Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಾಖಲೆ ಇಲ್ಲದೆ ಹಣ ಒಯ್ಯುವಾಗ ಹುಷಾರ್ – ರಾಜ್ಯಾದ್ಯಂತ ಚೆಕ್‌ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಅಲರ್ಟ್

Public TV
Last updated: March 15, 2019 7:26 am
Public TV
Share
2 Min Read
SEIZE copy
SHARE

– ಲಕ್ಷಾಂತರ ರೂಪಾಯಿ ನಗದು, ಮದ್ಯ ಸೀಜ್

ಬೆಂಗಳೂರು: ರಾಜ್ಯದೆಲ್ಲೆಡೆ ದಾಖಲೆಯಿಲ್ಲದ ಹಣ ಸಾಗಾಟ ನಡೆಯುತ್ತಿದ್ದ ಪರಿಣಾಮ ಚೆಕ್‍ಪೋಸ್ಟ್ ಗಳಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ದಾಖಲೆ ಇಲ್ಲದೆ ಹಣ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದು ಹಣವನ್ನು ಜಪ್ತಿ ಮಾಡಲಾಗಿದೆ. ಲೋಕಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು 20 ಲಕ್ಷ ರೂಪಾಯಿಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಜಗದೀಶ್ ಗುರುಗುಂಟ, ನಾಗಪ್ಪ ಸನದೆ ಮತ್ತು ದೇವನ್ ಅಪ್ಪಾ ಸಾಹೇಬ್ ದೇಸಾಯಿ ಅವರಿಗೆ ಸೇರಿದ್ದ ಹಣ ಎನ್ನಲಾಗಿದೆ. ದಾಖಲೆ ಇಲ್ಲದೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿದ್ದಾಗ ವಶಕ್ಕೆ ಪಡೆದಿದ್ದಾರೆ. ತಹಶೀಲ್ದಾರ್ ಶಶಿಧರ್ ಮಾಡ್ಯಾಳ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಈ ಹಣ ಯಾರದ್ದು, ಯಾವ ಉದ್ದೇಶಕ್ಕಾಗಿ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

GDG SEIZE AV 8

ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬೆಳ್ಳಿ ಹಾಗೂ ಬಂಗಾರದ ಒಡವೆಗಳನ್ನು ದಾವಣಗೆರೆಯಲ್ಲಿ ಫ್ಲೇಯಿಂಗ್ ಸ್ಕ್ವಾಡ್ ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ನಗರದ ರಿಲಯನ್ಸ್ ಮಾರ್ಕೆಟ್ ಬಳಿ ಹೊಸಪೇಟೆ ಮೂಲದ ಏಂ 35-ಓ-7446 ನಂಬರ್ ಕಾರಿನಲ್ಲಿ ಸಾಗಿಸುತ್ತಿದ್ದ 10 ಕೆಜಿ ಬೆಳ್ಳಿ ಆಭರಣ, 650 ಗ್ರಾಂ ಬಂಗಾರದ ಮೂಗುತಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್.ಪಿ ಚೇತನ್ ರವರ ಮಾಹಿತಿ ಮೇರೆಗೆ ಫ್ಲೈಯಿಂಗ್ ಸ್ಕ್ವಾಡ್ ಮುಖ್ಯಸ್ಥ ಸಾಹಿಲ್ ಅಬ್ದುಲ್ ಬಾಷಾ ನೇತೃತ್ವದಲ್ಲಿ ಕಾರ್ ಪರಿಶೀಲನೆ ನಡೆಸಿದಾಗ ದಾಖಲೆ ಇಲ್ಲದೆ ಬೆಳ್ಳಿ ಹಾಗೂ ಚಿನ್ನಾಭರಣಗಳು ಪತ್ತೆಯಾಗಿತ್ತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರು, ಆಭರಣ ಹಾಗೂ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಅಪಾರ ಪ್ರಮಾಣದ ಆಭರಣಗಳನ್ನು ತಂದು ಅಭ್ಯರ್ಥಿಗಳಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

vlcsnap 2019 03 15 07h24m13s311

ಬೀದರ್‍ನಲ್ಲಿ ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಜಪ್ತಿ ಮಾಡಿದ್ದಾರೆ. ವಿದೇಶಿ ಬ್ರ್ಯಾಂಡ್‍ನ 1300 ಮದ್ಯ ಬಾಟಲ್‍ಗಳನ್ನು ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 9ರ ಚಂಡಕಾಪೂರ್ ಚಕ್ ಪೋಸ್ಟ್ ಬಳಿ ಜಪ್ತಿ ಮಾಡಲಾಗಿದೆ. ಒಟ್ಟು 54 ಲಕ್ಷ ಮೌಲ್ಯದ ಮದ್ಯ ಹಾಗೂ 2 ಕಾರನ್ನು ವಶಕ್ಕೆ ಪಡೆದಿದ್ದು, ಜೊತೆಗೆ ಇಬ್ಬರು ಆರೋಪಿಗನ್ನು ಅಬಕಾರಿ ಪೊಲಿಸರು ವಶಕ್ಕೆ ಪಡೆದಿದ್ದಾರೆ.

ಗದಗ ಜಿಲ್ಲೆಯ ನರಗುಂದ ವಿಧಾನಸಭಾ ಕ್ಷೇತ್ರದ ಆಚಮಟ್ಟಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ 76,22 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ನರಗುಂದ ತಹಶೀಲ್ದಾರ್ ಆಶಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಹಾಸನದಿಂದ ಗೋಕಾಕ್‍ಗೆ ಮದ್ಯವನ್ನು ಸಾಗಿಸುತ್ತಿತ್ತು ಎಂದು ತಿಳಿದುಬಂದಿದೆ. 1,700 ಬಾಕ್ಸ್ ಮದ್ಯವನ್ನು ವಶಕ್ಕೆ ಪಡೆದು ಗದಗಕ್ಕೆ ಅಧಿಕಾರಿಗಳು ಕಳುಹಿಸಿದ್ದಾರೆ.

vlcsnap 2019 03 15 07h24m00s985

ರಾಯಚೂರಿನಲ್ಲಿ ತೆಲಂಗಾಣದಿಂದ ಅಕ್ರಮವಾಗಿ ಸಾಗಣೆಯಾಗುವ ಮದ್ಯ ಹಾಗೂ ಕಲಬೆರಕೆ ಸೇಂದಿ ದಂಧೆಯ ನಿಯಂತ್ರಣಕ್ಕೆ ಅಂತರ್ ರಾಜ್ಯ ಪೊಲೀಸರು ಪಣತೊಟ್ಟು ನಿಂತಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಐದು ಗಡಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಒಟ್ಟಾಗಿ ಗಡಿಭಾಗದಲ್ಲಿ ಅಕ್ರಮ ಸಾಗಾಣೆ ನಿಯಂತ್ರಣಕ್ಕೆ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurucustodyliquorLok Sabha electionmoneyofficialspolicePublic TVಅಧಿಕಾರಿಗಳುಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಮದ್ಯಲೋಕಸಭಾ ಚುನಾವಣೆವಶಹಣ
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
2 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
12 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Tata Group Air India
Latest

Plane Crash | ಟಾಟಾ ಗ್ರೂಪ್ ಇತಿಹಾಸದ ಕರಾಳ ದಿನಗಳಲ್ಲಿ ಇದೂ ಒಂದು – ಸಂಸ್ಥೆಯ ಅಧ್ಯಕ್ಷರಿಂದ ಭಾವುಕ ಪತ್ರ

Public TV
By Public TV
1 hour ago
Meghalaya Honeymoon
Crime

Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

Public TV
By Public TV
2 hours ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
2 hours ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
2 hours ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
3 hours ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?