ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಲ್ಲಿಸಿದ್ದ ಮನವಿಯನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ನಿರಾಕರಿಸಿದ್ದಾರೆ ಎಂದು ದೆಹಲಿ ಬಿಜೆಪಿ ನಾಯಕರು ತಿಳಿಸಿದ್ದಾರೆ.
ವೈಯಕ್ತಿಕ ಕಾರಣಗಳಿಂದಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನಗೆ ರಾಜಕೀಯ ಹಾಗೂ ಚುನಾವಣಾ ಸ್ಪರ್ಧೆಯಲ್ಲಿ ಆಸಕ್ತಿಯಿಲ್ಲವೆಂದು ಸೆಹ್ವಾಗ್ ತಿಳಿಸಿದ್ದಾರೆ. ಆದರೆ ಟೀಂ ಇಂಡಿಯಾದ ಮತ್ತೊಬ್ಬ ಕ್ರಿಕೆಟರ್ ಗೌತಮ್ ಗಂಭೀರ್ ಅವರು ಸ್ಪರ್ಧೆಯ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಮುಖಂಡರು ಹೇಳಿದ್ದಾರೆ. ಇದನ್ನು ಓದಿ: ಸೇನೆಯ ಬಗ್ಗೆ ಅವಮಾನಿಸುವ ಪಕ್ಷದಲ್ಲಿ ಇರಲ್ಲ- ಸೋನಿಯಾ ಆಪ್ತ ಟಾಮ್ ವಡಕ್ಕನ್ ಬಿಜೆಪಿಗೆ ಸೇರ್ಪಡೆ
ಬಿಜೆಪಿ ಸಂಸದ ಪರ್ವೇಶ್ ವರ್ಮ ಅವರ ಕ್ಷೇತ್ರವಾದ ಪಶ್ಚಿಮ ದೆಹಯಿಂದ ವೀರೇಂದ್ರ ಸೆಹ್ವಾಗ್ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಮುಂದಾಗಿತ್ತು. ಆದರೆ ಸೆಹ್ವಾಗ್ ಟಿಕೆಟ್ ನಿರಾಕರಿಸಿದ್ದಾರೆ ಎಂದರು.
ವೀರೇಂದ್ರ ಸೆಹ್ವಾಗ್ ಹರ್ಯಾಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಮಾಧ್ಯಮಗಳು ಫೆಬ್ರವರಿಯಲ್ಲಿ ವರದಿ ಮಾಡಿದ್ದವು. ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಸೆಹ್ವಾಗ್ ಅವರು, ಇದು ಕೇವಲ ಊಹಾಪೋಹ ಅಷ್ಟೇ. 2014ರ ಲೋಕಸಭಾ ಚುನಾವಣೆ ವೇಳೆಯೂ ಇದೇ ವದಂತಿ ಕೇಳಿ ಬಂದಿತ್ತು. ಈಗಲೂ ಹಾಗೇ ಆಗುತ್ತಿದೆ. ರಾಜಕೀಯದಲ್ಲಿ ನನಗೆ ಈಗಲೂ ಆಸಕ್ತಿಯಿಲ್ಲ, ಮುಂದೆಯೂ ಕೂಡ ಎಂದು ಹೇಳಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv