ಬಿಎಸ್‍ವೈ ಡೈರಿ ಪ್ರಕರಣ- ಕಾಂಗ್ರೆಸ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಿ.ಟಿ.ರವಿ

Public TV
2 Min Read
bjp question 2

ಬೆಂಗಳೂರು: ಕಾಂಗ್ರೆಸ್ಸಿನಿಂದ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಡೈರಿ ಆರೋಪ ವಿಚಾರ, ಕಾಂಗ್ರೆಸ್ಸಿಗೆ 10 ಪ್ರಶ್ನೆ ಕೇಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡೈರಿಯ ಪ್ರತಿ ಹಾಳೆಯಲ್ಲೂ ಯಾರೂ ಸಹಿ ಮಾಡಲ್ಲ. ಡೈರಿಯಲ್ಲಿ ಹಣ ಕೊಟ್ಟಿರೋದು ಬರೆದಿರೋರು, ತಮ್ಮಗೆ ಬಂದಿರೋ ಹಣದ ಬಗ್ಗೆಯೂ ಬರೆಯಬೇಕಲ್ಲವಾ? 2010 ಪೂರ್ವದಲ್ಲಿ ಯಡಿಯೂರಪ್ಪ ಅವರು ಸಂಖ್ಯಾಶಾಸ್ತ್ರದ ಪ್ರಕಾರ ‘ಯಡ್ಯೂರಪ್ಪ’ ಅಂತಾ ಸಹಿ ಮಾಡುತ್ತಿದ್ದರು. ಇದೊಂದು ಕಾಂಗ್ರೆಸ್ ಸಂಚು. ಚೌಕಿದಾರರು ವರ್ಸಸ್ ಚೋರ್‍ದಾರರ ನಡುವಿನ ಚುನಾವಣೆ ಇದು ಎಂದು ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಬಿಎಸ್ ವೈ ಡೈರಿ ಪ್ರಕರಣ- ಇದು ಜೋಕ್ ಆಫ್ ದಿ ಇಯರ್ ಅಂದ್ರು ಬಿ.ವೈ.ರಾಘವೇಂದ್ರ

bjp questions

ಮೂರು ಬಾರಿ ಸಹಿ ಬದಲಾವಣೆ:
ಮೊದಲು ಬಿಎಸ್‍ವೈ “ಯಡಿಯೂರಪ್ಪ ” ಎಂದು ಸಹಿ ಮಾಡುತ್ತಿದ್ದರು. ಬಳಿಕ ಸಂಖ್ಯಾಶಾಸ್ತ್ರದ ಪ್ರಕಾರ “ಯಡ್ಯೂರಪ್ಪ” ಎಂದು ಬದಲಾಯಿಸಿಕೊಂಡರು. ಆದರೇ ಇತ್ತೀಚಿಗೆ ಮತ್ತೆ “ಬಿ.ಎಸ್.ಯಡಿಯೂರಪ್ಪ” ಎಂದು ಮತ್ತೆ ಹಳೆಯ ಸಹಿಯನ್ನೇ ಮಾಡುತ್ತಿದ್ದಾರೆ ಎಂದು ಸಿ.ಟಿ ರವಿ ತಿಳಿಸಿದ್ದಾರೆ.  ಇದನ್ನೂ ಓದಿ:ಫೇಕ್ ಡೈರಿ ಮುದ್ರಿಸುವ ಅವಸರದಲ್ಲಿ ಕಾಂಗ್ರೆಸ್ ತಪ್ಪು ಮಾಡಿದೆ: ಬಿಎಸ್‍ವೈ ವ್ಯಂಗ್ಯ

bjp questions 1

ಕಾಂಗ್ರೆಸ್ ಮುಂದಿಟ್ಟ ಪ್ರಶ್ನೆಗಳು:
1. ಡೈರಿ ನಿಮಗೆ ಸಿಕ್ಕಿದ್ದು ಯಾವಾಗ?
2. ಯಾರು ಈ ಡೈರಿಯನ್ನು ತಂದುಕೊಟ್ಟರು?
3. ಡೈರಿಯನ್ನು ಎಲ್ಲಿ ಕೊಟ್ಟರು?
4. ಒರಿಜಿನಲ್ ಡೈರಿ ಎಲ್ಲಿ?
5. ಏಕೆ ಇದುವರೆಗೂ ಈ ಡೈರಿ ಆದರಿಸಿ ಲೋಕಾಯುಕ್ತ ಅಥವಾ ಎಸಿಬಿಗೆ ದೂರು ಕೊಡಲಿಲ್ಲ?

Congress Flag 1
6. 2013 ಮೇ ತಿಂಗಳಿನಿಂದ ನಿಮ್ಮದೇ ಪಕ್ಷದ ಆಡಳಿತ ಇದ್ದರೂ ಯಾವುದೇ ತನಿಖೆ ನಡೆಸದೇ ಇರಲು ಕಾರಣವೇನು?
7. ಯಡಿಯೂರಪ್ಪನವರದ್ದೆಂದು ಹೇಳಲಾದ ಡೈರಿಯು ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪತ್ತೆಯಾಗಿದ್ದು ಹೇಗೆ? ಇದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಬೇಕಾಗಿದೆ.
8. ಈ ಹಿಂದೆ ಪ್ರಕರಣವೊಂದರ ಬಗ್ಗೆ ಎಸಿಬಿಗೆ ದೂರು ನೀಡಿದ್ದ ಕಾಂಗ್ರೆಸ್ ಈಗ ಏಕೆ ದೂರು ನೀಡದಿರಲು ಕಾರಣವೇನು?
9 ಎಂಎಲ್ ಸಿ ಗೋವಿಂದರಾಜುಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡ ಡೈರಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಹಣ ಸಂದಾಯವಾಗಿತ್ತು ಎಂದು ನಮೂದಾಗಿತ್ತು. ಆಗ ಯಡಿಯೂರಪ್ಪ ಡೈರಿ ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಸೃಷ್ಟಿಯಾಗಿದ್ದು ನಿಜವಲ್ಲವೇ?
10. ಡೈರಿ ಪ್ರಕರಣ ಜನಲೋಕಪಾಲ್ ತನಿಖೆಗೆ ಸೂಕ್ತವಾದುದು ಎಂದು ಕಾಂಗ್ರೆಸ್ ಹೇಳುತ್ತಿದೆ. ಆರೋಪ ಮಾಡಿದವರು ದೂರು ನೀಡಬೇಕೆ ಅಥವಾ ದೂರಿಗೆ ಒಳಗಾದವರು ನೀಡಬೇಕೆ? ಎಂದು ಪ್ರಶ್ನಿಸಿದ್ದಾರೆ.

BSY diary

ಬಿಎಸ್‍ವೈ ಡೈರಿ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಒಂದೆಡೆ ಕಾಂಗ್ರೆಸ್ ಬಿಎಸ್‍ವೈ ವಿರುದ್ಧ ಆರೋಪಿಸುತ್ತಿದ್ದಾರೆ. ಆದ್ರೆ ಇನ್ನೊಂದೆಡೆ ಬಿಜೆಪಿ ನಾಯಕರು ಬಿಎಸ್‍ವೈ ಪರ ನಿಂತು ಇದು ಕಾಂಗ್ರೆಸ್ ಅವರ ಸಂಚು ಎಂದು ಕಿಡಿಕಾರುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *