ಬಂಡೀಪುರಕ್ಕೆ ಬೆಂಕಿ- ಮೇವು, ನೀರಿಲ್ಲದೆ ನಾಡಿನತ್ತ ಆನೆಗಳ ಹೆಜ್ಜೆ

Public TV
1 Min Read
cng elephant

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳು ಮೇವು ನೀರಿಲ್ಲದೆ ಕಂಗಾಲಾಗಿವೆ.

ಸತತವಾಗಿ ಒಂದು ವಾರಕ್ಕೂ ಹೆಚ್ಚು ಬೆಂಕಿ ಹರಡಿದ ಪರಿಣಾಮ ಆ ಪ್ರದೇಶದಲ್ಲಿದ್ದ ಅಪಾರ ಪ್ರಮಾಣದ ಸಸ್ಯ ನಾಶವಾಗಿದೆ. ಇದರಿಂದ ಪ್ರಾಣಿಗಳು ಮೇವು ಹಾಗೂ ನೀರಿಲ್ಲದೆ ಆಹಾರವನ್ನರಸಿ ಕಾಡಂಚಿನ ಗ್ರಾಮಗಳಿಗೆ ಬರುತ್ತಿವೆ.

ಸಣ್ಣ ಪ್ರಾಣಿಗಳಿಂದ ಹಿಡಿದು ಆನೆಗಳು ಕೂಡ ಗ್ರಾಮದ ಜಮೀನುಗಳಿಗೆ ಲಗ್ಗೆ ಹಾಕುತ್ತಿವೆ. ಇದರಿಂದ ಭಯಭೀತರಾಗಿರುವ ಕಾಡಂಚಿನ ಗ್ರಾಮಸ್ಥರು ತಮ್ಮ ಬೆಳೆಗಳು ನಾಶವಾಗುತ್ತದೆಯೆಂದು ಆನೆಗಳನ್ನು ಕಾಡಿಗೆ ಅಟ್ಟಲು ಹರಸಾಹಸ ಪಡುತ್ತಿದ್ದಾರೆ.

cng elephant 2

ಚಾಮರಾಜನಗರದ ಬಂಡೀಪುರದಲ್ಲಿ ದುಷ್ಕರ್ಮಿಗಳು ಕಾಡಿಗೆ ಬೆಂಕಿ ಹಚ್ಚಿದ್ದರು. ಕಾಡು ಪ್ರಾಣಿಗಳಿಗೆ ಬೇಸತ್ತು ಬಂಡೀಪುರ ಅರಣ್ಯಕ್ಕೆ ಬೆಂಕಿ ಹಾಕಿರೋದಾಗಿ ಬಂಧಿತ ಆರೋಪಿಗಳು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದರು. ಇತ್ತೀಚೆಗೆ ಬಂಡೀಪುರ ಅರಣ್ಯದಂಚಿನ ಚೌಡಹಳ್ಳಿ, ಕಲೀಗೌಡನಹಳ್ಳಿ, ಹಂಗಳ ಮೊದಲಾದ ಕಡೆ ಹುಲಿ, ಚಿರತೆ, ಆನೆ ಗ್ರಾಮದತ್ತ ಮುಖ ಮಾಡಿದ್ದವು.

ಸತತ ನಾಲ್ಕೈದು ದಿನ ಕಾರ್ಯಾಚರಣೆ ನಡೆಸಿದ್ರೂ ಆತಂಕ ಮೂಡಿಸಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ವಿಫಲವಾಗಿದ್ದರು. ಹುಲಿಗೆ ಹೆದರಿದ ಕಾಡಂಚಿನ ಗ್ರಾಮಸ್ಥರು ಅರಣ್ಯಕ್ಕೆ ಬೆಂಕಿ ಇಟ್ಟಿದ್ದು, ಪರಿಣಾಮ ಸಾವಿರಾರು ಎಕರೆ ಪ್ರದೇಶ ಭಸ್ಮವಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *