Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊನೆಯ ಎಸೆತದಲ್ಲಿ ಭಾರತಕ್ಕೆ ಸೋಲು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕೊನೆಯ ಎಸೆತದಲ್ಲಿ ಭಾರತಕ್ಕೆ ಸೋಲು!

Cricket

ಕೊನೆಯ ಎಸೆತದಲ್ಲಿ ಭಾರತಕ್ಕೆ ಸೋಲು!

Public TV
Last updated: February 24, 2019 10:39 pm
Public TV
Share
3 Min Read
indvaus 1
SHARE

– ಆಸೀಸ್‍ಗೆ 3 ವಿಕೆಟ್ ಗೆಲುವು
– ಕೊನೆಯ ಓವರ್ ನಲ್ಲಿ 14 ರನ್ ಕೊಟ್ಟ ಉಮೇಶ್ ಯಾದವ್

ವಿಶಾಖಪಟ್ಟಣ: ಇಲ್ಲಿನ ವೈ ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಆಸೀಸ್ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಕಂಡಿದ್ದು, ಆಸ್ಟ್ರೇಲಿಯಾ ಮೂರು ವಿಕೆಟ್‍ಗಳ ಜಯ ಸಾಧಿಸಿದೆ.

127 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾಗೆ ಕೊನೆಯ ಓವರ್ ನಲ್ಲಿ 14 ರನ್ ಬೇಕಿತ್ತು. ಉಮೇಶ್ ಯಾದವ್ ಎಸೆದ ಈ ಓವರ್ ನಲ್ಲಿ ಎರಡು ಬೌಂಡರಿ ಸಿಡಿಸಿದ ಪರಿಣಾಮ ಕೊನೆಯ ಎಸೆತದಲ್ಲಿ 2 ರನ್‍ಗಳ ಅಗತ್ಯವಿತ್ತು. ಪ್ಯಾಟ್ ಕಮ್ಮಿನ್ಸ್ ಕೊನೆಯ ಎಸೆತದಲ್ಲಿ 2 ರನ್ ಕದಿಯುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ 2 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆಯನ್ನು ಪಡೆದಿದೆ.

invaus t20 5

ಟೀಂ ಇಂಡಿಯಾ ಸುಲಭ ಗುರಿಯನನ್ನು ಬೆನ್ನತ್ತಿದ ಆಸೀಸ್ ಪಡೆ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಸ್ಟೋಯಿನ್ಸ್ 1 ರನ್ ಗೆ ರನೌಟ್ ಆದ್ರೆ, ನಾಯಕ ಫಿಂಚ್ ರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಬುಮ್ರಾ ಶಾಕ್ ನೀಡಿದರು. ಪರಿಣಾಮ 5 ರನ್ ಗಳಿಗೆ ಆಸೀಸ್ ಪ್ರಮುಖ 2 ವಿಕೆಟ್ ಕಳೆದುಕೊಂಡಿತ್ತು.

ಈ ಹಂತದಲ್ಲಿ ಬಂದ ಸ್ಫೋಟಕ ಆಟಗಾರ ಮ್ಯಾಕ್ಸ್ ವೆಲ್ 43 ಎಸೆತಗಳಲ್ಲಿ 56 ರನ್ ಗಳಿಸಿ ಮಿಂಚಿದರು. ಅರ್ಧ ಶತಕ ಗಳಿಸಿ ಟೀಂ ಇಂಡಿಯಾಗೆ ಮುಳುವಾಗಿದ್ದ ಮ್ಯಾಕ್ಸ್ ವೆಲ್‍ರನ್ನು ಚಹಲ್ ಪೆವಿಲಿಯಗಟ್ಟಲು ಯಶಸ್ವಿಯಾದರೆ, ಆರಂಭಿಕ ಶಾರ್ಟ್ 37 ರನ್ ಗಳಿಸಿ ರನೌಟ್ ಆದರು. ಬಳಿಕ ಬಂದ ಟರ್ನರ್ ಕೂಡ ಬಂದಷ್ಟೇ ವೇಗದಲ್ಲಿ ನಿರ್ಗಮಿಸಿದರು. ಈ ಹಂತದಲ್ಲಿ ಭಾರತ ಪಂದ್ಯ ಗೆಲುವಿನ ಆಸೆ ಮೂಡಿತು. ಇದನ್ನು ಓದಿ: ಕಮ್ ಬ್ಯಾಕ್ ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿದ ಕೆಎಲ್ ರಾಹುಲ್

invaus t20 4

ಮಿಂಚಿದ ಬುಮ್ರಾ: 98 ರನ್ ಗಳಿಗೆ 3 ವಿಕೆಟ್ ಗಳಿಸಿ ಸುಸ್ಥಿತಿಯಲ್ಲಿದ್ದ ಆಸೀಸ್‍ಗೆ ಶಾರ್ಟ್ ರನೌಟ್ ಆದ ಬಳಿಕ ರನ್ ವೇಗಕ್ಕೆ ಕಡಿವಾಣ ಬಿತ್ತು. ಕೊನೆಯ 12 ಎಸೆತಗಳಲ್ಲಿ ಆಸೀಸ್ ಗೆಲುವಿಗೆ 16 ರನ್ ಬೇಕಿತ್ತು. ಬೂಮ್ರಾ ಈ ಓವರ್ ನಲ್ಲಿ ಕೇವಲ 2 ರನ್ ಬಿಟ್ಟುಕೊಟ್ಟು 2 ವಿಕೆಟ್ ಕಿತ್ತ ಪರಿಣಾಮ ಪಂದ್ಯ ಕುತೂಹಲ ಘಟ್ಟದತ್ತ ತಿರುಗಿತು. ಆದರೆ ಉಮೇಶ್ ಯಾದವ್ ಓವರ್ ನಲ್ಲಿ 2 ಬೌಂಡರಿ ಹೋದ ಪರಿಣಾಮ ಪಂದ್ಯ ಭಾರತದಿಂದ ಕೈ ಜಾರಿತು. ಬುಮ್ರಾ 4 ಓವರ್ ಎಸೆದು 16 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ ಅರ್ಧ ಶತಕ ಹಾಗೂ ನಾಯಕ ಕೊಹ್ಲಿ 24, ಧೋನಿ 29 ರನ್ ಗಳ ನೆರವಿನಿಂದ 7 ವಿಕೆಟ್ ಕಳೆದುಕೊಂಡು 126 ರನ್ ಗಳಿಸಿತ್ತು.

invaus t20 1

ಟಾಸ್ ಸೋತು ಬ್ಯಾಟಿಂಗ್ ಅವಕಾಶ ಪಡೆದ ಟೀಂ ಇಂಡಿಯಾ ರೋಹಿತ್ ಶರ್ಮಾ ವಿಕೆಟ್ ಕಳೆದು ಬಹುಬೇಗ ಕಳೆದುಕೊಂಡರೂ ಕೂಡ ಉತ್ತಮ ಆರಂಭ ಪಡೆಯಿತು. ಆರಂಭದ 8.3 ಓವರ್ ಗಳಲ್ಲಿ 69 ರನ್ ಗಳಿಸಿ ಟೀಂ ಇಂಡಿಯಾ ಉತ್ತಮ ಹಂತದಲ್ಲಿತ್ತು. ಕೊಹ್ಲಿ 17 ಎಸೆತಗಳಲ್ಲಿ 24 ರನ್ ಗಳಿಸಿ ಬಿರುಸಿನ ಬ್ಯಾಟಿಂಗ್ ನಡೆಸಿದ್ದರು. ಆದರೆ ಆ್ಯಡಂ ಜಂಪಾ ಕೊಹ್ಲಿ ವಿಕೆಟ್ ಪಡೆಯುವ ಮೂಲಕ ಭಾರತ ರನ್ ವೇಗಕ್ಕೆ ಕಡಿವಾಣ ಹಾಕಲು ಯಶಸ್ವಿಯಾದರು. ಕೊಹ್ಲಿ ಪಂದ್ಯದಲ್ಲಿ ಆಸೀಸ್ ವಿರುದ್ಧ 500 ರನ್ ಪೂರ್ಣಗೊಳಿಸಿದ ಹೆಗ್ಗಳಿಕೆ ಗಳಿಸಿದರು.

ಪಂತ್ ರನೌಟ್ ಆಗುವ ಮೂಲಕ ನಿರಾಸೆ ಮೂಡಿಸಿದರೆ, ಉತ್ತಮವಾಗಿ ಆಡುತ್ತಿದ್ದ ರಾಹುಲ್‍ರನ್ನು ಕಾಲ್ಟರ್ ನೈಲ್ ಪೆವಿಲಿಯಗಟ್ಟಿದರು. ಈ ಹಂತದಲ್ಲಿ ಟೀಂ ಇಂಡಿಯಾ 12.2 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡಿತ್ತು. ಬಳಿಕ ಬಂದ ಧೋನಿ 37 ಎಸೆತಗಳನ್ನು 29 ರನ್ ಗಳಿಸಿ ಅಜೇಯರಾಗಿ ಉಳಿದರು.

ಟೀಂ ಇಂಡಿಯಾ 8.3 ಓವರ್ ಗಳಲ್ಲಿ 1 ವಿಕೆಟ್ ಕಳೆದು ಕೊಂಡು 69 ರನ್ ಗಳಿಸಿದರೆ, ಉಳಿದ 11.3 ಓವರ್ ಗಳಲ್ಲಿ 57 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡಿತ್ತು. ಇತ್ತ ಧೋನಿ 35 ಪ್ಲಸ್ ಎಸೆತ ಎದುರಿಸಿದರೂ ಕೂಡ 29 ರನ್ ಮಾತ್ರ ಗಳಿಸಿ ಟಿ20 ಮಾದರಿಯಲ್ಲಿ ಭಾರತದ ಪರ ಕಡಿಮೆ ಸ್ಟ್ರೈಕ್ ರೇಟ್ ಹೊಂದಿದ ಆಟಗಾರ ಎನಿಸಿಕೊಂಡರು. ಈ ಹಿಂದೆ 2009ರಲ್ಲಿ ಇಂಗ್ಲೆಂಡ್ ವಿರುದ್ಧ ಜಡೇಜಾ 71.82 ಸ್ಟ್ರೈಕ್ ನಲ್ಲಿ ರನ್ ಗಳಿಸಿದ್ದರು. ಇಂದು ಧೋನಿ 78.37 ಸ್ಟ್ರೈಕ್ ರೇಟ್ ಹೊಂದಿದ್ದರು.

D0LaJVQVYAcs3cb

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:australiacricketKL RahulPublic TVt20Team indiaVisakhapatnamಆಸ್ಟ್ರೇಲಿಯಾಕೆಎಲ್ ರಾಹುಲ್ಕ್ರಿಕೆಟ್ಟಿ20ಟೀಂ ಇಂಡಿಯಾಪಬ್ಲಿಕ್ ಟಿವಿವಿಶಾಖಪಟ್ಟಣ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
35 seconds ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
7 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
26 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
40 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?