ಇವರು ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ: ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ

Public TV
1 Min Read
ananthkumar hegde

ಬೆಂಗಳೂರು: ಕುಂಕುಮವನ್ನು ನೋಡಿದರೆ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟತ್ತಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‍ಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಹಿಂದೂ ಹಾಗೂ ಬಿಜೆಪಿ ವಿರುದ್ಧ ಮಾತನಾಡಿರುವುದಕ್ಕೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಅನಂತ್ ಕುಮಾರ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರು ಕುಂಕುಮ ಇಟ್ಟಿಕೊಂಡಿರುವ ಫೋಟೋವೊದನ್ನು ಹಾಕಿ “ಅಯ್ಯೋ! ಭಯ, ಭೀತಿಗೊಳ್ಳಬೇಡಿ. ಇವರು ಹಣೆಯಲ್ಲಿ ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ #selfie with tilak” ಅಂತ ಬರೆದು ಟ್ವೀಟ್ ಮಾಡಿದ್ದಾರೆ.ಇದನ್ನೂ ಓದಿ: ಕುಂಕುಮಧಾರಿಯನ್ನ ನೋಡಿದಾಗ ಭಯ ಹುಟ್ಟದೆ, ಗೌರವ ಹುಟ್ಟುತ್ತಾ: ಸಿದ್ದರಾಮಯ್ಯ ಪ್ರಶ್ನೆ

ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರ ಟ್ವೀಟ್ ಬಗ್ಗೆ ಬಿಜೆಪಿ ನಾಯಕ ಸಿ.ಟಿ ರವಿ ಅವರು ಕೂಡ ರೀ-ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ವೇಳೆ ಇದೇ ಕುಂಕುಮ ತಾನೆ ನಿಮ್ಮ ಹಣೆಮೇಲೆ ಇದ್ದಿದ್ದು. ಆಗ ನಿಮಗೆ ಭಯವಿರಲಿಲ್ಲವೇ? ಬೇಕಾದಾಗ ಕುಂಕುಮ, ತಿಲಕ ಹಚ್ಚಿ ಬೇಡವಾದಾಗ ಅದೇ ಸಂಪ್ರದಾಯದ ವಿರುದ್ಧ ಕೇವಲ ಮತಗಳಿಕೆಗೋಸ್ಕರ ಜನರನ್ನು ಎತ್ತಿಕಟ್ಟುವ ನಿಮ್ಮ ಕೀಳು ಮನಸ್ಥಿತಿಗೆ ಭಾರತದ ಯಾವ ಭಾಗದಲ್ಲೂ ಬೆಲೆ ಇಲ್ಲ. ಇನ್ನೂ ಎಷ್ಟು ನೀಚ ರಾಜಕಾರಣ ಮಾಡುತ್ತೀರ ಸಿದ್ದರಾಮಯ್ಯ ಸಾರ್?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *