ಬಾಯಿ ಬಡಾಯಿ ಸಾಧನೆ ಶೂನ್ಯ: ಮೋದಿ ವಿರುದ್ಧ ಸಿದ್ದು ವಾಗ್ದಾಳಿ

Public TV
1 Min Read
glb siddaramaiah

ಕಲಬುರಗಿ: ಬಾಯಿ ಬಡಾಯಿ ಸಾಧನೆ ಶೂನ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ, “ಮೋದಿ ಇದೇ ಮೈದಾನದಲ್ಲಿ ಬಂದು ಭಾಷಣ ಮಾಡಿ ಹೋಗಿದ್ದಾರೆ. ಅವರು ಮನ್ ಕೀ ಬಾತ್ ಬಿಟ್ಟರೆ ಸಾಧನೆ ಮಾತ್ರ ಶೂನ್ಯ. ಬಾಯಿ ಬಡಾಯಿ ಸಾಧನೆ ಶೂನ್ಯ. ಅವರು ದೇಶದ ಯಾವುದೇ ಭಾಗದಲ್ಲಿ ಹೋದರೂ ಅಭಿವೃದ್ಧಿ ಬಗ್ಗೆ ಮಾತನಾಡಲ್ಲ. ಬದಲಾಗಿ ಭಾವನಾತ್ಮಕ ವಿಚಾರ ಮಾತನಾಡಿ ಸಮಾಜಕ್ಕೆ ದೇಶದ ಜನರ ಜಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

glb siddaramaiah 2

“ನರೇಂದ್ರ ಮೋದಿಗೆ ಖರ್ಗೆ ಸಿಂಹ ಸ್ವಪ್ನರಾಗಿದ್ದಾರೆ. ಹೀಗಾಗಿ ಅವರನ್ನು ಇದೀಗ ಟಾರ್ಗೆಟ್ ಮಾಡಲಾಗಿದೆ. ರಾಹುಲ್ ಗಾಂಧಿ ಪ್ರಧಾನಿ ಆಗುವುದು ನೂರಕ್ಕೆ ನೂರು ಸತ್ಯ. ರೈತರಿಗೆ ಬಿಜೆಪಿ ಸರ್ಕಾರ ಏನು ಮಾಡಿಲ್ಲ. ಹಾಗಾಗಿ ನೀವು ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿ” ಎಂದು ಮನವಿ ಮಾಡಿದರು.

ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯ ಅವರು ಡಾ. ಉಮೇಶ್ ಜಾಧವ್ ಬಗ್ಗೆ ಒಂದು ಮಾತನ್ನು ಆಡಲಿಲ್ಲ. ಈ ಮೂಲಕ ಅವರು ತಮ್ಮ ಶಿಷ್ಯ ಜಾಧವ್ ವಿರುದ್ಧ ಸಾಫ್ಟ್ ಕಾರ್ನರ್ ತೋರಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *