Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೋಳಿ ಹಬ್ಬ ಯಾಕೆ ಆಚರಣೆ ಮಾಡ್ತಾರೆ..? ಮಹತ್ವವೇನು..? ಇಲ್ಲಿದೆ ಸಂಪೂರ್ಣ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೋಳಿ ಹಬ್ಬ ಯಾಕೆ ಆಚರಣೆ ಮಾಡ್ತಾರೆ..? ಮಹತ್ವವೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

Bengaluru City

ಹೋಳಿ ಹಬ್ಬ ಯಾಕೆ ಆಚರಣೆ ಮಾಡ್ತಾರೆ..? ಮಹತ್ವವೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

Public TV
Last updated: March 18, 2022 7:24 am
Public TV
Share
3 Min Read
Holi
SHARE

ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. ಯಾವುದೇ ಹಬ್ಬವೂ ತನ್ನದೇ ಆದ ಆಚಾರ ಸಂಪ್ರದಾಯಗಳನ್ನು ಹೊಂದಿರುತ್ತದೆ. ಅದೇ ರೀತಿ ಹೋಳಿ ಬಣ್ಣಗಳ ಹಬ್ಬವಾಗಿದ್ದು, ದೂರದ ಊರಿನವರು ತಮ್ಮ ತಾಯ್ನಾಡಿಗೆ ಬಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ವಸಂತ ಮಾಸದಲ್ಲಿ ಆಚರಿಸಲಾಗುತ್ತದೆ. ಚಳಿಗಾಲದ ಕೊನೆಯನ್ನು ವಸಂತದ ಆಗಮನವನ್ನು ಸಾರುವ ಹಬ್ಬವಾಗಿದೆ. ಜನರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಈ ಹಬ್ಬವನ್ನು ಆಚರಿಸುತ್ತಾರೆ.

ಹೋಳಿ ಹಬ್ಬವನ್ನು ದಿನದಂದು ಮಕ್ಕಳಿಂದ ದೊಡ್ಡವರ ತನಕ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಈ ಹಬ್ಬದ ಆಚರಣೆಯಲ್ಲಿ ದಿನ ಕಾಮನ ಸುಂದರ ಪ್ರತಿಮೆ ಮಾಡಿ ಶೃಂಗರಿಸಿ ಊರಿನ ಕಾಮನ ಕಟ್ಟೆಯ ಮೇಲೆ ಚಪ್ಪರ ಕಟ್ಟಿ ಇಡುತ್ತಾರೆ. ಕಾಮನ ಮುಂದೆ ಮಂಗಳ ವಾದ್ಯಗಳನ್ನು ಊದುತ್ತಾರೆ ಅದಲ್ಲದೆ ಪರಸ್ಪರ ಬೈಗುಳ, ಬಣ್ಣದ ನೀರು, ಸಗಣಿಯ ಗಂಜಲಗಳನ್ನು ಎರಚುತ್ತಾರೆ.

Rathi Manmatha

ಹೋಳಿಯ ಇತಿಹಾಸ?
ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದನು. ಆತ ದುರಹಂಕಾರಿಯೂ ಹಾಗೂ ಕ್ರೂರಿಯೂ ಆಗಿದ್ದನು. ತಾರಕಾಸುರ ತನಗೆ ಸಾವು ಬರದಿರಲಿ ಎಂದು ತಪಸ್ಸು ಮಾಡಿದ್ದನು. ಆಗ ಬ್ರಹ್ಮ ಪ್ರತ್ಯಕ್ಷನಾಗುತ್ತಾನೆ. ಆಗ ನನಗೆ ಮರಣ ಬಾರದಿರಲಿ, ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಎಂಬ ವರವನ್ನು ಕೇಳಿದ್ದನು. ತಾರಕಾಸುರನ ತಪ್ಪಸ್ಸನ್ನು ಮೆಚ್ಚಿ ಬ್ರಹ್ಮ ವರವನ್ನು ಕೊಡುತ್ತಾನೆ. ಆಗ ತನಗೆ ವರ ಸಿಕ್ಕಿದೆ ಎಂದು ತಾರಕಾಸುರ ಮೆರೆಯುತ್ತಿರುತ್ತಾನೆ.

holi in maharashtra

ಇತ್ತ ಭೋಗ ಸಮಾಧಿಯಲ್ಲಿದ್ದ ಶಿವ, ಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾದ್ಯವಿರಲಿಲ್ಲ. ಆಗ ದೇವತೆಗಳು ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು. ಕಾಮ ಅಂದರೆ (ಮನ್ಮಥ) ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪಿದ್ದರು. ಈ ವೇಳೆ ಭೋಗಸಮಾಧಿಯಲ್ಲಿದ್ದ ಶಿವನಿಗೆ ಹೂ ಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿದರು. ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿಂದ ಕಾಮನನ್ನು ಸುಟ್ಟು ಭಸ್ಮ ಮಾಡಿದನು. ರತಿದೇವಿ ದು:ಖದಿಂದ ಶಿವನಲ್ಲಿ ಪತಿಭಿಕ್ಷೆಯನ್ನು ಬೇಡಿದಳು. ಶಾಂತಗೊಂಡ ಶಿವನು ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ಕಾಮನಿಗೆ ವರ ಕೊಟ್ಟನು. ಲೋಕಕಲ್ಯಾಣಕ್ಕಾಗಿ ಮನ್ಮಥನು ಅನಂಗನಾದ. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು “ಕಾಮನ ಹುಣ್ಣಿಮೆ”ಯಾಗಿ ಆಚರಿಸಲ್ಪಡುತ್ತದೆ.

Holi 5

ಮತ್ತೊಂದು ಕಥೆ:
ಹಿರಣ್ಯಕಶಿಪುವಿನ ಸಹೋದರಿ ಹೋಲಿಕಾ ಇದ್ದಳು. ಹಿರಣ್ಯಕಶಿಪು ತನ್ನ ರಾಜ್ಯದಲ್ಲಿ ದೇವರನ್ನು ಪೂಜಿಸುವುದನ್ನು ನಿಷೇಧಿಸಿದ್ದು, ತನ್ನನ್ನೇ ದೇವರೆಂದು ಪೂಜಿಸುವಂತೆ ಆದೇಶಿಸಿದ್ದನು. ಆದರೆ ಆತನ ಮಗ ಪ್ರಹ್ಲಾದ ವಿಷ್ಣು ದೇವರ ಪರಮ ಭಕ್ತನಾಗಿದ್ದನು. ತಾನು ಎಷ್ಟೆ ಪ್ರಯತ್ನ ಮಾಡಿದರು ಮಗನಿಂದ ವಿಷ್ಣು ದೇವರ ಆರಾಧಾನೆಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ. ಕೊನೆಗೆ ಹಿರಣ್ಯಕಶಿಪು ತನ್ನ ಮಗನನ್ನು ದಂಡಿಸಲು ತೀರ್ಮಾನಿಸುತ್ತಾನೆ. ಆಗ ಬೆಂಕಿಯು ಸುಡದಂತೆ ವರವನ್ನು ಪಡೆದಿದ್ದ ತನ್ನ ತಂಗಿ ಹೋಲಿಕಾಳ ಸಹಾಯವನ್ನು ಹಿರಣ್ಯಕಶಿಪು ಪಡೆಯುತ್ತಾನೆ. ಹಿರಣ್ಯಕಶಿಪು ತನ್ನ ಮಗನನ್ನು ಆಕೆಯ ತೊಡೆಯ ಮೇಲೆ ಕೂರಿಸಿಕೊಳ್ಳುವಂತೆ ತಂಗಿಯಲ್ಲಿ ಕೇಳಿದನು. ಹೋಲಿಕಾ ಅಣ್ಣನ ಆಜ್ಞೆಯಂತೆ ಪ್ರಹ್ಲಾದನನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಳ್ಳುತ್ತಾಳೆ. ಆದರೆ ಈ ಪಾಪಕೃತ್ಯವನ್ನು ಹೋಲಿಕಾ ಮಾಡಿದ್ದರಿಂದಾಗಿ, ಆಕೆಯ ವರ ನಿಷ್ಫಲವಾಗುತ್ತದೆ. ಇದರಿಂದ ಹೋಲಿಕಾ ಸುಟ್ಟು ಬೂದಿಯಾಗುತ್ತಾಳೆ. ಪ್ರಹ್ಲಾದ ಸುರಕ್ಷಿತವಾಗಿ ಬೆಂಕಿಯಿಂದ ಹೊರಬರುತ್ತಾನೆ. ಅದಕ್ಕಾಗಿ ಪ್ರತೀ ವರ್ಷ ಹೋಲಿಯ ಮುನ್ನ ಹಿಂದೂ ಮನೆಗಳಲ್ಲಿ ಹೋಲಿಕನನ್ನು ಸುಡುತ್ತಾರೆ.

Holi 7

ಈ ಹಬ್ಬ ಮನೆಯ ಪ್ರತಿಯೊಬ್ಬ ಸದಸ್ಯರನ್ನು ಒಂದುಗೂಡಿಸುತ್ತದೆ ಮತ್ತು ಹಬ್ಬದ ಸಡಗರವನ್ನು ಪ್ರತಿಯೊಬ್ಬರಲ್ಲಿ ತುಂಬುತ್ತದೆ. ಕೆಟ್ಟದ್ದು ಒಳ್ಳೆಯದರ ಮುಂದೆ ತಲೆಬಾಗಲೇಬೇಕು ಎಂಬ ಸಂದೇಶವನ್ನು ಹೋಳಿ ಹಬ್ಬ ಸಾರುತ್ತದೆ. ದುಷ್ಕ್ರತ್ಯಗಳು ದೇವರ ಶಕ್ತಿಯ ಎದುರು ಎಂದಿಗೂ ಜಯವನ್ನು ಪಡೆಯಲು ಸಾಧ್ಯವಿಲ್ಲ ಎಂಬ ಸಾರ ಈ ಹಬ್ಬದ ಹಿಂದಿದೆ. ಹೋಲಿಕನಂತೆ ಕೆಟ್ಟ ಶಕ್ತಿಗಳು, ದುಷ್ಟ ಆಲೋಚನೆಗಳು ನಾಶವಾಗಿ ಹೊಸದರ ಪ್ರಾರಂಭದ ಕಡೆಗೆ ಮನುಷ್ಯರು ಹೋಗುತ್ತಾರೆ.

Holi 3

TAGGED:celebrationHoli festivalPublic TVTraditionಆಚರಣೆಪಬ್ಲಿಕ್ ಟಿವಿಸಂಪ್ರದಾಯಹೋಳಿ ಹಬ್ಬ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
2 minutes ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
39 minutes ago
male mahadeshwara temple
Chamarajanagar

ಮಹಾಶಿವರಾತ್ರಿ ಜಾತ್ರೆ: ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯ ಮೂಲಕ ಭಕ್ತರ ದಂಡು – ಪಾದಯಾತ್ರಿಗಳಿಗೆ ರೂಲ್ಸ್ ಜಾರಿ

Public TV
By Public TV
2 hours ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
2 hours ago
Fire breaks out in over 100 sheds of illegal Bengali migrants Bengaluru
Bengaluru City

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ 10 ಶೆಡ್‌ಗಳಿಗೆ ಬೆಂಕಿ

Public TV
By Public TV
2 hours ago
nandi hills5
Chikkaballapur

ಪ್ರೇಮಿಗಳ ದಿನ ವಿಶ್ವವಿಖ್ಯಾತ ನಂದಿ ಗಿರಿಧಾಮ ಬಂದ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?