ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರಿನ ಪ್ರವಾಸಿ ತಾಣಗಳನ್ನು ಇನ್ನು ಮುಂದೆ ಡಬಲ್ ಡೆಕ್ಕರ್ ಬಸ್ಸಿನಲ್ಲಿ ವೀಕ್ಷಣೆ ಮಾಡಬಹುದು. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್ಟಿಡಿಸಿ) ವತಿಯಿಂದ ಮೈಸೂರಿನಲ್ಲಿ ಲಂಡನ್ ಬಿಗ್ ಬಸ್ ಮಾದರಿಯ 6 ಡಬಲ್ ಡೆಕ್ಕರ್ ತೆರೆದ ಬಸ್ ಸೇವೆ ಆರಂಭಿಸಲು 5 ಕೋಟಿ ರೂ. ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಪ್ರವಾಸೋದ್ಯಮಕ್ಕೆ ಸಿಕ್ಕಿದ್ದು ಏನು?
ಬಾದಾಮಿಯನ್ನು ವಿಶ್ವವಿಖ್ಯಾತ ಪ್ರವಾಸಿ ತಾಣವನ್ನಾಗಿ ಮತ್ತು ಕರಕುಶಲ ಮಾರುಕಟ್ಟೆಯನ್ನಾಗಿ ಅಭಿವೃದ್ಧಿ ಪಡಿಸಲು 25 ಕೋಟಿ ರೂ. ಅನುದಾನ.
ಪ್ರವಾಸಿಗರನ್ನು ಆಕರ್ಷಿಸಲು ‘ಕರ್ನಾಟಕ ಅಂತರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶನ’ ಆಯೋಜನೆಗೆ 2 ಕೋಟಿ ರೂ. ಅನುದಾನ. ಹಂಪಿಯಲ್ಲಿ ‘ಹಂಪಿ ವ್ಯಾಖ್ಯಾನ ಕೇಂದ್ರ’ ಹಾಗೂ ವಿಜಯಪುರದಲ್ಲಿ ‘ವಿಜಯಪುರ ಪ್ರವಾಸೋದ್ಯಮ ವ್ಯಾಖ್ಯಾನ ಕೇಂದ್ರ ವನ್ನು ಸ್ಥಾಪಿಸಲು ತಲಾ 1 ಕೋಟಿ ರೂ. ಅನುದಾನ.
ಪಣಂಬೂರು ಮತ್ತು ಸಸಿಹಿತ್ಲುವಿನಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ 7 ಕೋಟಿ ರೂ. ಅನುದಾನ. ಇಲಾಖೆಯ ಒಟ್ಟು 834 ಸಂರಕ್ಷಿತ ಸ್ಮಾರಕಗಳಲ್ಲಿ, 600 ಸ್ಮಾರಕಗಳ ಸಮೀಕ್ಷೆ ಹಾಗೂ ಸಂರಕ್ಷಣೆಗೆ ಕ್ರಮ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv