ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಇನ್ನಿಲ್ಲ

Public TV
1 Min Read
MINISTER SHIVALLI 2

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಅವರು ತೀವ್ರ ಹೃದಯಾಘಾತದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಧಾರವಾಡ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಕಾರ್ಯಾಚರಣೆ ನಡೆದ ಸ್ಥಳದಲ್ಲೇ ಹಾಜರಿದ್ದು, ಎಲ್ಲಾ ಕಾರ್ಯದ ಉಸ್ತುವಾರಿ ವಹಿಸಿದ್ದರು. ಈ ವೇಳೆಯೇ ಅವರು ಬಳಲಿದ್ದರು ಎಂಬ ಮಾಹಿತಿ ಲಭಿಸಿದೆ.

MINISTER SHIVALLI 1

ಕಳೆದ 2 ದಿನಗಳಿಂದ ಕಟ್ಟಡ ಕುಸಿತ ಸ್ಥಳದಲ್ಲೇ ಇದ್ದ ಅವರು ಗುರುವಾರ ಸಿಎಂ ಕುಮಾರಸ್ವಾಮಿ ಅವರು ಆಗಮಿಸಿದ್ದ ವೇಳೆಯೂ ಸಿಎಂ ಅವರೊಂದಿಗೆ ಇದ್ದು ಭಾಗವಹಿಸಿದ್ದರು. ಹೆಚ್ಚಿನ ಸಮಯದ ಸ್ಥಳದಲ್ಲೇ ಇದ್ದ ಸಚಿವರು ಬಳಲಿದ್ದ ಪರಿಣಾಮ ಕಿಮ್ಸ್ ಆಸ್ಪತ್ರೆಯ ವೈದ್ಯರು ಬಳಿ ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಸಚಿವರು ಮತ್ತೆ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆಯಲು ಆಗಮಿಸಿದ್ದರು. ಆದರೆ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತ ಸಂಭವಿಸಿದೆ. ವೈದ್ಯರಿಂದ ಚ್ಚಿನ ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ತಿಂಗಳು ಅಭಿವೃದ್ಧಿ ಕಾರ್ಯಕ್ರಮಕ್ಕೆ ಉದ್ಘಾಟನೆ ನಡೆಸಿ ಅಲ್ಲಿ ಆಹಾರ ಸೇವಿಸಿದ್ದ ಸಚಿವರಿಗೆ ಅನಾರೋಗ್ಯ ಸಮಸ್ಯೆ ಉಂಟಾಗಿತ್ತು. ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದರು. ಆ ಬಳಿಕ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಿದ್ದರು. ಮೂರು ತಿಂಗಳಿಗೆ ಒಮ್ಮೆ ಅವರು ಆಸ್ಪತ್ರಗೆ ದಾಖಲಾಗಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಟ್ಟಡ ಕುಸಿತ ದುರಂತದ ಬಳಿಕ ಹೆಚ್ಚಿನ ವಿಶ್ರಾಂತಿ ಪಡೆಯದೆ ಜವಾಬ್ದಾರಿ ನಿರ್ವಹಿಸಿದ್ದರು. ಪರಿಣಾಮ ಹೃದಯಘಾತ ಸಂಭವಿಸಿತ್ತು ಎಂಬ ಮಾಹಿತಿ ಲಭಿಸಿದೆ.

DWD2

Share This Article
Leave a Comment

Leave a Reply

Your email address will not be published. Required fields are marked *