Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ

Districts

ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ

Public TV
Last updated: February 27, 2019 9:22 pm
Public TV
Share
3 Min Read
CM HD KUMARASAWAMY AMBARESH 1 1
SHARE

– ಆತ್ಮೀಯರ ನಡುವೆ ಬಿರುಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ

ಮಂಡ್ಯ: ಜಿಲ್ಲೆಯ ಜನರ ಋಣದ ಭಾರ ನನ್ನ ಮೇಲಿದ್ದು, ಆ ಋಣವನ್ನು ತೀರಿಸುವ ಕಾರ್ಯ ನನ್ನ ಮೇಲಿದೆ. ಅಭಿವೃದ್ಧಿಯ ವಿಚಾರಕ್ಕೆ ಜಿಲ್ಲೆಗೆ ದೊಡ್ಡ ಅನಾಯ್ಯವಾಗಿದ್ದು, ಅಂಬರೀಶ್ ಅವರ ಕಾಲದಲ್ಲಿ ಮಾಡಲು ಸಾಧ್ಯವಾಗದ ಕಾರ್ಯಗಳಿಗೆ ನಾನು ಚಾಲನೆ ಕೊಟ್ಟಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ ಅಭಿವೃದ್ಧಿ ಯೋಜನೆಗಳ ಚಾಲನೆ ನೀಡುವ ಸಂಬಂಧ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ ಉದ್ದೇಶಿಸಿ ಸಿಎಂ ಕುಮಾರಸ್ವಾಮಿ ಅವರು ಮಾತನಾಡಿದರು. ಅಂಬರೀಶ್ ಹಾಗೂ ನಾನು ಆತ್ಮೀಯ ಸ್ನೇಹಿತರು. ಅವರು ನಿಧನ ಹೊಂದಿದ್ದ ಸಂದರ್ಭದಲ್ಲಿ ಅವರಿಗೆ ನೀಡಿದ ಗೌರವ ಇಡೀ ಜಿಲ್ಲೆಗೆ ನೀಡಿದ ಗೌರವ. ಇದನ್ನು ಅಂಬರೀಶ್ ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು. ಅಂದು ಮಂಡ್ಯ ಜಿಲ್ಲೆಗೆ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಕರೆತರುವುದು ಬೇಡ ಎಂದವರು ಇಂದು ಈ ಮಣ್ಣಿನ ಬಗ್ಗೆ ಪ್ರೀತಿ ತೋರಿಸುತ್ತಿದ್ದಾರೆ. ಅಂಬರೀಶ್ ಅವರಿಂದ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡುತ್ತಿದ್ದು, ನಿಮ್ಮ ಋಣವನ್ನು ತೀರಿಸುವ ಕಾರ್ಯವನ್ನು ಮಾಡಿದ್ದೇನೆ ಎಂದರು.

HDK MND

ನನ್ನ ಕುಟುಂಬವನ್ನು ಇಂದು ಬೀದಿಗೆ ಎಳೆದಿದ್ದಾರೆ. ನಾನು ಎಂದಾದರೂ ನನ್ನ ಮಗನನ್ನು ರಾಜಕೀಯಕ್ಕೆ ಕರೆತರುವ ಬಗ್ಗೆ ಮಾತನಾಡಿದ್ದೇನಾ ಎಂದು ಪ್ರಶ್ನಿಸಿದರು. ಅಲ್ಲದೇ ಜಿಲ್ಲೆಯ ಅಭಿವೃದ್ಧಿ ನನ್ನ ಜೀವನದ ಗುರಿಯಾಗಿದ್ದು, ಕಳೆದ ಚುನಾವಣೆಯಲ್ಲಿ 7 ಸ್ಥಾನಗಳಲ್ಲಿ ನಮ್ಮನ್ನು ಗೆದ್ದು ತಂದಿದ್ದೀರಿ. ನಿಮ್ಮ ಆಶೀರ್ವಾದದಿಂದ ಈ ಜಾಗದಲ್ಲಿ ನಿಂತಿದ್ದೇನೆ. ನನ್ನ ಕೊನೆಯ ಉಸಿರು ಇರುವವರೆಗೂ ಇದನ್ನು ಮರೆಯಲ್ಲ. ಕೇವಲ ಮಂಡ್ಯ ಜಿಲ್ಲೆಗಾಗಿ ಕಾರ್ಯಕ್ರಮ ಮಾಡುತ್ತೇನೆ ಎಂದು ಸಣ್ಣತನದ ಮಾತನಾಡುತ್ತಾರೆ. ಆದರೆ ಬೇರೆ ಬೇರೆ ಜಿಲ್ಲೆಗಳಿಗೆ ಯಾವ ಕೊಡುಗೆ ನೀಡಿದ್ದೇನೆ ನನಗೆ ಗೊತ್ತಿದೆ ಎಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಸ್ತಾಪಿಸಿ ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರಿಸಿದರು.

ಬದುಕಿರುವುದೇ ನಿಮಗಾಗಿ: ಮತ್ತೆ ತಮ್ಮ ಬದುಕಿನ ಕುರಿತು ಪ್ರಸ್ತಾಪ ಮಾಡಿದ ಸಿಎಂ ಎಚ್‍ಡಿಕೆ ನಾನು ಬದುಕಿರುವುದು ನಿಮಗಾಗಿ, ನಾಡಿನ ಜನತೆಗಾಗಿ ಎಂದರು. ಅಲ್ಲದೇ ರೈತರ ಸಾಲಮನ್ನಾ ವಿಚಾರದಲ್ಲಿ ನಾನು ಎಂದು ಸುಳ್ಳು ಹೇಳಿಲ್ಲ. ನಿನ್ನೆ ಬೆಳಗ್ಗೆ ಹತ್ತು ಗಂಟೆವರೆಗೂ 6 ಲಕ್ಷದ 40 ಸಾವಿರ ರೈತ ಕುಟುಂಬಗಳಿಗೆ 4 ಸಾವಿರದ 103 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇನೆ. ರಾಜ್ಯ ಸರ್ಕಾರದ ಖಜಾನೆಯಲ್ಲಿ ಇನ್ನೂ 6 ಸಾವಿರ ದುಡ್ಡು ಇಟ್ಟಿದ್ದೇನೆ. ಕೇಂದ್ರ ಪ್ರಧಾನಿ ರೀತಿ ನಾನು ಮಾತನಾಡಲ್ಲ ಎಂದು ಕಿಡಿಕಾರಿದರು.

SUMALATHA 1 2

ರೈತರ ಸಾಲಮನ್ನಾ ಮಾಡಿದರೆ ಮಾತ್ರ ರೈತರು ಆರಾಮವಾಗಿ ಇರುತ್ತಾರೆ ಎಂಬ ಭ್ರಮೆ ನನಗಿಲ್ಲ. ಸಮಗ್ರ ಅಭಿವೃದ್ಧಿಗಾಗಿ ನಾನು ದುಡಿಯುತ್ತೇನೆ. ಗಿರವಿ ಇಟ್ಟಿರುವ ಒಡವೆಗಳನ್ನ ಬಿಡಿಸಿಕೊಡುವ ನಿಟ್ಟಿನಲ್ಲಿ ಹೊಸ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಯೋಜನೆ ಮುಗಿಯುವವರೆಗೂ ಯಾವುದೇ ಮಾನಸಿಕ ಹಿಂಸೆ ಕೊಟ್ಟರೂ ಅಧಿಕಾರದಲ್ಲಿ ಇರುತ್ತೇನೆ. ಆದರೆ ಜಿಲ್ಲೆಯ ಟಿಕೆಟ್ ವಿಚಾರದಲ್ಲಿ ಈ ವೇದಿಕೆಯಲ್ಲಿ ಪ್ರಸ್ತಾಪ ಮಾಡಲ್ಲ. ಅದಕ್ಕೆ ರಾಜಕೀಯ ವೇದಿಕೆ ಇದೆ. ಆಗ ಮಾತನಾಡುತ್ತೇನೆ ಎಂದರು.

ಜಿಲ್ಲೆಯ ಜನ ಹಣ ಪಡೆದು ಮೋಸ ಹೋಗುವುದಿಲ್ಲ. ಯಾವುದೇ ಆಮಿಷಗಳಿಗೆ ಒಳಗಾಗಲ್ಲ. ಇದೇ ರೀತಿ ನಿಮ್ಮ ಬೆಂಬಲ ನಮಗೆ ನೀಡಿ ಯಾವುದೇ ಕಾರಣಕ್ಕೂ ಅನುಕಂಪದ ಮಾತುಗಳಿಗೆ ಮರುಳಾಗಬೇಡಿ. ನಿಜವಾಗಿ ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ ಎಂದು ಪರೋಕ್ಷವಾಗಿ ಸುಮಲತಾ ಅಂಬರೀಶ್ ಅವರಿಗೆ ಟಾಂಗ್ ಕೊಟ್ಟರು.

HDD 1 1

ಕನ್ನಡಿಗ ಮತ್ತೊಮ್ಮೆ ಪ್ರಧಾನಿ: ರಾಜ್ಯದಲ್ಲಿ 20 ಸ್ಥಾನಗಳಿಗೆ ಹೆಚ್ಚು ಸ್ಥಾನ ಪಡೆದುಕೊಂಡರೆ ದೆಹಲಿಯಲ್ಲಿ ಮತ್ತೊಮ್ಮೆ ಕನ್ನಡಿಗರೊಬ್ಬರು ಪ್ರಧಾನಿಯಾಗ ಬಹುದು ಎಂದು ಹೇಳಿದ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಎಚ್‍ಡಿಡಿ ಮತ್ತೊಮ್ಮೆ ಪ್ರಧಾನಿ ಆಗುವ ವಿಚಾರವನ್ನು ಬಿಚ್ಚಿಟ್ಟರು. ಅಲ್ಲದೇ ದೇವೇಗೌಡರು ಪ್ರಧಾನಿ ಆಗಿದ್ದಾಗ ಒಂದೇ ಒಂದು ಯೋಧರ ಕುಟುಂಬ ಅನಾಥರಾಗುವ ಘಟನೆ ನಡೆಯಲಿಲ್ಲ. ರೈತರ ಸಾಲಮನ್ನಾ ಮಾಡುವುದು ಪಾಪದ ಕೆಲಸ ಎನ್ನುವ ಪ್ರಧಾನಿಗೆ ಸರಿಯಾದ ಉತ್ತರ ಕೊಡಿ ಎಂದರು.

ಗುರು ಪತ್ನಿಗೆ ನಾಳೆಯೇ ಉದ್ಯೋಗ: ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹುತಾತ್ಮ ಗುರು ಪತ್ನಿ ಕಲಾವತಿಯರಿಗೆ ಸಂತ್ವಾನ ಹೇಳಿದ ಸಿಎಂ ಕುಮಾರಸ್ವಾಮಿ ಅವರು, ಕಲಾವತಿಯವರು ಗೌರವಯುತವಾಗಿ ಬದುಕು ನಡೆಸಲು ಕೆಲಸ ನೀಡುವ ಆಶ್ವಾಸನೆ ನೀಡಿದ್ದೆ. ಅದರಂತೆ ಅವರಿಗೆ ಬೆಂಗಳೂರಿಗೆ ಬರಲು ಹೇಳಿದ್ದೇನೆ. ನಾಳೆಯೇ ಕೆಲಸ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:CM KumaraswamyLok Sabha electionmandyaprime minister modiPublic TVState GovernmentSumalata AmbareeshSumalthaಅಂಬರೀಶ್ಪಬ್ಲಿಕ್ ಟಿವಿಪ್ರಧಾನಿ ಮೋದಿಮಂಡ್ಯರಾಜ್ಯ ಸರ್ಕಾರಲೋಕಸಭಾ ಚುನಾವಣೆಸಿಎಂ ಕುಮಾರಸ್ವಾಮಿಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Uday Bhanu Chib Arrest
Latest

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

Public TV
By Public TV
43 minutes ago
CJ Roy 2
Bengaluru City

ಸಿ.ಜೆ.ರಾಯ್ ಕೇಸ್ – ಆತ್ಮಹತ್ಯೆ ಹಿಂದಿನ ಕಾರಣ ಮೇಲ್ನೋಟಕ್ಕೆ ರಿವೀಲ್

Public TV
By Public TV
1 hour ago
kamakshipalya police station
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

Public TV
By Public TV
2 hours ago
Lucknow Murder
Crime

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Public TV
By Public TV
2 hours ago
Vegitables
Bengaluru City

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

Public TV
By Public TV
2 hours ago
school student heart attack
Davanagere

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?