Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುನಿಯಪ್ಪ ವಿರುದ್ಧ ಬಂಡಾಯ – ದೆಹಲಿಗೆ ದೂರು ಕೊಟ್ಟ ಕೋಲಾರ ಕೈ ಶಾಸಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮುನಿಯಪ್ಪ ವಿರುದ್ಧ ಬಂಡಾಯ – ದೆಹಲಿಗೆ ದೂರು ಕೊಟ್ಟ ಕೋಲಾರ ಕೈ ಶಾಸಕರು

Districts

ಮುನಿಯಪ್ಪ ವಿರುದ್ಧ ಬಂಡಾಯ – ದೆಹಲಿಗೆ ದೂರು ಕೊಟ್ಟ ಕೋಲಾರ ಕೈ ಶಾಸಕರು

Public TV
Last updated: March 14, 2019 6:37 pm
Public TV
Share
2 Min Read
KH MUNIYAPPA
SHARE

ಕೋಲಾರ: ಏಳು ಬಾರಿ ಕೋಲಾರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿ ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಸಂಸದ ಕೆಎಚ್ ಮುನಿಯಪ್ಪ ಅವರಿಗೆ ಈ ಬಾರಿ ಸ್ವಪಕ್ಷಿಯ ಶಾಸಕರೇ ಟಿಕೆಟ್ ನೀಡದಂತೆ ಬಂಡಾಯ ಹೂಡಿದ್ದಾರೆ. ಜಿಲ್ಲೆಯ ನಾಲ್ಕು ಜನ ಕಾಂಗ್ರೆಸ್ ಶಾಸಕರು, ಸ್ವಾತಂತ್ರ್ಯ ಅಭ್ಯರ್ಥಿ ಸೇರಿದಂತೆ ಹಲವು ಮುಖಂಡರು ಹಾಲಿ ಸಂಸದ ಮುನಿಯಪ್ಪ ಅವರಿಗೆ ಟಿಕೆಟ್ ನೀಡದಂತೆ ದೆಹಲಿ ಹೈಕಮಾಂಡ್‍ಗೆ ಮನವಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆ ಘೋಷಣೆ ಆಗುತ್ತಿದಂತೆ ಜಿಲ್ಲೆಯ ರಾಜಕಾರಣ ರಂಗೇರಿದ್ದು, ಮುನಿಯಪ್ಪ ಅವರ ವಿರೋಧಿ ಬಣದ ಜಿಲ್ಲೆಯ ನಾಯಕರು ಪಕ್ಷಾತೀತವಾಗಿ ಒಂದಾಗಿದ್ದಾರೆ. ಅಲ್ಲದೇ ಅವರಿಗೆ ಟಿಕೆಟ್ ತಪ್ಪಿಸಲು ಸ್ವಪಕ್ಷಿಯವರೇ ಅಖಾಡಕ್ಕೆ ಇಳಿದಿದ್ದು, ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ.

KH MUNIYAPPA KLR

ವಿಶೇಷತೆ ಎಂದರೆ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಎಸ್.ಎನ್ ನಾರಾಯಣಸ್ವಾಮಿ, ಶಿಢ್ಲಘಟ್ಟ ಶಾಸಕ ವಿ.ಮುನಿಯಪ್ಪ, ಮುಳಬಾಗಲು ಪಕ್ಷೇತರ ಶಾಸಕ ಎಚ್.ನಾಗೇಶ್, ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಮುನಿಯಪ್ಪಗೆ ಬಿಸಿ ತುಪ್ಪವಾಗ ಪರಿಣಮಿಸಿದ್ದಾರೆ. ಈಗಾಗಲೇ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಈ ಬಾರಿ ಕೆ.ಎಚ್ ಮುನಿಯಪ್ಪಗೆ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ವಿರೋಧ ಇರುವುದರಿಂದ ಇವರ ಬದಲಿಗೆ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕೋಲಾರದಿಂದ ಟಿಕೆಟ್ ನೀಡಿ ಎಂದು ಒತ್ತಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಮ್ಮಿಶ್ರ ಸರ್ಕಾರ ಮೈತ್ರಿ ಧರ್ಮದಂತೆ ಕೋಲಾರ ಕ್ಷೇತ್ರ ಕಾಂಗ್ರೆಸ್ ಪಕ್ಷದ ಪಾಲಾಗಿದ್ದು, ಹಾಲಿ ಸಂಸದರಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಎಂದಿನಂತೆ ಹೈಕಮಾಂಡ್‍ನಿಂದ ತಮ್ಮ ಹೆಸರು ಶಿಫಾರಸ್ಸು ಮಾಡಿಕೊಂಡು ಬಂದು ತಮ್ಮ ವಿರೋಧಿಗಳಿಗೆ ಟಾಂಗ್ ಕೊಡಲು ಸಂಸದರು ದೆಹಲಿ ಸೇರಿದಂತೆ ಬೆಂಗಳೂರಿನಲ್ಲಿ ಠಿಕ್ಕಾಣಿ ಹೂಡಿದ್ದಾರೆ.

RAMESH KUMAR

ಇತ್ತ ಸಂಸದರ ವಿರುದ್ಧ ಕ್ಷೇತ್ರದಲ್ಲಿ ಸೇರಿದಂತೆ ಬೆಂಗಳೂರಿನ ಅಶೋಕ ಹೋಟೆಲ್‍ನಲ್ಲಿ ಕೆ.ಹೆಚ್ ಹಠಾವೋ ಕೋಲಾರ ಬಚಾವೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಿಂದುಳಿದ ವರ್ಗಗಳ ಮುಖಂಡರು ಇತ್ತೀಚಿಗೆ ಪರೋಕ್ಷವಾಗಿ ವಿಧಾನಪರಿಷತ್ ಸದಸ್ಯ ನಜೀರ್ ಅಹಮದ್ ಅಭಿನಂದನಾ ಸಮಾರಂಭದ ಹೆಸರಿನಲ್ಲಿ ಮುನಿಯಪ್ಪರ ರಾಜಕೀಯ ವಿರೋಧಿಗಳನ್ನು ಒಟ್ಟುಗೂಡಿಸಿ ಬಹಿರಂಗವಾಗಿ ವಿರೋಧಿ ಬಣ ತಯಾರಿ ನಡೆಸಿತ್ತು. ಆದರೆ ಎಲ್ಲೂ ವಿರೋಧಿ ನಾಯಕರ ವಿರುದ್ಧ ಮಾತನಾಡದ ಮುನಿಯಪ್ಪ ತಮ್ಮದೇ ಶೈಲಿಯಲ್ಲಿ ಲೋಕಸಭೆ ಚುನಾವಣೆ ತಯಾರಿ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣೆ ಬಂದಾಗ ಇವೆಲ್ಲಾ ಸಹಜ, ಅವರು ಯಾರು ಕೂಡ ನಮ್ಮ ವಿರೋಧಿಗಳಲ್ಲ ಎಂದು ಮೃದು ಮಾತನಾಡಿದ್ದಾರೆ. ಕಳೆದ ಏಳು ಚುನಾವಣೆಗಳಲ್ಲಿ ವಿರೋಧಿಗಳನ್ನು ಕಟ್ಟಿ ಹಾಕಿ, ಭಿನ್ನಾಭಿಪ್ರಾಯ, ಬಂಡಾಯ, ಹೋರಾಟಗಳ ಶಮನ ಮಾಡುವ ತಂತ್ರಗಳಲ್ಲಿಂದಲೇ ಜಯಗಳಿಸಿರುವ ಮುನಿಯಪ್ಪ ಅವರಿಗೆ ಇದು ಸಾಮಾನ್ಯ ಎಂಬಂತೆ ಆಗಿದೆ. ಆದರೆ ಬಾರಿ ಸ್ವಪಕ್ಷಿಯರೇ ಆಗಿರುವ ಬಂಡಾಯ ಶಾಸಕರನ್ನು ಹೇಗೆ ನಿಭಾಯಿಸುತ್ತಾರೆ ಎಂಬುವುದು ಮಾತ್ರ ಕುತೂಹಲವಾಗಿದೆ.

KH MUNIYAPPA KLR r

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:congressdelhiKolarlegislatorsLok Sabha electionMP KH MuniyappaPublic TVRebelಕಾಂಗ್ರೆಸ್ಕೋಲಾರದೆಹಲಿಪಬ್ಲಿಕ್ ಟಿವಿಬಂಡಾಯಲೋಕಸಭಾ ಚುನಾವಣೆಶಾಸಕರುಸಂಸದ ಕೆಎಚ್ ಮುನಿಯಪ್ಪ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
1 minute ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
28 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
48 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?