಗ ಮಗನಾಗಿ ನಾನು ಸಿಎಂ ಸ್ಥಾನ ಬಿಡಲು ಹಿಂದೇಟು ಹಾಕ್ತೀನಾ: ಎಚ್‍ಡಿಕೆ

Public TV
Last updated: January 30, 2019 7:50 pm
Public TV
Share
5 Min Read
HDD HDK
SHARE

– ಮತ್ತೆ ರಾಜೀನಾಮೆ ಪ್ರಸ್ತಾಪ ಮಾಡಿದ ಸಿಎಂ
– ಕಾಂಗ್ರೆಸ್‍ನವರು ಒತ್ತಡ ತಂದು ಕೆಲಸ ಮಾಡಿಸಿಕೊಂಡಿದ್ದಾರೆ
– ಜನರಿಗೆ ನಾನು ಏನು ಅಂತ ಗೊತ್ತಿದ್ದರೂ ಬೈತಾರೆ
– ಉಸಿರಾಟಕ್ಕೂ ಸಮಯವಿಲ್ಲದೆ ಕೆಲಸ ಮಾಡುತ್ತಿದ್ದೇನೆ

ಬೆಂಗಳೂರು: ಜನರಿಗೆ ಮೋಸ ಮಾಡಿ ನಾನು ಏನು ಸಾಧನೆ ಮಾಡಲಿ? ಸಿಎಂ ಸ್ಥಾನ ಬಿಡಲು ನನಗೆ ಕಷ್ಟ ಏನಿಲ್ಲ ಎಂದು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿ ಶಾಶ್ವತವಾಗಿ ಇರೋದಕ್ಕೆ ಆಗುತ್ತಾ? 16 ಸೀಟು ಪಡೆದು ನನ್ನ ತಂದೆಯವರು ಪ್ರಧಾನಿಯಾಗಿದ್ದರು. ಬಳಿಕ ಸುಲಭವಾಗಿ ತಂದೆ ಸ್ಥಾನವನ್ನು ಬಿಟ್ಟು ಬಂದಿದ್ದಾರೆ. ಅಂತವರ ಮಗನಾಗಿ ಸಿಎಂ ಸ್ಥಾನ ಬಿಡಲು ನಾನು ಹಿಂದೇಟು ಹಾಕುತ್ತೇನಾ ಎಂದು ಪ್ರಶ್ನಿಸಿದರು. ಇದನ್ನು ಓದಿ: ಮೈತ್ರಿ ಸರ್ಕಾರದ Chemistry – Physics ಸರಿಯಾಗಿದೆ, ಇನ್ನೇನಿದ್ರೂ Mathematics ಮಾತ್ರ ಆಗ್ಬೇಕು: ಸಿದ್ದರಾಮಯ್ಯ

JDS Samavesha

ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಬೆಂಗಳೂರಿನಲ್ಲಿ 12 ವರ್ಷಗಳಿಂದ ನಿಂತಿದ್ದ ಕೆಲಸವನ್ನು ನಾನು ಪ್ರಾರಂಭ ಮಾಡಿದ್ದೇನೆ. ಎಷ್ಟು ದಿನ ಇಂತಹ ಮಾತು ನಾನು ಸಹಿಸಿಕೊಳ್ಳಲಿ. ಔಟರ್ ರಿಂಗ್ ರೋಡ್‍ಗೆ ಚಾಲನೆ ಕೊಟ್ಟಿದ್ದೇನೆ. ಭೂಸ್ವಾಧೀನಕ್ಕೆ 4,500 ಕೋಟಿ ರೂ. ನೀಡಿರುವೆ. ಇದು ನಾನು ಬೆಂಗಳೂರಿಗೆ ನೀಡಿದ ಕೊಡುಗೆ. ಸ್ವಲ್ಪ ಸಮಯದ ಹಿಂದೆ ನಡೆದಿದ್ದ ಕ್ಯಾಬಿನೇಟ್ ಸಭೆಯಲ್ಲಿ ಬೆಂಗಳೂರು ಕ್ರೀಯಾ ಯೋಜನೆಗೆ 8 ಸಾವಿರ ಕೋಟಿ ರೂ. ಕೊಟ್ಟು ಬಂದಿದ್ದೇನೆ ಎಂದು ತಿಳಿಸಿದರು.

ಸರ್ಕಾರದಲ್ಲಿ ಕೆಲಸವಾಗಿಲ್ಲ ಅಂತ ಪಾಪ ಯಾರೋ ಒಬ್ಬರು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ 1 ಲಕ್ಷ ಕೋಟಿ ರೂ. ಯೋಜನೆ ಕೊಟ್ಟಿರುವುದು ಅವರಿಗೆ ಗೊತ್ತಿಲ್ಲವೆಂದು ಅನಿಸುತ್ತದೆ ಎಂದು ಸಿಎಂ ಶಾಸಕ ಎಸ್.ಟಿ.ಸೋಮಶೇಖರ್ ಹೆಸರನ್ನು ಹೇಳದೇ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ST SOMASHEKHAR 1

ನಾವು 10 ವರ್ಷ ಯಾವುದೇ ಅಧಿಕಾರ ಇಲ್ಲದೇ ಇದ್ದರೂ ನಮ್ಮ ಪಕ್ಷವನ್ನು ಬೆಳೆಸಿದ್ದೀರಿ. ಲಕ್ಷಾಂತರ ಜನರು ಪಕ್ಷ ಉಳಿಸಿದ್ದಾರೆ ಎಂದು ಕಾರ್ಯಕರ್ತರನ್ನು ಪ್ರೇರೆಪಿಸಿದ ಸಿಎಂ, ಜೆಪಿ ಭವನದ ಸಭೆಯಲ್ಲಿ ನಾನು ಕಣ್ಣೀರು ಹಾಕಿದೆ. ಇವತ್ತು ನನ್ನ ಮನಸ್ಸಿನಲ್ಲಿ ನೋವಿದೆ. ನೋವು ಮರೆತು ಜನರಿಗೆ ಅನುಕೂಲ ಮಾಡಲು ಶ್ರಮ ಹಾಕುತ್ತಿದ್ದೇನೆ. ಇದನ್ನು ಯಾರು ಮರೆಯಬೇಡಿ ಎಂದು ಹೇಳಿದರು. ಇದನ್ನು ಓದಿ: ಮಹಾರಾಷ್ಟ್ರಕ್ಕೆ 4 ಸಾವಿರ ಕೋಟಿ, ರಾಜ್ಯಕ್ಕೆ 900 ಕೋಟಿ ರೂ. ಬರ ಪರಿಹಾರ- ಕೇಂದ್ರದ ನಿರ್ಧಾರಕ್ಕೆ ಸಿಎಂ ಕಿಡಿ

ಸಮ್ಮಿಶ್ರ ಸರ್ಕಾರದಲ್ಲಿ ನಾನು ಎಷ್ಟು ಕಷ್ಟ ಅನುಭವಿಸುತ್ತಿದ್ದೇನೆ ಎನ್ನುವುದು ನನಗೆ ಗೊತ್ತು. ರೈತರ ಸಾಲಮನ್ನಾ ಮಾಡುವ ಚಾಲೆಂಜ್ ತಗೊಂಡರೂ ಜನರು ನನ್ನನ್ನು ನಂಬುತ್ತಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಸಾಲಮನ್ನಾ ಮಾಡುವ ಆಸೆ ತೊರಿಸಿ, ಕೈಬಿಟ್ಟರು. ನಾನು ನೀಡಿದ ಭರವಸೆಯಂತೆ ಜನವರಿ 25ರ ಒಳಗೆ 2 ಲಕ್ಷ ರೈತರ ಖಾತೆಗೆ ಸಾಲಮನ್ನಾ ಹಣ ಹಾಕಿದ್ದೇನೆ ಎಂದು ಪ್ರಧಾನಿ ಮೋದಿ ಅವರಿಗೆ ಟಾಂಗ್ ಕೊಟ್ಟರು.

Congress JDS 6

ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ ಸಾಲಮನ್ನಾದ 3,800 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದೇನೆ. ಸಹಕಾರಿ, ರಾಷ್ಟ್ರೀಯ ಬ್ಯಾಂಕ್ ಸಾಲಮನ್ನಾಗೆ 900 ಕೋಟಿ ರೂ. ಇಟ್ಟಿದ್ದೇನೆ. 2019ರ ಬಜೆಟ್‍ನಲ್ಲಿ 13 ಸಾವಿರ ಕೋಟಿ ರೂ. ಸಾಲಮನ್ನಾಗೆ ಕೊಡುತ್ತಿದ್ದೇನೆ. ಜೊತೆಗೆ ಮುಂದಿನ ಬಜೆಟ್‍ನಲ್ಲೇ ಸಂಪೂರ್ಣ ಸಾಲಮನ್ನಾ ಹಣ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.

ಈ ಬಜೆಟ್‍ನಲ್ಲಿ 44 ಲಕ್ಷ ರೈತರಿಗೆ ಸಾಲಮನ್ನಾ ಪತ್ರ ಮನೆಗೆ ಕಳುಹಿಸುತ್ತೇನೆ. ನನ್ನನ್ನು ದ್ವೇಷಿಸಬೇಡಿ. ನನ್ನನ್ನು ಮರೆಯಬೇಡಿ. ನನ್ನ ಮೇಲೆ ಕನಿಕರ ಇಲ್ಲವೇ ಎಂದು ಸಿಎಂ ಕಾರ್ಯಕರ್ತರಲ್ಲಿ ಕೇಳಿಕೊಂಡರು. ಇದನ್ನು ಓದಿ: ಕಾಂಗ್ರೆಸ್‍ನವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ – ಸಿದ್ದರಾಮಯ್ಯ ವಿರುದ್ಧ ದೇವೇಗೌಡ ಕಿಡಿ

ಸರ್ಕಾರಕ್ಕೆ ನಿತ್ಯವೂ ಗಡುವು ನೀಡುತ್ತಿದ್ದಾರೆ. ಸಂಕ್ರಾಂತಿ, ರಾಜ್ಯೋತ್ಸವಕ್ಕೆ ಡೆಡ್ ಲೈನ್ ಕೊಟ್ಟರು. ಈಗ ಫೆಬ್ರವರಿ 6 ಅವಿಶ್ವಾಸ ನಿರ್ಣಯ ಅಂತಿದ್ದಾರೆ. ಹೀಗೆ ಸುದ್ದಿ ಬಂದರೆ ನಾನು ಹೇಗೆ ಉತ್ತಮ ಸರ್ಕಾರ ಕೊಡಲು ಸಾಧ್ಯ ಎಂದು ಅಸಮಾಧಾನವನ್ನು ಹೊರಹಾಕಿದರು.

H.D.Deve gowda

ಎಚ್.ಡಿ.ದೇವೇಗೌಡ ಅವರ ವಿರುದ್ಧವಾಗಿ 2006ರಲ್ಲಿ ನಾನು ಸರ್ಕಾರ ಮಾಡಿಬಿಟ್ಟೆ. ಆಗ ನಿಗಮ-ಮಂಡಳಿ ಮಾಡಿರಲಿಲ್ಲ. ಈಗ ಕಾಂಗ್ರೆಸ್‍ನವರು ನನ್ನ ಮೇಲೆ ಒತ್ತಡ ತಂದು ಕೆಲಸ ಮಾಡಿಸಿಕೊಂಡಿದ್ದಾರೆ. 2006ರಲ್ಲಿ ಆಗಿರುವ ತಪ್ಪನ್ನು ಮತ್ತೆ ಮಾಡಲ್ಲ. ಆದಷ್ಟು ಬೇಗ ನಿಗಮ-ಮಂಡಳಿ ನೇಮಕ ಮಾಡುತ್ತೇವೆ ಎಂದು ತಿಳಿಸಿದರು.

ರೈತರ ಅಭಿವೃದ್ಧಿ ನಿಟ್ಟಿನಲ್ಲಿ ದಿನದ 24 ಗಂಟೆಗಳ ಕಾಲ ಚಿಂತನೆ ಮಾಡುತ್ತೇನೆ. ಆಟೋ ಚಾಲಕರನ್ನು ವಿಧಾನಸೌಧದಕ್ಕೆ ಕರೆಸಿ ಕಷ್ಟ ಕೇಳಿದ ಮೊದಲ ಸಿಎಂ ನಾನು. ಮುಖ್ಯಮಂತ್ರಿ ಸ್ಥಾನದಲ್ಲಿ ಅಂಟಿಕೊಂಡು ನಾನು ಕೆಲಸ ಮಾಡುತ್ತಿಲ್ಲ. ಬಜೆಟ್‍ನಲ್ಲಿ ಎಲ್ಲಾ ವಿಷಯ ತಿಳಿಸುತ್ತೇನೆ. ಜನರಿಗೆ ನಾನು ಏನು ಅಂತ ಗೊತ್ತಿದ್ದರೂ ಬೈತಾರೆ. ಮಹಿಳೆಯರು ಮದ್ಯಪಾನ ನಿಷೇಧ ಮಾಡಿ ಅಂತ ಪ್ರತಿಭಟನೆ ಮಾಡುತ್ತಿದ್ದಾರೆ. 2006ರಲ್ಲಿ ಸಾರಾಯಿ ನಿಷೇಧ ಮಾಡಿದ್ದು ಇದೇ ಕುಮಾರಸ್ವಾಮಿ ಇದು ನೆನಪಿರಲಿ ಎಂದು ಹೇಳಿದರು.

narendra modi

ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಜಾರಿ ಮಾಡಿದ ಅಂಶವನ್ನು ಇಂದಿನ ಕೇಂದ್ರ ಸರ್ಕಾರ ಒಂದೊಂದಾಗಿ ಮೊಟಕುಗೊಳಿಸುತ್ತಿದೆ. ಯಾವುದೇ ಯೋಜನೆ ಜಾರಿಗೆ ತರಬೇಕಾದರೆ ನಾವು ಕೇಂದ್ರದ ಬಳಿ ಭಿಕ್ಷೆ ಬೇಡಬೇಕಾಗಿದೆ. ಬರ ಪರಿಹಾರದ ಮೊತ್ತ 900 ಕೋಟಿ ರೂ. ಮಾತ್ರ ಕೊಟ್ಟಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು.

ಬರ ಅಧ್ಯಯನದ ನೆಪದಲ್ಲಿ ಅಧಿಕಾರಿಗಳನ್ನು ಬೈದು ಡ್ರಾಮಾ ಮಾಡಿದ್ದಾರೆ. 16 ಜನ ಸಂಸದರನ್ನು ರಾಜ್ಯದ ಜನ ಕೊಟ್ಟಿದ್ದಾರೆ. ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಹೆಚ್ಚು ಅನುದಾನ ಬಿಡುಗಡೆ ಮಾಡುವಂತೆ ಕೇಳಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

CTD BSY 2

ಪ್ರಧಾನಿ ಮೋದಿ ಬಳಿ ಬರ ಪರಿಹಾರ ಹಣ ಕೇಳುವ ತಾಕತ್ತು ರಾಜ್ಯ ಬಿಜೆಪಿ ಸಂಸದರಿಗೆ ಇಲ್ಲ. ಈ ಸರ್ಕಾರದ ಬಗ್ಗೆ ಮಾತನಾಡುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಂತಹ ಡೋಂಗಿ ರಾಜಕಾರಣ ನಾನು ಮಾಡಿಲ್ಲ. ಸಭೆ ಹೆಸರಲ್ಲಿ ರೆಸಾರ್ಟಿನಲ್ಲಿ ಸಂಕ್ರಾಂತಿ ಮಾಡಿದರು. ಆಗ ಜನರ ಕಷ್ಟ ಅರ್ಥ ಆಗಿಲ್ವಾ? ನಿಮಗೆ ಜನರ ಹಾಗೂ ರೈತರ ಬಗ್ಗೆ ಕಾಳಜಿ ಇದೆಯಾ ಎಂದು ಗುಡುಗಿದರು.

ನರೇಗಾದ ಹಣವನ್ನು ಕೇಂದ್ರ ಸರ್ಕಾರ ನೀಡಿಲ್ಲ. ಹೀಗಿದ್ದರೂ ಬಿ.ಎಸ್.ಯಡಿಯೂರಪ್ಪ ಅವರು ಕೆಲಸ ಆಗಿಲ್ಲ ಅಂತಾರೆ. ರಾಜ್ಯದ ಜನತೆ ಸರ್ಕಾರದ ಖಜಾನೆ ಸುಭದ್ರವಾಗಿಡಲು ತೆರಿಗೆ ಕೊಡುತ್ತಿದ್ದಾರೆ. ನನ್ನ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ನಾನು ಸಾಲಮನ್ನಾಗೆ ಮಾತ್ರ ಸೀಮಿತವಾಗಿಲ್ಲ ಎಂದು ಗರಂ ಆದರು.

ನಾನು ನಾಡಿನ ಜನತೆಗೆ ದ್ರೋಹ ಮಾಡಿದರೆ ಒಂದು ಕ್ಷಣ ಈ ಸ್ಥಾನದಲ್ಲಿ ಇರುವುದಿಲ್ಲ. ಪ್ರಧಾನಿ ಸ್ಥಾನ ಬಿಟ್ಟವರಿಗೆ ಸಿಎಂ ಸ್ಥಾನ ಬಿಡುವುದು ಕಷ್ಟವಲ್ಲ. ನಾನು ರಾಜೀನಾಮೆ ಕೊಡುತ್ತೇನೆ ಅಂತ ಹೇಳಿದ್ದು ನಿಜ. ಸರ್ಕಾರದ ಅಭಿವೃದ್ಧಿ ಕುರಿತು ಚರ್ಚೆ ಮಾಡದೆ ಕೆಲವರು ಮಾತನಾಡುತ್ತಿದ್ದಾರೆ ಎಂದು ಹೇಳಿದರು.

https://www.youtube.com/watch?v=VaviJv8_o-k

ಮೈತ್ರಿ ಸರ್ಕಾರದಲ್ಲಿ ಹಲವಾರು ಯೋಜನೆ ತರುತ್ತಿದ್ದೇವೆ. ಜನರು ನನ್ನ ಮೇಲೆ ಅನುಮಾನ ಪಡಬೇಡಿ. ಉಸಿರಾಟಕ್ಕೂ ಸಮಯವಿಲ್ಲದೆ ಕೆಲಸ ಮಾಡುತ್ತಿದ್ದೇನೆ. ನಾನು ನಿಮ್ಮ ಜೊತೆ ಮಾತನಾಡದೇ ಇರಬಹುದು. ಆದರೆ ನಿಮ್ಮ ಮನವಿಗೆ ನಾನು ಸ್ಪಂದನೆ ನೀಡದೆ ಉಳಿದಿಲ್ಲ. ಮುಂದಿನ ಲೋಕಸಭೆಯಲ್ಲಿ ಜೆಡಿಎಸ್‍ಗೆ 10 ಸ್ಥಾನಕೊಟ್ಟರೆ ಭಾರತ ಭೂಪಟದಲ್ಲಿ ಕರ್ನಾಟಕದ ಶಕ್ತಿ ಬೆಳಗುತ್ತದೆ ಎಂದು ಹೇಳಿದರು.

ಯಾವುದೇ ಅಸೂಯೆ ಇಲ್ಲದೆ ದೇವೇಗೌಡರನ್ನು ದೆಹಲಿಗೆ ಕಳಿಹಿಸಿ. ನನ್ನ ನಿಮ್ಮ ಸಂಬಂಧವನ್ನು ಅನುಮಾನದಿಂದ ನೋಡಬೇಡಿ. ನಾನು ನಿಮ್ಮ ಮನೆಯ ಮಗ. ನನ್ನ ಬೆಳೆಸಿದವರು ನೀವು. ನಿಮ್ಮ ಮನೆ ಮಗನನ್ನು ಸಂಶಯದಲ್ಲಿ ನೋಡಬೇಡಿ ಎಂದು ಮನವಿ ಮಾಡಿಕೊಂಡರು.

https://www.youtube.com/watch?v=-cppbuB8d_U

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:bjpCM Kumaraswamycongressformer CM Siddaramaiahjdsprime minister narendra modiPublic TVಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಬಿಜೆಪಿಮಾಜಿ ಸಿಎಂ ಸಿದ್ದರಾಮಯ್ಯಸಮಾವೇಶಸಿಎಂ ಕುಮಾರಸ್ವಾಮಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
35 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
40 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
41 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
46 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?