Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ

Districts

ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ

Public TV
Last updated: February 27, 2019 9:22 pm
Public TV
Share
3 Min Read
CM HD KUMARASAWAMY AMBARESH 1 1
SHARE

– ಆತ್ಮೀಯರ ನಡುವೆ ಬಿರುಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ

ಮಂಡ್ಯ: ಜಿಲ್ಲೆಯ ಜನರ ಋಣದ ಭಾರ ನನ್ನ ಮೇಲಿದ್ದು, ಆ ಋಣವನ್ನು ತೀರಿಸುವ ಕಾರ್ಯ ನನ್ನ ಮೇಲಿದೆ. ಅಭಿವೃದ್ಧಿಯ ವಿಚಾರಕ್ಕೆ ಜಿಲ್ಲೆಗೆ ದೊಡ್ಡ ಅನಾಯ್ಯವಾಗಿದ್ದು, ಅಂಬರೀಶ್ ಅವರ ಕಾಲದಲ್ಲಿ ಮಾಡಲು ಸಾಧ್ಯವಾಗದ ಕಾರ್ಯಗಳಿಗೆ ನಾನು ಚಾಲನೆ ಕೊಟ್ಟಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ ಅಭಿವೃದ್ಧಿ ಯೋಜನೆಗಳ ಚಾಲನೆ ನೀಡುವ ಸಂಬಂಧ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ ಉದ್ದೇಶಿಸಿ ಸಿಎಂ ಕುಮಾರಸ್ವಾಮಿ ಅವರು ಮಾತನಾಡಿದರು. ಅಂಬರೀಶ್ ಹಾಗೂ ನಾನು ಆತ್ಮೀಯ ಸ್ನೇಹಿತರು. ಅವರು ನಿಧನ ಹೊಂದಿದ್ದ ಸಂದರ್ಭದಲ್ಲಿ ಅವರಿಗೆ ನೀಡಿದ ಗೌರವ ಇಡೀ ಜಿಲ್ಲೆಗೆ ನೀಡಿದ ಗೌರವ. ಇದನ್ನು ಅಂಬರೀಶ್ ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು. ಅಂದು ಮಂಡ್ಯ ಜಿಲ್ಲೆಗೆ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಕರೆತರುವುದು ಬೇಡ ಎಂದವರು ಇಂದು ಈ ಮಣ್ಣಿನ ಬಗ್ಗೆ ಪ್ರೀತಿ ತೋರಿಸುತ್ತಿದ್ದಾರೆ. ಅಂಬರೀಶ್ ಅವರಿಂದ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡುತ್ತಿದ್ದು, ನಿಮ್ಮ ಋಣವನ್ನು ತೀರಿಸುವ ಕಾರ್ಯವನ್ನು ಮಾಡಿದ್ದೇನೆ ಎಂದರು.

HDK MND

ನನ್ನ ಕುಟುಂಬವನ್ನು ಇಂದು ಬೀದಿಗೆ ಎಳೆದಿದ್ದಾರೆ. ನಾನು ಎಂದಾದರೂ ನನ್ನ ಮಗನನ್ನು ರಾಜಕೀಯಕ್ಕೆ ಕರೆತರುವ ಬಗ್ಗೆ ಮಾತನಾಡಿದ್ದೇನಾ ಎಂದು ಪ್ರಶ್ನಿಸಿದರು. ಅಲ್ಲದೇ ಜಿಲ್ಲೆಯ ಅಭಿವೃದ್ಧಿ ನನ್ನ ಜೀವನದ ಗುರಿಯಾಗಿದ್ದು, ಕಳೆದ ಚುನಾವಣೆಯಲ್ಲಿ 7 ಸ್ಥಾನಗಳಲ್ಲಿ ನಮ್ಮನ್ನು ಗೆದ್ದು ತಂದಿದ್ದೀರಿ. ನಿಮ್ಮ ಆಶೀರ್ವಾದದಿಂದ ಈ ಜಾಗದಲ್ಲಿ ನಿಂತಿದ್ದೇನೆ. ನನ್ನ ಕೊನೆಯ ಉಸಿರು ಇರುವವರೆಗೂ ಇದನ್ನು ಮರೆಯಲ್ಲ. ಕೇವಲ ಮಂಡ್ಯ ಜಿಲ್ಲೆಗಾಗಿ ಕಾರ್ಯಕ್ರಮ ಮಾಡುತ್ತೇನೆ ಎಂದು ಸಣ್ಣತನದ ಮಾತನಾಡುತ್ತಾರೆ. ಆದರೆ ಬೇರೆ ಬೇರೆ ಜಿಲ್ಲೆಗಳಿಗೆ ಯಾವ ಕೊಡುಗೆ ನೀಡಿದ್ದೇನೆ ನನಗೆ ಗೊತ್ತಿದೆ ಎಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಸ್ತಾಪಿಸಿ ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರಿಸಿದರು.

ಬದುಕಿರುವುದೇ ನಿಮಗಾಗಿ: ಮತ್ತೆ ತಮ್ಮ ಬದುಕಿನ ಕುರಿತು ಪ್ರಸ್ತಾಪ ಮಾಡಿದ ಸಿಎಂ ಎಚ್‍ಡಿಕೆ ನಾನು ಬದುಕಿರುವುದು ನಿಮಗಾಗಿ, ನಾಡಿನ ಜನತೆಗಾಗಿ ಎಂದರು. ಅಲ್ಲದೇ ರೈತರ ಸಾಲಮನ್ನಾ ವಿಚಾರದಲ್ಲಿ ನಾನು ಎಂದು ಸುಳ್ಳು ಹೇಳಿಲ್ಲ. ನಿನ್ನೆ ಬೆಳಗ್ಗೆ ಹತ್ತು ಗಂಟೆವರೆಗೂ 6 ಲಕ್ಷದ 40 ಸಾವಿರ ರೈತ ಕುಟುಂಬಗಳಿಗೆ 4 ಸಾವಿರದ 103 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇನೆ. ರಾಜ್ಯ ಸರ್ಕಾರದ ಖಜಾನೆಯಲ್ಲಿ ಇನ್ನೂ 6 ಸಾವಿರ ದುಡ್ಡು ಇಟ್ಟಿದ್ದೇನೆ. ಕೇಂದ್ರ ಪ್ರಧಾನಿ ರೀತಿ ನಾನು ಮಾತನಾಡಲ್ಲ ಎಂದು ಕಿಡಿಕಾರಿದರು.

SUMALATHA 1 2

ರೈತರ ಸಾಲಮನ್ನಾ ಮಾಡಿದರೆ ಮಾತ್ರ ರೈತರು ಆರಾಮವಾಗಿ ಇರುತ್ತಾರೆ ಎಂಬ ಭ್ರಮೆ ನನಗಿಲ್ಲ. ಸಮಗ್ರ ಅಭಿವೃದ್ಧಿಗಾಗಿ ನಾನು ದುಡಿಯುತ್ತೇನೆ. ಗಿರವಿ ಇಟ್ಟಿರುವ ಒಡವೆಗಳನ್ನ ಬಿಡಿಸಿಕೊಡುವ ನಿಟ್ಟಿನಲ್ಲಿ ಹೊಸ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಯೋಜನೆ ಮುಗಿಯುವವರೆಗೂ ಯಾವುದೇ ಮಾನಸಿಕ ಹಿಂಸೆ ಕೊಟ್ಟರೂ ಅಧಿಕಾರದಲ್ಲಿ ಇರುತ್ತೇನೆ. ಆದರೆ ಜಿಲ್ಲೆಯ ಟಿಕೆಟ್ ವಿಚಾರದಲ್ಲಿ ಈ ವೇದಿಕೆಯಲ್ಲಿ ಪ್ರಸ್ತಾಪ ಮಾಡಲ್ಲ. ಅದಕ್ಕೆ ರಾಜಕೀಯ ವೇದಿಕೆ ಇದೆ. ಆಗ ಮಾತನಾಡುತ್ತೇನೆ ಎಂದರು.

ಜಿಲ್ಲೆಯ ಜನ ಹಣ ಪಡೆದು ಮೋಸ ಹೋಗುವುದಿಲ್ಲ. ಯಾವುದೇ ಆಮಿಷಗಳಿಗೆ ಒಳಗಾಗಲ್ಲ. ಇದೇ ರೀತಿ ನಿಮ್ಮ ಬೆಂಬಲ ನಮಗೆ ನೀಡಿ ಯಾವುದೇ ಕಾರಣಕ್ಕೂ ಅನುಕಂಪದ ಮಾತುಗಳಿಗೆ ಮರುಳಾಗಬೇಡಿ. ನಿಜವಾಗಿ ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ ಎಂದು ಪರೋಕ್ಷವಾಗಿ ಸುಮಲತಾ ಅಂಬರೀಶ್ ಅವರಿಗೆ ಟಾಂಗ್ ಕೊಟ್ಟರು.

HDD 1 1

ಕನ್ನಡಿಗ ಮತ್ತೊಮ್ಮೆ ಪ್ರಧಾನಿ: ರಾಜ್ಯದಲ್ಲಿ 20 ಸ್ಥಾನಗಳಿಗೆ ಹೆಚ್ಚು ಸ್ಥಾನ ಪಡೆದುಕೊಂಡರೆ ದೆಹಲಿಯಲ್ಲಿ ಮತ್ತೊಮ್ಮೆ ಕನ್ನಡಿಗರೊಬ್ಬರು ಪ್ರಧಾನಿಯಾಗ ಬಹುದು ಎಂದು ಹೇಳಿದ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಎಚ್‍ಡಿಡಿ ಮತ್ತೊಮ್ಮೆ ಪ್ರಧಾನಿ ಆಗುವ ವಿಚಾರವನ್ನು ಬಿಚ್ಚಿಟ್ಟರು. ಅಲ್ಲದೇ ದೇವೇಗೌಡರು ಪ್ರಧಾನಿ ಆಗಿದ್ದಾಗ ಒಂದೇ ಒಂದು ಯೋಧರ ಕುಟುಂಬ ಅನಾಥರಾಗುವ ಘಟನೆ ನಡೆಯಲಿಲ್ಲ. ರೈತರ ಸಾಲಮನ್ನಾ ಮಾಡುವುದು ಪಾಪದ ಕೆಲಸ ಎನ್ನುವ ಪ್ರಧಾನಿಗೆ ಸರಿಯಾದ ಉತ್ತರ ಕೊಡಿ ಎಂದರು.

ಗುರು ಪತ್ನಿಗೆ ನಾಳೆಯೇ ಉದ್ಯೋಗ: ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹುತಾತ್ಮ ಗುರು ಪತ್ನಿ ಕಲಾವತಿಯರಿಗೆ ಸಂತ್ವಾನ ಹೇಳಿದ ಸಿಎಂ ಕುಮಾರಸ್ವಾಮಿ ಅವರು, ಕಲಾವತಿಯವರು ಗೌರವಯುತವಾಗಿ ಬದುಕು ನಡೆಸಲು ಕೆಲಸ ನೀಡುವ ಆಶ್ವಾಸನೆ ನೀಡಿದ್ದೆ. ಅದರಂತೆ ಅವರಿಗೆ ಬೆಂಗಳೂರಿಗೆ ಬರಲು ಹೇಳಿದ್ದೇನೆ. ನಾಳೆಯೇ ಕೆಲಸ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:CM KumaraswamyLok Sabha electionmandyaprime minister modiPublic TVState GovernmentSumalata AmbareeshSumalthaಅಂಬರೀಶ್ಪಬ್ಲಿಕ್ ಟಿವಿಪ್ರಧಾನಿ ಮೋದಿಮಂಡ್ಯರಾಜ್ಯ ಸರ್ಕಾರಲೋಕಸಭಾ ಚುನಾವಣೆಸಿಎಂ ಕುಮಾರಸ್ವಾಮಿಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
7 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
7 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
8 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?