Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಎದುರೇ ಚೇರ್‌ಗಳಿಂದ ಬಡಿದಾಡಿಕೊಂಡ ಬಿಜೆಪಿ ಕಾರ್ಯಕರ್ತರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಎಸ್‍ವೈ ಎದುರೇ ಚೇರ್‌ಗಳಿಂದ ಬಡಿದಾಡಿಕೊಂಡ ಬಿಜೆಪಿ ಕಾರ್ಯಕರ್ತರು!

Districts

ಬಿಎಸ್‍ವೈ ಎದುರೇ ಚೇರ್‌ಗಳಿಂದ ಬಡಿದಾಡಿಕೊಂಡ ಬಿಜೆಪಿ ಕಾರ್ಯಕರ್ತರು!

Public TV
Last updated: February 23, 2019 6:25 pm
Public TV
Share
2 Min Read
BIJ BSY BJP
SHARE

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪ ಅವರ ಎದುರೇ ಪಕ್ಷದ ಕಾರ್ಯಕರ್ತರು ಬಡಿದಾಡಿಕೊಂಡಿರುವ ಘಟನೆ ವಿಜಯಪುರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆಯುತ್ತಿರುವ ಶಕ್ತಿ ಕೇಂದ್ರದ ಸಮಾವೇಶದಲ್ಲಿ ನಡೆದಿದೆ.

ಸಮಾವೇಶದಲ್ಲಿ ಭಾಗವಹಿಸಿದ್ದ ಯಡ್ಡಿಯೂರಪ್ಪ ಸಮ್ಮುಖದಲ್ಲೇ ಕಾರ್ಯಕರ್ತರು ಹಿಗ್ಗಾ ಮುಗ್ಗಾ ಥಳಿಸಿಕೊಂಡಿದ್ದು, ಚೇರ್ ಹಾಗೂ ಕೈ ಕೈ ಮಿಲಾಯಿಸಿದ್ದಾರೆ. ರಮೇಶ್ ಜಿಗಜಿಣಗಿ ಬೆಂಬಲಿಗರಿಂದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದ್ದು, ಹಾಲಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ಈ ಬಾರಿ ಪಕ್ಷದ ಟಿಕೆಟ್ ನೀಡದೆ ಬೇರೆ ಅವರಿಗೆ ಟಿಕೆಟ್ ನೀಡುವಂತೆ ಬಿಎಸ್‍ವೈ ಅವರಿಗೆ ಮನವಿ ಸಲ್ಲಿಸಲು ಕೆಲ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

vlcsnap 2019 02 23 15h11m55s409

ರಾಜ್ಯ ಬಿಜೆಪಿ ಘಟಕವೂ ಲೋಕಸಭಾ ಚುನಾವಣೆಯ ಸಿದ್ಧತೆಯಲ್ಲಿ ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರಲ್ಲಿ ಪ್ರಚಾರಕ್ಕೆ ಶಕ್ತಿ ತುಂಬಲು ರಾಷ್ಟ್ರಿಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಎಲ್ಲಾ ನಾಯಕರು ಕಾರ್ಯಪ್ರವೃತ್ತಿ ಆಗಿದ್ದಾರೆ. ಆದರೆ ವಿಜಯಪುರ ಜಿಲ್ಲಾ ರಾಜಕೀಯದಲ್ಲಿ ಮಾತ್ರ ಬಣದ ರಾಜಕೀಯ ಆರಂಭವಾಗಿದೆ.

ಲೋಕಸಭಾ ಚುನಾವಣೆಯ ರಣಕಹಳೆಯನ್ನ ಬಿಜೆಪಿ ವಿಜಯಪುರ ಮೀಸಲು ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಮೋದಿ ವಿಜಯ ಸಂಕಲ್ಪ ಯಾತ್ರೆಯ ವಿಜಯಪುರ ಬಾಗಲಕೋಟ ಶಕ್ತಿ ಕೇಂದ್ರದ ಸಮಾವೇಶವನ್ನ ಆಯೋಜಿಸಲಾಗಿದ್ದು, ಸಮಾವೇಶಕ್ಕೆ ಮಾಜಿ ಸಿಎಂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಕೃಷಿ ಸಚಿವ ಪುರುಷೋತ್ತಮ, ವಿಜಯಪುರ ಸಂಸದ ಹಾಗೂ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಬಾಗಲಕೋಟ ಸಂಸದ ಪಿ ಸಿ ಗದ್ದಿಗೌಡರ್, ಮಾಜಿ ಸಚಿವರಾದ ಮುರಗೇಶ್ ನಿರಾಣಿ, ಗೋವಿಂದ್ ಕಾರಜೋಳ ಸೇರಿ ಹಲವರು ಮಾಜಿ ಹಾಲಿ ಶಾಸಕರು ಭಾಗಿಯಾಗಿದ್ದರು.

bij bjp

ಇತ್ತ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಪ್ರಹ್ಲಾದ್ ಜೋಶಿ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಬಿಜೆಪಿ ನಾಯಕರು ಗೈರಾಗಿದ್ದರು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕೂಡ ಗೈರಾಗಿದ್ದಾರೆ. ನಿನ್ನೆ ರಮೇಶ್ ಜಿಗಜಿಣಗಿ ವಿರುದ್ಧ ಫೇಸ್ ಬುಕ್ ಮೂಲಕ ಬಸವರಾಜ್ ಯತ್ನಾಳ ಅವರು ವಾಗ್ದಾಳಿ ನಡೆಸಿ ಸಮಾವೇಶಕ್ಕೆ ಗೈರಾಗುವ ಮೂಲಕ ಟಾಂಗ್ ನೀಡಿದ್ದಾರೆ.

ಸಚಿವ ರಮೇಶ್ ಜಿಗಜಿಣಗಿ ಹಾಗೂ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ನಡುವಿನ ಭಿನ್ನಮತವನ್ನು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಮನಗೊಳಿಸುತ್ತಾರೆಂಬ ನಿರೀಕ್ಷೆ ಮಾಡಲಾಗಿತ್ತು. ಆದರೆ ಬಿಎಸ್‍ವೈ ಅವರ ಎದುರೇ ಅಸಮಾಧಾನ ಸ್ಫೋಟಗೊಂಡಿದ್ದು, ತೀವ್ರ ಮುಜಗರಕ್ಕೆ ಕಾರಣವಾಗಿದೆ ಎನ್ನಲಾಗಿದೆ.

basana gowda patil

ಪರೋಕ್ಷ ಟಾಂಗ್ ನೀಡಿದ್ದ ಜಿಗಜಿಣಗಿ :
ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ್ದ ಜಿಗಜಿಣಗಿ ಅವರು, ಈ ಹಿಂದೆ ಸಂಸದರಾಗಿದ್ದವರು ಮಾಡಲಾರದಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನೂರಾರು ಕೋಟಿ ಅನುದಾನ ತಂದಿದ್ದೇನೆ. ಒಂದು ವೇಳೆ ಹಿಂದಿನ ಸಂಸದರು ಯಾರಾದರೂ ನನಗಿಂತ ಹೆಚ್ಚಿನ ಕೆಲಸ ಮಾಡಿದ್ದರೆ, ಅನುದಾನ ತಂದಿದ್ದರೆ ಸಾಬೀತುಪಡಿಸಿದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ಇದಕ್ಕೆ ಟಾಂಗ್ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದ ಬಸನಗೌಡ ಪಾಟೀಲರು, 10 ವರ್ಷಗಳಲ್ಲಿ ಸಂಸದರ ನಿಧಿ ಎಲ್ಲಿ ಮತ್ತು ಯಾವ ಹಳ್ಳಿಗೆ ಮುಟ್ಟಿತು? ವಿನಾಶಕಾಲೇ ವಿಪರೀತ ಬುದ್ಧಿ, ಯಾವ ಹಳ್ಳಿಗೆ ಎಷ್ಟು ಹಣ ಮುಟ್ಟಿದೆ, ಸಂಸದರ ಆದರ್ಶ ಗ್ರಾಮದ ಪರಿಸ್ಥಿತಿ ಹೇಗಿದೆ, ಅದು ಜಿಲ್ಲೆಯಲ್ಲೇ ಅತ್ಯಂತ ಹಿಂದುಳಿದಿದೆ, ಹಿಂದಿನ ಯಾವ ಸಂಸದರೂ ಮಾಡದಷ್ಟು ಅಭಿವೃದ್ಧಿಯನ್ನು ನಾನು ಮಾಡಿದ್ದೇನೆ ಎಂದು ಹೇಳಲು ನಾಚಿಕೆಯಾಗಬೇಕು ಎಂದು ಟೀಕಿಸಿದ್ದರು. ಇವರ ಹೇಳಿಕೆಯನ್ನು ಹಲವು ಬಿಜೆಪಿ ಕಾರ್ಯಕರ್ತರು ಶೇರ್ ಮಾಡಿ ಬೆಂಬಲ ನೀಡಿದ್ದರು.

BJP Flag Final 6

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Basanagowda Patilbjpbs yeddyurappaLok Sabha electionramesh Jigajinagiticketvijayapuraಟಿಕೆಟ್ಬಸನಗೌಡ ಪಾಟೀಲ್ಬಿಎಸ್ ಯಡಿಯೂರಪ್ಪಬಿಜೆಪಿರಮೇಶ್ ಜಿಗಜಿಣಗಿಲೋಕಸಭಾ ಚುನಾವಣೆವಿಜಯಪುರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
33 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
53 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?