ಸಂಧಾನದ ಚಾನ್ಸೇ ಇಲ್ಲ- ಶಾಸಕ ಆನಂದ್ ಸಿಂಗ್ ಮೊದಲ ಪ್ರತಿಕ್ರಿಯೆ

Public TV
1 Min Read
ANAND SINGH copy

ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಹಲ್ಲೆಗೊಳಗಾಗಿರೋ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ಕೊಂಚ ಚೇತರಿಸಿಕೊಳ್ಳುತ್ತಿದ್ದು, ಸಂಧಾನದ ಚಾನ್ಸೇ ಇಲ್ಲ ಎಂದು ಹೇಳಿದ್ದಾರೆ.

ಶುಕ್ರವಾರ ಅಪೋಲೋ ಆಸ್ಪತ್ರೆಯಿಂದ ನಾರಾಯಣ ನೇತ್ರಾಲಯಕ್ಕೆ ಹೋಗುವ ಮುನ್ನ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸದ್ಯ ನಾನು ಚೇತರಿಸಿಕೊರ್ಳಳುತ್ತಿದ್ದೇನೆ. ಆದ್ರೆ ಪೂರ್ತಿಯಾಗಿ ಚೇತರಿಸಿಕೊಳ್ಳಲು ಇನ್ನು 15-20 ದಿನ ಬೇಕಾಗಬಹುದು. ತುಂಬಾ ಕ್ರ್ಯಾಕ್ ಹಾಗೂ ಎದೆಯ ಭಾಗಕ್ಕೆ ನೋವಾಗಿದೆ ಎಂದು ಹೇಳಿದ್ರು.

ANAND SINGH 1 copy

ಇದೇ ವೇಳೆ ಕಂಪ್ಲಿ ಗಣೇಶ್ ಬಗ್ಗೆ ಕೇಳಿದಾಗ, ಅವರು ಎಲ್ಲಿದ್ದಾರೋ ಗೊತ್ತಿಲ್ಲ, ಕಾನೂನು ಪ್ರಕಾರ ಕೈಗೊಳ್ಳಲಿ. ಸಂಧಾನದ ಚಾನ್ಸೇ ಇಲ್ಲ ಎಂದು ಸ್ಪಷ್ಟಪಡಿಸಿದ್ರು. ಇದನ್ನೂ ಓದಿ:  12 ದಿನವಾದ್ರೂ ಅರೆಸ್ಟ್ ಆಗಿಲ್ಲ ಶಾಸಕ ರೌಡಿ ಗಣೇಶ್ – ಇತ್ತ ಆನಂದ್ ಸಿಂಗ್ ಸಂಧಾನಕ್ಕೆ ಜಮೀರ್ ಸರ್ವಯತ್ನ

ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದಿದ್ದರು. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿದ ನಂತರ ಕೈ ಶಾಸಕರು ಪಾರ್ಟಿ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು, ಶಾಸಕ ಗಣೇಶ್ ಕೋಪಗೊಂಡು ಬಾಟಲ್ ನಿಂದ ಆನಂದ್ ಸಿಂಗ್ ತಲೆಗೆ ಹೊಡೆದಿದ್ದಾರೆ. ಪರಿಣಾಮ ಆನಂದ್ ಸಿಂಗ್ ಅವರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ANAND SIGH 2 copy

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *