Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪನಾಣೆ, ಅವ್ವನಾಣೆ ಸಂಸ್ಕೃತಿ ಬಿಡಿ: ಸಿದ್ದರಾಮಯ್ಯಗೆ ಕೋಳಿವಾಡ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪ್ಪನಾಣೆ, ಅವ್ವನಾಣೆ ಸಂಸ್ಕೃತಿ ಬಿಡಿ: ಸಿದ್ದರಾಮಯ್ಯಗೆ ಕೋಳಿವಾಡ ಟಾಂಗ್

Bengaluru City

ಅಪ್ಪನಾಣೆ, ಅವ್ವನಾಣೆ ಸಂಸ್ಕೃತಿ ಬಿಡಿ: ಸಿದ್ದರಾಮಯ್ಯಗೆ ಕೋಳಿವಾಡ ಟಾಂಗ್

Public TV
Last updated: February 21, 2019 8:18 pm
Public TV
Share
2 Min Read
k.b.koliwad siddaramaiah
SHARE

– ಸಿಎಂ ಕುಮಾರಸ್ವಾಮಿ ಅಳುವುದನ್ನು ಬಿಡಲಿ
– ಸಚಿವ ರೇವಣ್ಣನ ಹೇಳಿಕೆಗೆ ಕೋಳಿವಾಡ ಆಕ್ಷೇಪ

ಬೆಂಗಳೂರು: ಅಪ್ಪನಾಣೆ, ಅವ್ವನಾಣೆ ಸಂಸ್ಕೃತಿ ಬಿಟ್ಟು, ಅಭಿವೃದ್ಧಿಯ ವಿಚಾರವನ್ನು ಮುಂದಿಟ್ಟುಕೊಂಡು ಹೋಗಬೇಕು ಎಂದು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು, ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನಮ್ಮ ಸೊಕ್ಕು ಹಾಗೂ ಭಾವನೆಗಳೇ ನಮಗೆ ಸಮಸ್ಯೆಯಾಗುತ್ತವೆ. ಜೆಡಿಎಸ್ ವಿರುದ್ಧ ಮಾತನಾಡುವುದು ಸರಿಯಲ್ಲ. ಸರ್ಕಾರದ ವಿರುದ್ಧ ತಪ್ಪು ಕಲ್ಪನೆ ಬಂದರೆ ಅದರ ಬಿಸಿ ಕಾಂಗ್ರೆಸ್‍ಗೂ ತಟ್ಟುತ್ತದೆ ಹಾಗೂ ಅನ್ವಯವಾಗುತ್ತದೆ. ಇದರಿಂದಾಗಿ ಮೈತ್ರಿ ಸರ್ಕಾರದಲ್ಲಿ ಉಂಟಾಗುವ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಹೋಗಬೇಕು ಎಂದು ಪಕ್ಷದ ನಾಯಕರ ವಿರುದ್ಧ ಪರೋಕ್ಷವಾಗಿ ಚಾಟಿ ಬೀಸಿದರು.

CM HDK

ಸಿಎಂ ಕುಮಾರಸ್ವಾಮಿ ಭಿಕ್ಷುಕರ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸ್ಪೀಕರ್, ಕುಮಾರಸ್ವಾಮಿ ಅವರು ಪದೇ ಪದೇ ಭಿಕ್ಷುಕ ಪದ ಬಳಸುವುದು ತಪ್ಪು. ಅಷ್ಟೇ ಅಲ್ಲದೆ ಅಳುವುದನ್ನು ಬಿಡಬೇಕು. ಎಲ್ಲವನ್ನೂ ಧೈರ್ಯವಾಗಿ ಎದುರಿಸಬೇಕು. ಅದನ್ನು ಬಿಟ್ಟು ಭಾವೋದ್ವೇಗಕ್ಕೊಳಗಾಗಿ ಅಳುವುದು ಯಾಕೆ ಎಂದು ಪ್ರಶ್ನಿಸಿ ಕಿಡಿಕಾರಿದರು.

ಕೆರೆ ಒತ್ತುವರಿ ಸದನ ಸಮಿತಿ ವರದಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವೇ ಎಲ್ಲವನ್ನೂ ಪರಿಶೀಲಿಸಿ ವರದಿ ನೀಡಿದ್ದೇವೆ. ಕುಮಾರಸ್ವಾಮಿ ಅವರು ಕೂಡ ಸಮಿತಿ ಸದಸ್ಯರಾಗಿದ್ದರು. ಈಗ ಅವರೇ ಸಿಎಂ ಆಗಿದ್ದಾರೆ. ಯಾಕೆ ಕೆರೆ ಒತ್ತುವರಿ ವರದಿಯನ್ನು ಸದನ ಸಮಿತಿ ಯಾಕೆ ಒಪ್ಪಿಕೊಳ್ಳಲಿಲ್ಲ ಎನ್ನುವುದು ನನಗೆ ಗೊತ್ತಿಲ್ಲ. ಆದರೆ ವರದಿಯನ್ನು ಮೂಲೆಗೆ ಸೇರಿಸುವುದು ಸರಿಯಲ್ಲ ಎಂದು ದೂರಿದರು.

k.b.koliwad 1

ಕುಮಾರಸ್ವಾಮಿ ಅವರ ಸಲಹೆಯ ಮೇರೆಗೆ ಕೆರೆ ಒತ್ತುವರಿ ಸದನ ಸಮಿತಿ ರಚನೆಯಾಗಿತ್ತು. ಈಗ ಅವರೆ ವರದಿ ಮೂಲೆಗೆ ಇಟ್ಟರೆ ಹೇಗೆ? ಲಕ್ಷಾಂತರ ರೂ. ಖರ್ಚು ಮಾಡಿ ವರದಿ ಮಾಡಿದ್ದು ಯಾಕೆ? ನೈಸ್ ವರದಿಯನ್ನು ನಾವು ಕೊಟ್ಟಿದ್ದೇವೆ. ಅದನ್ನು ಮೂಲೆಗೆ ಇಟ್ಟಿದ್ದಾರೆ. ಹೀಗೆ ಮಾಡಿದರೆ ಜನರ ವಿಶ್ವಾಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.

ಹಾವೇರಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಟಿಕೆಟ್ ಬೇಕೆಂದು ನಾನು ಲಾಬಿ ಮಾಡಲ್ಲ, ಬೇಡುವುದಿಲ್ಲ. ಅವರಾಗಿಯೇ ಕೊಟ್ಟರೆ ನಾನು ಸ್ಪರ್ಧಿಸುತ್ತೇನೆ ಎಂದು ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷೆ ಹೊರಹಾಕಿದರು.

H.D.Revanna

ಜಾತಿವಾದಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಎನ್ನುವ ಉದ್ದೇಶದಿಂದ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಹೇಳಿದ್ದರು. ಇದನ್ನು ಖಂಡಿಸಿದ ಕೋಳಿವಾಡ ಅವರು, ಕೊಡುವುದು ತೆಗೆದುಕೊಳ್ಳುವುದು ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಸಚಿವ ಎಚ್.ಡಿ.ರೇವಣ್ಣ ಅವರು ಇಲ್ಲ ಸಲ್ಲದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಬೆರೆಸಬಾರದು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ದಾಳಿ ವಿಚಾರವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಮತ್ತೊಮ್ಮೆ ಪ್ರಧಾನಿಯಾಗುವ ಕನಸು ಕಟ್ಟಿಕೊಂಡಿರುವ ಮೋದಿ ಅವರು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಹೀಗೆ ಮಾಡುವವರು ಅಯೋಗ್ಯರೆಂದು ಕರೆಸಿಕೊಳ್ಳುತ್ತಾರೆ ಎಂದು ಗುಡುಗಿದರು.

parliament Narendra Modi

ಪುಲ್ವಾಮಾ ದಾಳಿಯನ್ನು ತಡೆಯುವಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ. ಹೀಗಾಗಿ ಸೂಸೈಡ್ ಬಾಂಬ್ ದಾಳಿ ನಡೆಯಿತು. ಅಷ್ಟೊಂದು ಭದ್ರತೆ ನಡುವೆಯೂ ಘಟನೆ ನಡೆಯಿತು ಎಂದ ಅವರು, ಶಾಲಾ ಮಕ್ಕಳ ಕೈಯಲ್ಲಿ ಮೋದಿ, ಮೋದಿ ಅಂತ ಬರೆಸುತ್ತರುವುದು ಖಂಡನೀಯ. ಉಗ್ರರನ್ನು ಸೆದೆಬಡಿದೆರ ಪ್ರಧಾನಿ ಮೋದಿ ಅವರಿಗೆ ಗೌರವ ಸಿಗಲಿದೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Coalition Governmentformer cmFormer Speakerk.b.koliwadLok Sabha electionPublic TVsiddaramaiahಕಾಂಗ್ರೆಸ್ಕೆ.ಬಿ.ಕೋಳಿವಾಡಪಬ್ಲಿಕ್ ಟಿವಿಮಾಜಿ ಸಿಎಂ ಸಿದ್ದರಾಮಯ್ಯಮಾಜಿ ಸ್ಪೀಕರ್ಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Kolar Flex
Districts

ಕೋಲಾರ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

Public TV
By Public TV
25 minutes ago
mangaluru daughter murder
Crime

ಮಂಗಳೂರು| ತಂದೆ-ಚಿಕ್ಕಪ್ಪನ ಗಲಾಟೆ ಬಿಡಿಸಲು ಹೋಗಿ ಅಪ್ಪನ ಕತ್ತಿಯೇಟಿಗೆ ಮಗಳು ಬಲಿ

Public TV
By Public TV
1 hour ago
Delivery Agent
Crime

ಉದ್ಯಮಿಯನ್ನು ಹೆಲ್ಮೆಟ್‌ನಿಂದಲೇ ಹೊಡೆದು ಕೊಂದ ಮೂವರು ಡೆಲಿವರಿ ಬಾಯ್ಸ್‌

Public TV
By Public TV
2 hours ago
Bidar Students Fell Ill After Consuming Mid Day Meal
Bidar

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Public TV
By Public TV
2 hours ago
Protest
Chikkaballapur

ವಸತಿ ಶಾಲೆಯಲ್ಲಿ ಶಿಕ್ಷಕರ ಒಳಜಗಳ – ಬೀದಿಗೆ ಬಂದ ವಿದ್ಯಾರ್ಥಿಗಳು; ಅಮಾನತಾದ ಶಿಕ್ಷಕರೇ ಬೇಕೆಂದು ಪಟ್ಟು

Public TV
By Public TV
2 hours ago
T20 World Cup
Cricket

T20 World Cup | 20 ತಂಡಗಳ ಕ್ಯಾಪ್ಟೆನ್ಸಿ ಬಲ ಹೇಗಿದೆ? – ವಿದೇಶಿ ತಂಡಗಳಲ್ಲೂ ಭಾರತೀಯರ ಹವಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?