Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಯುಪಿಎಗೆ ಹೋಲಿಸಿದರೆ ಎನ್‍ಡಿಎ ರಫೇಲ್ ಡೀಲ್ ಶೇ.2.8 ರಷ್ಟು ಅಗ್ಗ: ಸಿಎಜಿ

Public TV
Last updated: February 13, 2019 2:31 pm
Public TV
Share
3 Min Read
rafale jet
SHARE

ನವದೆಹಲಿ: ಯುಪಿಎ ಮಾಡಿಕೊಂಡಿದ್ದ ರಫೇಲ್ ಖರೀದಿ ಒಪ್ಪಂದಕ್ಕೆ ಹೋಲಿಕೆ ಮಾಡಿದರೆ ಎನ್‍ಡಿಎ ಮಾಡಿಕೊಂಡಿರುವ ಒಪ್ಪಂದ ಶೇ.2.8 ಎಷ್ಟು ಅಗ್ಗ ಎಂದು ಮಹಾಲೇಖಪಾಲರ ವರದಿ(ಸಿಎಜಿ) ಹೇಳಿದೆ.

ಮೋದಿ ಸರ್ಕಾರದ ಅತಿ ದೊಡ್ಡ ಹಗರಣ ಎಂದು ಕಾಂಗ್ರೆಸ್ ಆರೋಪಿಸುತ್ತಿರುವ ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಸಿಎಜಿ ವರದಿ ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗಿದೆ. 2007ರಲ್ಲಿ ಯುಪಿಎ ಪ್ರಸ್ತಾಪಿಸಿದ್ದ 126 ರಫೇಲ್ ವಿಮಾನ ಖರೀದಿಗೆ ಹೋಲಿಸಿದರೆ ಎನ್‍ಡಿಎ ಸರ್ಕಾರ 2016ರಲ್ಲಿ 36 ವಿಮಾನ ಖರೀದಿ ಸಂಬಂಧ ಮಾಡಿಕೊಂಡಿರುವ ಒಪ್ಪಂದ ಶೇ.2.8 ರಷ್ಟು ಅಗ್ಗವಾಗಿದೆ. ಅಷ್ಟೇ ಅಲ್ಲದೇ ಈ ಹೊಸ ಒಪ್ಪಂದದಿಂದಾಗಿ ಭಾರತಕ್ಕೆ ಶೇ.17.08 ರಷ್ಟು ಹಣ ಉಳಿತಾಯವಾಗಿದೆ ಎನ್ನುವ ಅಂಶ ಈ ವರದಿಯಲ್ಲಿದೆ. ಈ ವರದಿ ಮಂಡನೆಯಾಗುತ್ತಿದ್ದಂತೆ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಗದ್ದಲ ಎಬ್ಬಿಸಿವೆ.

It cannot be that the Supreme Court is wrong, the CAG is wrong and only the dynast is right.

— Arun Jaitley (@arunjaitley) February 13, 2019

 

ಮಹಾಲೇಖಪಾಲ ರಾಜೀವ್ ಮಹರ್ಷಿ ಅವರು ರಫೇಲ್ ಖರೀದಿ ಒಪ್ಪಂದ ನಡೆಸುವಾಗ ಅವರು ಹಣಕಾಸು ಕಾರ್ಯದರ್ಶಿಯಾಗಿದ್ದರು. ಇವರ ಅವಧಿಯಲ್ಲಿ ಯುಪಿಎ ಒಪ್ಪಂದ ರದ್ದಾಗಿ 36 ವಿಮಾನ ಖರೀದಿಯ ವ್ಯವಹಾರ ನಡೆದಿತ್ತು. ರಫೇಲ್ ಮಾತುಕತೆಯಲ್ಲಿ ಮಹರ್ಷಿ ಅವರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಟೀಕೆಗೆ ಅರುಣ್ ಜೇಟ್ಲಿ ತಿರುಗೇಟು ನೀಡಿದ್ದು, ಸುಪ್ರೀಂ ಕೋರ್ಟ್ ತಪ್ಪು, ಸಿಎಜಿ ವರದಿಯೂ ತಪ್ಪು. ಅವರಿಗೆ ರಾಜವಂಶ ಮಾತ್ರ ಸರಿ, ಸತ್ಯಮೇವ ಜಯತೇ, ಕೊನೆಗೂ ಸತ್ಯವೇ ಗೆದ್ದಿದೆ. ನಮ್ಮ ರಫೇಲ್ ಒಪ್ಪಂದ ಕಡಿಮೆ ಬೆಲೆ, ವೇಗವಾಗಿ ವಿತರಣೆ, ಉತ್ತಮ ನಿರ್ವಹಣೆ ಎಂದು ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ:  18 ವರ್ಷ ಕಳೆದರೂ ಸಿತಾರಾ ವಿಮಾನ ಪೂರೈಸದ ಎಚ್‍ಎಎಲ್

rafale

ಸುಪ್ರೀಂ ತೀರ್ಪಿನಲ್ಲಿ ಏನಿತ್ತು?
ರಫೇಲ್ ಖರೀದಿ ಒಪ್ಪಂದದಲ್ಲಿ ಸಂದೇಹ ಪಡುವ ಅಗತ್ಯವಿಲ್ಲ. ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವುದಕ್ಕೆ ಯಾವುದಕ್ಕೆ ಸಾಕ್ಷ್ಯಗಳು ಸಿಕ್ಕಿಲ್ಲ. ಗುಣಮಟ್ಟದ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದಿರುವ ಖರೀದಿ ಒಪ್ಪಂದ ಬೆಲೆಯ ಪರಾಮರ್ಶೆ ಮಾಡುವುದು ಕೋರ್ಟ್ ಕೆಲಸವಲ್ಲ. 126 ಜೆಟ್ ಬದಲು 36 ಜೆಟ್ ಖರೀದಿ ಒಪ್ಪಂದ ಮಾಡಿಕೊಂಡಿರುವ ಭಾರತ ಸರ್ಕಾರದ ಈ ನಿರ್ಧಾರವನ್ನು ಬದಲಾಯಿಸಿ ಎಂದು ನಾವು ಹೇಳಲು ಸಾಧ್ಯವಿಲ್ಲ. 2016ರ ಸಪ್ಟೆಂಬರ್ ತಿಂಗಳಿನಲ್ಲಿ ಈ ಡೀಲ್ ನಡೆದಾಗ ಯಾರು ಪ್ರಶ್ನೆ ಕೇಳಿರಲಿಲ್ಲ.

ನಾಲ್ಕು ಮತ್ತು ಐದನೇಯ ತಲೆಮಾರಿನ ಫೈಟರ್ ಜೆಟ್ ಭಾರತೀಯ ವಾಯುಸೇನೆಗೆ ನಿಯೋಜಿಸುವ ಅಗತ್ಯವಿದೆ. ಖರೀದಿ, ಬೆಲೆ ನಿರ್ಣಯ, ದೇಶಿ ಪಾಲುದಾರ ಆಯ್ಕೆ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅಗತ್ಯ ಕಂಡು ಬರುವುದಿಲ್ಲ. ಒಪ್ಪಂದದಲ್ಲಿ ಭಾಗಿಯಾದ ಎಲ್ಲರೂ ಖರೀದಿ ಹೇಗೆ ನಡೆಯಿತು ಎನ್ನುವ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ತುಲನಾತ್ಮಕ ಬೆಲೆ ವಿವರವನ್ನು ನೀಡಿ ವಿಮಾನಗಳನ್ನು ಖರೀದಿಸಿ ಎಂದು ಹೇಳುವುದು ಕೋರ್ಟ್ ಕೆಲಸವಲ್ಲ. ನಾವು ಕೇಳಿದ ಪ್ರಶ್ನೆಗಳಿಗೆ ಸಿಕ್ಕಿದ ಉತ್ತರಿಂದ ನಮ್ಮ ಸಂಶಯ ಪರಿಹಾರವಾಗಿದ್ದು ತೃಪ್ತಿಯಾಗಿದೆ. ರಕ್ಷಣೆಯಂತಹ ಸೂಕ್ಷ್ಮ ವಿಚಾರದಲ್ಲಿ ತನಿಖೆಗೆ ಆದೇಶ ನೀಡುವುದು ಸರಿಯಲ್ಲ. ದೇಶಿ ಪಾಲುದಾರನ ಆಯ್ಕೆ ಮಾಡುವುದು ಕಂಪನಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದನ್ನೂ ಓದಿ:ಒಂದೇ ಯುದ್ಧ ವಿಮಾನ ನಿರ್ಮಿಸದ ರಿಲಯನ್ಸ್ ಕಂಪನಿ ಜೊತೆ ಒಪ್ಪಂದ ಮಾಡಿದ್ದು ಯಾಕೆ: ಪ್ರಶ್ನೆಗೆ ಡಸಾಲ್ಟ್ ಸಿಇಒ ಉತ್ತರ ನೀಡಿದ್ದು ಹೀಗೆ

rafale jet 2

ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್ ಶರ್ಮಾ, ವಿನೀತಾ ದಾಂಡ, ಆಪ್ ನಾಯಕ ಸಂಜಯ್ ಸಿಂಗ್ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ರಫೇಲ್ ಒಪ್ಪಂದವನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ವಕೀಲರು ಆಗ್ರಹಿಸಿದ್ದರು. ಈ ಅರ್ಜಿಗಳನ್ನು ಒಟ್ಟಾಗಿಸಿದ್ದ ಮುಖ್ಯ.ನ್ಯಾ ರಂಜನ್ ಗೋಗಯ್ ನೇತೃತ್ವದ ನ್ಯಾ. ಎಸ್‍ಕೆ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿತ್ತು. ನವೆಂಬರ್ 14 ರಂದು ವಿಚಾರಣೆ ಅಂತ್ಯಗೊಳಿಸಿದ್ದ ಸುಪ್ರೀಂಕೋರ್ಟ್ ಡಿಸೆಂಬರ್ 14 ರಂದು ತೀರ್ಪು ಪ್ರಕಟಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು. ಇದನ್ನೂ ಓದಿ:ಎಚ್‍ಎಎಲ್ ಜೊತೆ ರಫೇಲ್ ಯೋಜನೆ ಕೈಬಿಟ್ಟಿದ್ದೇಕೆ: ಸ್ಪಷ್ಟನೆ ನೀಡಿದ ರಕ್ಷಣಾ ಸಚಿವೆ

07rafale1

TAGGED:CAGkannada newsndaRafaleSupreme Courtupaರಫೇಲ್ ಖರೀದಿವಿಮಾನ ಖರೀದಿಸಿಎಜಿ ವರದಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema Updates

pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
44 minutes ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
1 hour ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
2 hours ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
4 hours ago

You Might Also Like

Raichuru Hatti Gold Mine Blast
Crime

ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ

Public TV
By Public TV
10 minutes ago
nigeria flood
Latest

ರೌದ್ರರೂಪ ತಾಳಿದ ನೈಜೀರಿಯಾ ನದಿಗಳು – ಜಲಪ್ರಳಯಕ್ಕೆ 150ಕ್ಕೂ ಅಧಿಕ ಮಂದಿ ಬಲಿ

Public TV
By Public TV
38 minutes ago
Mandya 4
Latest

ಮಂಡ್ಯದಲ್ಲಿ ಬಾಲಕಿ ಸಾವು ಪ್ರಕರಣ – ಭುಗಿಲೆದ್ದ ಆಕ್ರೋಶ, ತನಿಖೆಗೆ ವೈದ್ಯರ ತಂಡ ರಚನೆ

Public TV
By Public TV
41 minutes ago
Vidhyapeeta
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠ – ಮೊದಲ ದಿನವೇ ಬನ್ನಿ ಲ್ಯಾಪ್‌ಟಾಪ್‌ ಗೆಲ್ಲಿ!

Public TV
By Public TV
1 hour ago
Vidhyapeeta
Bengaluru City

`ಪಬ್ಲಿಕ್ ಟಿವಿ’ ವಿದ್ಯಾಪೀಠಕ್ಕೆ ಬನ್ನಿ – ಗಂಟೆಗೊಂದು ಬೈಸಿಕಲ್ ಗೆಲ್ಲಿ!

Public TV
By Public TV
1 hour ago
Public TV vidyapeeta
Bengaluru City

ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?