ಬದರಿನಾಥ, ಕೇದಾರನಾಥ ದೇಗುಲ ಸಮಿತಿಗೆ ಅನಂತ್ ಅಂಬಾನಿ ನೇಮಕ

Public TV
1 Min Read
Anant Ambani

ಡೆಹ್ರಾಡೂನ್: ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಅವರನ್ನು ಪ್ರಸಿದ್ಧ ತೀರ್ಥ ಕ್ಷೇತ್ರಗಳಾದ ಬದರಿನಾಥ, ಕೇದಾರನಾಥ ದೇಗುಲ ಸಮಿತಿಗೆ ಸದಸ್ಯರನ್ನಾಗಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಅವರು ಶುಕ್ರವಾರ ನೇಮಿಸಿದ್ದಾರೆ.

ಮನೆಯಲ್ಲಿ ಶುಭಕಾರ್ಯ ನಡೆಯುವಾಗ ಮುಖೇಶ್ ಅಂಬಾನಿ ಕುಟುಂಬಸ್ಥರು ಕೇದಾರನಾಥ ಹಾಗೂ ಬದರಿನಾಥ ದೇಗುಲಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತಾರೆ. ಕಳೆದ ವರ್ಷ ನಡೆದ ಪುತ್ರಿ ಇಶಾ ಅಂಬಾನಿ ವಿವಾಹದ ನಿಮಿತ್ತ ಮುಖೇಶ್ ಅಂಬಾನಿ ಅವರು, ಕೇದಾರನಾಥ ಮತ್ತು ಬದರಿನಾಥ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಕೇದಾರನಾಥ ದೇವಸ್ಥಾನವು ಹಿಂದೂಗಳ ಪ್ರಸಿದ್ಧ ದೇವಾಲಯವಾಗಿದೆ. ಈ ದೇವಾಲಯವು ಉತ್ತರಾಖಂಡದ ಗರ್ವಾಲ್ ಹಿಮಾಲಯ ಶ್ರೇಣಿಯ ಸಮೀಪ ಮಂದಾಕಿನಿ ನದಿ ಪಾತ್ರದಲ್ಲಿ ನಿರ್ಮಾಣವಾಗಿದೆ.

ಕೇದಾರನಾಥ ದೇವಾಲಯದ ಪ್ರದೇಶದಲ್ಲಿ ಹಿಮ ಹೆಚ್ಚಾಗಿ ಬೀಳುತ್ತದೆ. ಹೀಗಾಗಿ ಭಕ್ತರಿಗೆ ಏಪ್ರಿಲ್‍ನಿಂದ ನವೆಂಬರ್ ತಿಂಗಳಲ್ಲಿ ಮಾತ್ರ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಡಲಾಗುತ್ತದೆ.

Kedarnath

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *