ನಾಳೆಯೂ ಸದನದಲ್ಲಿ ಪ್ರತಿಭಟನೆಗೆ ನಿರ್ಧಾರ: ಶ್ರೀನಿವಾಸ ಪೂಜಾರಿ

Public TV
1 Min Read
vidhan parishad

ಬೆಂಗಳೂರು: ಆಡಳಿತ ಪಕ್ಷ ಹಾಗೂ ಬಿಜೆಪಿ ನಾಯಕರ ಗಲಾಟೆಯಿಂದಾಗಿ ವಿಧಾನ ಪರಿಷತ್ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಕಲಾಪದಿಂದ ಹೊರಬಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು, ಶುದ್ಧ ನೀರಿನ ಘಟಕಗಳ ಅಳವಡಿಕೆಯಲ್ಲಿ ಕೋಟ್ಯಂತರ ಹಣ ದುರ್ಬಳಕೆಯಾಗಿದೆ. ಈ ಕುರಿತು ತನಿಖೆಗೆ ನಡೆಸಲು ಸದನ ಸಮಿತಿಗೆ ಕೊಡದಿದ್ದರೆ ನಾಳೆಯೂ ಸದನದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರಿಸುತ್ತೇವೆ ಎಂದರು.

ಶುದ್ಧ ನೀರಿನ ಘಟಕಗಳ ಅವ್ಯವಹಾರದ ಬಗ್ಗೆ ತನಿಖೆಗೆ ಕಲಾಪದಲ್ಲಿ ಬಿಜೆಪಿ ಒತ್ತಾಯಿಸಿದೆ. ಆದರೆ ಸರ್ಕಾರ ತನಿಖೆಗೆ ಒಪ್ಪಿಸಲು ಹಿಂದೇಟು ಹಾಕುತ್ತಿದೆ. ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ಮಾಣವಾದ ಕೆಲವೇ ದಿನಗಳಲ್ಲಿ ಹಾಳಾಗಿವೆ. ಜನರಿಗೆ ಕುಡಿಯಲು ನೀರು ಸಿಗುತ್ತಿಲ್ಲ. ಈ ಕುರಿತು ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

Krishna Byre Gowda

ಇದಕ್ಕೂ ಮುನ್ನ ಕಲಾಪದಲ್ಲಿ ಬಿಜೆಪಿ ಸದಸ್ಯರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣಭೈರೇಗೌಡ ಅವರು, ಬೆಂಗಳೂರು ಭಾಗದಲ್ಲಿ ಪಂಚಾಯತಿ ಮಟ್ಟದಲ್ಲಿ ನೀರಿನ ಘಟಕಗಳ ನಿರ್ವಹಣೆ ಮಾಡಲಾಗುತ್ತಿದೆ. ಆದರೆ ಬೇರೆ ಜಿಲ್ಲೆಯಲ್ಲಿ ಆಗುತ್ತಿಲ್ಲ. ಹೀಗಾಗಿ ಪ್ರತ್ಯೇಕ ಏಜೆನ್ಸಿ ಮೂಲಕ ಶುದ್ಧ ನೀರು ಘಟಕ ನಿರ್ವಹಣೆಗೆ ಕ್ರಮವಹಿಸಿದ್ದೇವೆ. ಈ ಕುರಿತು ಆದಷ್ಟು ಬೇಗ ನಿರ್ಧಾರ ಮಾಡುತ್ತೇವೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಟೆಕ್ನಿಕಲ್ ಕಮಿಟಿ ನೇಮಕ ಮಾಡಲಾಗಿದೆ. ಆ ವರದಿ ಬಂದ ಮೇಲೆ ಮುಂದಿನ ಕ್ರಮಕ್ಕೆ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಆದರೆ ಬಿಜೆಪಿ ಸದಸ್ಯರು ಇದಕ್ಕೆ ಒಪ್ಪದೆ ಪ್ರತಿಭಟನೆ ಮುಂದುವರಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *