ಗಂಡ ಸತ್ತು ಒಂದೂವರೆ ತಿಂಗಳಾಗಿಲ್ಲ, ಇದೆಲ್ಲಾ ಬೇಕಾ?: ಸುಮಲತಾ ವಿರುದ್ಧ ರೇವಣ್ಣ ಕಿಡಿ

Public TV
2 Min Read
Sumalatha Minister Revanna 1

ಬೆಂಗಳೂರು: ಪತಿ, ಮಾಜಿ ಸಚಿವ ಅಂಬರೀಶ್ ಸತ್ತು ಇನ್ನೂ ಒಂದೂವರೆ ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲ ಬೇಕಿತ್ತಾ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ಸಿಎಂ ಕುಮಾರಸ್ವಾಮಿ ಅವರು ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಟ್ಟರು. ಆದರೆ ಸುಮಲತಾ ಅವರಿಗೆ ಯಾವುದೇ ಕೃತಜ್ಞತೆಯೂ ಇಲ್ಲ. ಸುಮಲತಾ ಅವರು ಚಾಲೆಂಜ್ ಮಾಡುತ್ತಿದ್ದಾರೆ. ಇದನ್ನ ನಾವು ಎದುರಿಸಲು ಸಿದ್ಧರಾಗಿದ್ದೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನು ಓದಿ: ರಾತ್ರಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ್ರು ಸುಮಲತಾ..!

hsn revanna

ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸುಮಲತಾ ಅವರು, ಈ ರೀತಿಯ ಟೀಕೆಗಳು ರಾಜಕಾರಣದಿಂದ ಹೊರತಾಗಿಲ್ಲ. ಕೆಲವರು ವೈಯಕ್ತಿಕ ವಿಚಾರಗಳನ್ನೇ ಬಳಸಿಕೊಂಡು ವಾಗ್ದಾಳಿ ನಡೆಸುತ್ತಾರೆ. ಇದು ಅವರಿಗೆ ಅಭ್ಯಾಸವಾಗಿರುತ್ತದೆ. ಇದಕ್ಕೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ. ಇದು ನಮ್ಮ ಸಂಸ್ಕಾರವೂ ಅಲ್ಲ. ಅಂಬರೀಶ್ ಅವರು 25 ವರ್ಷ ರಾಜಕೀಯದಲ್ಲಿ ಇದ್ದರೂ ಯಾರೊಬ್ಬರ ವಿರುದ್ಧವೂ ಟೀಕೆ ಮಾಡಲಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ. ಇದನ್ನು ಓದಿ: ದರ್ಶನ್ ಇರುವಾಗ ಅಲ್ಲಿ ನಾನ್ಯಾಕೆ- ಸುಮಲತಾ ರಾಜಕೀಯ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ

ಈ ರೀತಿಯ ಟೀಕೆಗಳಿಗೆ ಜನರೇ ಉತ್ತರ ನೀಡುತ್ತಾರೆ. ನನಗೆ ರಾಜಕಾರಣಕ್ಕಿಂತ ಸಂಬಂಧಗಳೇ ಮುಖ್ಯ. ಈ ನಿಟ್ಟಿನಲ್ಲಿ ನಾನು ರಾಜಕಾರಣಕ್ಕೆ ಬಂದಿದ್ದೇನೆ. ಮಂಡ್ಯದ ಜನರ ಜೊತೆಗೆ ಅಂಬರೀಶ್ ಹಾಗೂ ನನಗೆ ಋಣಾನುಬಂಧವಿದೆ ಎಂದು ಹೇಳಿದರು.

mys sumalatha 3

ನನ್ನ ವಿರುದ್ಧ ಟೀಕೆ ಮಾಡಿದರೂ ಜನರು ಮಾತ್ರ ನನ್ನ ಬೆಂಬಲಕ್ಕೆ ನಿಲ್ಲುತ್ತಿದ್ದಾರೆ. ಚುನಾವಣೆಯಲ್ಲಿ ಮತದಾರರ ಬೆಂಬಲ ಮುಖ್ಯ. ಹೀಗಾಗಿ ನನಗೆ ಯಾವುದೇ ಹೆದರಿಕೆಯಿಲ್ಲ. ನನ್ನ ವಿರುದ್ಧ ಟೀಕೆ ಮಾಡುವವರು ತಿಳಿದು ಮಾತನಾಡಬೇಕು ಎಂದು ಕಿಡಿಕಾರಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಅಂಬರೀಶ್ ತಂದೆ ಸ್ಥಾನದಲ್ಲಿ ಕಾಣುತ್ತಿದ್ದರು. ಹೀಗಾಗಿ ಅವರ ಕುಟುಂಬದವರ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರಿಗೆ ಪಕ್ಷದಿಂದ ಮೆಚ್ಚುಗೆ ಬೇಕಿತ್ತು. ಹೀಗಾಗಿ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಗೆ ನಾನು ಬೇಜಾರು ಮಾಡಿಕೊಳ್ಳಲ್ಲ ಎಂದು ತಿರುಗೇಟು ಕೊಟ್ಟರು.

DC THAMMANNA SUMALATHA

ಅಂಬರೀಶ್ ಅವರು ಸ್ವಾರ್ಥ, ದ್ವೇಷ ರಾಜಕಾರಣ ಮಾಡಿಲ್ಲ. ಇತ್ತ ನನ್ನ ಬೆಂಬಲಕ್ಕೆ ಮಂಡ್ಯದ ಜನತೆ ನಿಂತಿದೆ. ನಾನು ರಾಜಕೀಯಕ್ಕೆ ಬಂದಿದ್ದ ಕಾರಣವೇ ಜನರು. ಯಾರನ್ನೂ ದ್ವೇಷಿಸುವ, ಎದುರು ಹಾಕಿಕೊಳ್ಳುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ. ನಾನು ಯಾರಿಗೂ ಸವಾಲು ಹಾಕಿಲ್ಲ ಎಂದು ತಿಳಿಸಿದರು.

ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಕುರಿತು ಪ್ರತಿಕ್ರಿಯೆ ನೀಡಿದ ಸುಮಲತಾ ಅವರು, ಮಂಡ್ಯದ ಸಮಸ್ಯೆಗಳ ಕುರಿತು ಮೀರಾ ಶಿವಲಿಂಗಯ್ಯ ಅವರು ಸಲಹೆ ನೀಡಿದ್ದಾರೆ. ಇದರ ಹೊರತಾಗಿ ನಾವು ರಾಜಕೀಯ ವಿಚಾರವಾಗಿ ಮಾತನಾಡಿಲ್ಲ. ಮಂಡ್ಯ ಅಭಿವೃದ್ಧಿಯ ಕುರಿತು ಕೆಲವು ಸಲಹೆ ನೀಡಿದ್ದಾರೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *