ಮಂಡ್ಯ ಚುನಾವಣೆ – ಸ್ಪಷ್ಟನೆಯೊಂದಿಗೆ ವದಂತಿಗಳಿಗೆ ತೆರೆ ಎಳೆದ ಸುಮಲತಾ

Public TV
1 Min Read
SUMALATHA

ಮಂಡ್ಯ: ಸುಮಲತಾ ಅವರು ಲೋಕಸಭಾ ಚುನವಾಣೆ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ವಂದತಿ ಹಬ್ಬಿತ್ತು. ಇದಕ್ಕೆ ಸ್ವತಃ ಸುಮಲತಾ ಅವರೆ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ಸುಮಲತಾ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇನ್ನೂ ಮೂರು-ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆಯ ಬಗ್ಗೆ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೆ ಸಾಮಾಜಿಕ ಜಾಲತಾಣಗಳಲ್ಲಿ ಸುಮಲತಾ ಅವರು ಲೋಕಸಭಾ ಚುನವಣಾ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ವದಂತಿ ಹರಿದಾಡುತಿತ್ತು. ಈ ಹಿನ್ನೆಲೆಯಲ್ಲಿ ಅವರು ಫೇಸ್‍ಬುಕ್ ನಲ್ಲಿ ಒಂದು ಪೋಸ್ಟ್ ಹಾಕಿ ಸ್ಪಷ್ಟನೆ ಕೊಟ್ಟಿದ್ದಾರೆ.

MND SUMALATHA copy

ಫೇಸ್‍ಬುಕ್ ಪೋಸ್ಟ್:
ಮಂಡ್ಯ ಜನರಲ್ಲಿ ಒಂದು ಮನವಿ ಇದೆ. ಮಂಡ್ಯ ಜನರ ಋಣ ತೀರಿಸಲು ನಾನು ಬದ್ಧಳಾಗಿರುವೆ. ಆದರೆ ಮಂಡ್ಯ ಜನರ ದಿಕ್ಕು ತಪ್ಪಿಸಲು ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರ ಮಾಡುತ್ತಿದ್ದಾರೆ. ಇಂದು ಮುಂದೆ ಯಾವುದೇ ಊಹಾಪೋಹದ ಗಾಳಿ ಸುದ್ದಿಗಳಿಗೆ ಕಿವಿಕೊಡಬೇಡಿ. ನಿಮ್ಮ ಬೆಂಬಲ ಮತ್ತು ಆಶೀರ್ವಾದ ಸದಾ ನನ್ನೊಂದಿಗಿರಲಿ ಎಂದು ಈ ಮೂಲಕ ನಾನು ನಿಮ್ಮನ್ನು ಕೇಳಿ ಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.

ನಿಮ್ಮ ಪ್ರೀತಿ, ಕಾಳಜಿ, ಒತ್ತಾಸೆ, ಬೆಂಬಲಗಳೇ ನಮಗೆ ಶ್ರೀರಕ್ಷೆ. ಅಂಬಿ ಅಮರ, ಇಂತಿ ನಿಮ್ಮ ಸುಮಲತಾ ಅಂಬರೀಶ್ ಎಂಬ ಪೋಸ್ಟ್ ಹಾಕುವ ಮೂಲಕ ತಮ್ಮ ಅಧಿಕೃತ ಫೇಸ್‍ಬುಕ್ ಪೇಜ್‍ನಲ್ಲಿ ಸುಮಲತಾ ಅವರು ಅಸಮಧಾನವನ್ನು ಹೊರಹಾಕಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *