ಶೋಭಾ ಕರಂದ್ಲಾಜೆಗೆ ಬುದ್ಧಿಭ್ರಮಣೆಯಾಗಿದೆ: ದಿನೇಶ್ ಗುಂಡೂರಾವ್ ತಿರುಗೇಟು

Public TV
1 Min Read
mng gundurao1

ಮಂಗಳೂರು: ಪುಲ್ವಾಮ ದಾಳಿಗೂ, ಏರ್ ಶೋ ದುರಂತಕ್ಕೂ ಲಿಂಕ್ ಮಾಡುವ ಮಟ್ಟಿಗೆ ಸಂಸದೆ ಶೋಭಾ ಕರಂದ್ಲಾಜೆಗೆ ಬುದ್ಧಿಭ್ರಮಣೆಯಾಗಿದೆ. ಯಾವಾಗ ಏನು ಮಾತನಾಡಬೇಕು ಅಂತ ಅವರಿಗೆ ಗೊತ್ತಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ಏರ್ ಶೋನಲ್ಲಿ ಬೆಂಕಿ ಅನಾಹುತಕ್ಕೆ ರಾಜ್ಯ ಸರ್ಕಾರದ ವೈಫಲ್ಯತೆ ಕಾರಣ ಎಂದು ಶೋಭಾ ಕರಂದ್ಲಾಜೆ ಟೀಕೆಗೆ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪುಲ್ವಾಮ ದಾಳಿಯ ವೈಫಲ್ಯದ ಬಗ್ಗೆ ಶೋಭಾ ಮಾತಾಡಲಿ. ಇಂಟೆಲಿಜೆನ್ಸ್ ವರದಿ ಬಗ್ಗೆ ಮೋದಿ ಸುಮ್ಮನಿದ್ದಾರೇಕೆ ಅನ್ನುವುದನ್ನು ಹೇಳಲಿ. ಅದನ್ನ ಬಿಟ್ಟು ಪುಲ್ವಾಮ ದಾಳಿಗೂ, ಏರ್ ಶೋ ದುರಂತಕ್ಕೂ ಲಿಂಕ್ ಮಾಡುವ ಮಟ್ಟಿಗೆ ಶೋಭಾ ಅವರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಏರ್ ಶೋ ಬೆಂಕಿ ಅವಘಡಕ್ಕೂ ಪುಲ್ವಾಮಾ ದಾಳಿಗೂ ಲಿಂಕ್ ಇದೆಯಾ – ಘಟನೆಯನ್ನು ರಾಜಕೀಯಗೊಳಿಸಿದ್ರಾ ಕರಂದ್ಲಾಜೆ?

mng gundurao

ಶೋಭಾ ಏನು ಮಾತಾಡುತ್ತಾರೆಂದು ಅವರಿಗೇ ಗೊತ್ತಿಲ್ಲ. ಕೇಂದ್ರದ ವಾಯುನೆಲೆ ಸುಪರ್ದಿಯಲ್ಲಿ ಯಲಹಂಕದಲ್ಲಿ ಏರ್ ಶೋ ನಡೆಯುತ್ತಿದೆ. ಏನಾದರೂ ವಿಫಲತೆ ಆಗಿದ್ದರೆ ರಕ್ಷಣಾ ಇಲಾಖೆ ವೈಫಲ್ಯ ಅನ್ನಬೇಕಷ್ಟೇ. ಇಡೀ ಕಾರ್ಯಕ್ರಮಕ್ಕೆ ಸಹಕಾರ ಕೊಡುವುದಷ್ಟೆ ರಾಜ್ಯ ಸರ್ಕಾರದ ಕೆಲಸ. ಸುಮ್ಮನೆ ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವುದು ಸರಿಯಲ್ಲ. ಶೋಭಾ ಸಂಸದರಾಗಿ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಹೇಳಲಿ. ಅವರು ಏನೂ ಕೆಲಸ ಮಾಡದೇ ಈ ರೀತಿ ಹೇಳಿಕೆಯಿಂದ ಪ್ರಚಾರ ಗಿಟ್ಟಿಸಿಕೊಳ್ತಾರೆ ಎಂದು ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ.

air show 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *