ಅಹಮದಾಬಾದ್: ಟೀಮ್ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಕರ್ಣಿ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿರುವ ರಿವಾಬಾ ಜಡೇಜಾ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ರಿವಾಬಾ ಜಡೇಜಾ, ಬಿಜೆಪಿ ಸೇರಲು ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಸ್ಫೂರ್ತಿ. ಕೇವಲ ನಮ್ಮ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ನನ್ನ ಸೇವೆಸಲ್ಲಿಸಲು ಬಿಜೆಪಿ ಸೇರಿದ್ದರಿಂದ ನನಗೆ ಅವಕಾಶ ದೊರಕಿದೆ ಅಂತ ನಾನು ನಂಬಿದ್ದೇನೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಗುಜರಾತಿನ ಕೃಷಿ ಸಚಿವ ಆರ್.ಸಿ ಫಾಲ್ದು ಹಾಗೂ ಸಂಸದರಾದ ಪೂನಮ್ ಮದಂ ಅವರು ಉಪಸ್ಥಿತರಿದ್ದರು. ಕರ್ಣಿ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಿವಾಬಾ ಅವರು ಬಹಳಷ್ಟು ಹೆಸರು ಗಳಿಸಿದ್ದು, ಈಗ ರಾಜಕೀಯಕ್ಕೆ ಕಾಲಿಟ್ಟು ದೇಶಕ್ಕೆ ಸೇವೆ ಸಲ್ಲಿಸಲು ಮುಂದಾಗಿದ್ದಾರೆ.
ಜಡೇಜಾ ಅವರ ಜನಪ್ರಿಯತೆ ನಿಮಗೆ ಚುನಾವಣೆಗೆ ಲಾಭವಾಗುತ್ತದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಡೇಜಾ ಅವರು ನಮ್ಮ ರಜಪೂತ್ ಸಮುದಾಯಕ್ಕೆ ಮಾತ್ರ ಹೆಮ್ಮೆಯಲ್ಲ, ಯುವ ಜನಾಂಗಕ್ಕೂ ಹೆಮ್ಮೆ. ಆದ್ರೆ ಬಿಜೆಪಿ ಸೇಪಡೆಯಾಗುವ ವಿಚಾರ ನನ್ನ ವೈಯಕ್ತಿಕ ನಿರ್ಧಾರ. ಇದರಿಂದ ಸಮಾಜದಲ್ಲಿ ನನ್ನನ್ನು ನಾನು ಗುರುತಿಸುಕೊಳ್ಳುವುದಕ್ಕೆ ನೆರವಾಗುತ್ತದೆ. ಮಹಿಳಾ ಸಬಲಿಕರಣಕ್ಕೆ ಒಂದು ಉದಾಹರಣೆಯಾಗುತ್ತದೆ. ನಾನು ದೇಶಕ್ಕೆ ಮತ್ತು ನನ್ನ ಸಮುದಾಯಕ್ಕೆ ಸೇವೆ ಸಲ್ಲಿಸಲು ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ.
ಆದ್ರೆ ನನ್ನ ಪತಿ ಸೆಲೆಬ್ರಿಟಿಯಾಗಿರುವುದರಿಂದ ಅವರು ಯುತ್ ಐಕಾನ್. ಇದರಿಂದ ಬಹಳಷ್ಟು ಯುವಕರು ಕೂಡ ಬಿಜೆಪಿಯತ್ತ ಮುಖಮಾಡುವ ಸಾಧ್ಯತೆಯಿದೆ ಎಂದು ರಿವಾಬಾ ಅಭಿಪ್ರಾಯ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv