Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುವಕರೇ, ಮೋದಿ ಮೋದಿ ಅಂತ ಕೂಗಿ ದೇಶ ಹಾಳು ಮಾಡಬೇಡಿ: ಸಿಎಂ ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯುವಕರೇ, ಮೋದಿ ಮೋದಿ ಅಂತ ಕೂಗಿ ದೇಶ ಹಾಳು ಮಾಡಬೇಡಿ: ಸಿಎಂ ಎಚ್‍ಡಿಕೆ

Bengaluru City

ಯುವಕರೇ, ಮೋದಿ ಮೋದಿ ಅಂತ ಕೂಗಿ ದೇಶ ಹಾಳು ಮಾಡಬೇಡಿ: ಸಿಎಂ ಎಚ್‍ಡಿಕೆ

Public TV
Last updated: April 8, 2019 8:57 pm
Public TV
Share
2 Min Read
CM HDK
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 5 ವರ್ಷದ ಆಡಳಿತದಲ್ಲಿ ಘೋಷಣೆ ಮಾಡದ ತುರ್ತು ಪರಿಸ್ಥಿತಿ ಜಾರಿಯಾಗಿತ್ತು. ಅವರ ವಿರುದ್ಧ ಮಾತನಾಡಿದರೆ ಕೇಂದ್ರದ ಸಂಸ್ಥೆಗಳ ಮೂಲಕ ಮಟ್ಟ ಹಾಕುತ್ತಾರೆ. ಈಗಿರುವ ಕೇಂದ್ರ ಚುನಾವಣೆ ಆಯೋಗ (ಇಸಿ) ನಗೆ ಪಾಟಲಿನ ಆಯೋಗವಾಗಿದೆ. ಈಗಿನ ಚುನಾವಣಾ ಆಯೋಗವೇ ಸರಿ ಇಲ್ಲ ಎಂದು ದೂಷಣೆ ಮಾಡಿದರು.

ಬೆಂಗಳೂರು ಉತ್ತರ ಕ್ಷೇತ್ರ ಮೈತ್ರಿ ಅಭ್ಯರ್ಥಿ ಕೃಷ್ಣಬೈರೇಗೌಡ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 5 ವರ್ಷ ಕೆಲಸ ಮಾಡದವರು ಈಗ ವೋಟ್ ಕೇಳೋಕೆ ಬಂದಿದ್ದಾರೆ. 5 ವರ್ಷದಲ್ಲಿ ಮೋದಿ ಏನು ಕೆಲಸ ಮಾಡಿಲ್ಲ. ಕೆಲಸ ಮಾಡಿದ್ದರೆ ನಾನೇ ಮೋದಿಗೆ ಓಟ್ ಹಾಕಿ ಎಂದು ಮನವಿ ಮಾಡುತ್ತಿದೆ. ಆದರೆ ಮೋದಿ ಯಾವುದೇ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

Narendra Modi A

ಕೇಂದ್ರ ಸರ್ಕಾರ ಸರ್ವ ಶಿಕ್ಷಣ ಅಭಿಯಾನದ ಹಣವನ್ನು ಇವತ್ತು ನಿಲ್ಲಿಸಿದೆ. ಮನ್ ಕೀ ಬಾತ್ ಭಾಷಣದಲ್ಲಿ ಮಾತ್ರ ಭೇಟಿ ಬಚಾವ್ ಕಾರ್ಯಕ್ರಮ ಎನ್ನುತ್ತಾರೆ. ಆದರೆ ಯಾವ ಭೇಟಿ ಬಚಾವ್ ಮಾಡಿದ್ದಾರೋ ಗೊತ್ತಿಲ್ಲ. ದೇಶದ ಭದ್ರತೆ ವಿಚಾರ ಇಟ್ಟುಕೊಂಡು ಈಗ ಮತ ಕೇಳುತ್ತಿದ್ದು, 5 ವರ್ಷದ ಸಾಧನೆಯ ಬಗ್ಗೆ ಮಾತನಾಡುತ್ತಿಲ್ಲ. ದೇಶದ ಭದ್ರತೆಯನ್ನ ಒಬ್ಬರೇ ರಕ್ಷಣೆ ಮಾಡಿದಂತೆ ಹೇಳಿಕೊಂಡು ಮತ ಕೇಳುತ್ತಿದ್ದಾರೆ. 5-6 ಜನ ಯುವಕರು ಮೋದಿ ಮೋದಿ ಅಂತ ಕೂಗುತ್ತಾರೆ. ಮೋದಿ ಮೋದಿ ಅಂತ ಕೂಗಿ ದೇಶ ಹಾಳು ಮಾಡಬೇಡಿ ಎಂದು ಹೇಳಿದರು.

ದೇಶಕ್ಕೆ ಅಪಾಯ ಬಂದಾಗ ಮಹಿಳೆಯಾಗಿದ್ದ ಇಂದಿರಾ ಗಾಂಧಿ ದೇಶದ ರಕ್ಷಣೆ ಮಾಡಿದರು. ವಾಜಪೇಯಿ ದೇಶದ ರಕ್ಷಣೆ ಮಾಡಿಲ್ವಾ? ಆದರೆ ಮೋದಿ ಒಬ್ಬರೇ ದೇಶದ ರಕ್ಷಣೆ ಮಾಡುತ್ತಿದ್ದಾರೆ ಎಂದು ಮಾಧ್ಯಮಗಳು ನಿತ್ಯ ಪ್ರಸಾರ ಮಾಡುತ್ತಿದೆ. ದೇಶದ ಸೈನಿಕರು ಹೋರಾಡಿದರೆ ಅದರ ಹೆಸರು ಮೋದಿಗೆ ಹೋಗಬೇಕಂತೆ. ಸೈನಿಕರ ಹೆಸರು ಹೇಳಲು ಮೋದಿ ಆಗೋದಿಲ್ಲ. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಇಳಿವಯಸ್ಸಿನಲ್ಲೂ ದೇವೇಗೌಡರು ಹೋರಾಟ ಮಾಡುತ್ತಿದ್ದಾರೆ. ಕಾವೇರಿಗಾಗಿ ದೇವೇಗೌಡರು ಗಾಂಧಿ ಪ್ರತಿಮೆ ಮುಂದೆ ಉಪವಾಸ ಸತ್ಯಾಗ್ರಹ ಮಾಡಿದರು. ಅವರಿಗೆ ವಯಸ್ಸು ಆಗಿರಬಹುದು ಆದರೆ ರಾಜ್ಯದ ಪರ ಹೋರಾಟಕ್ಕೆ ಅವರಿಗೆ ಬದ್ಧತೆ ಇದೆ ಎಂದು ತಿಳಿಸಿದರು.

cm modi

ಸಮ್ಮಿಶ್ರ ಸರ್ಕಾರದಲ್ಲೂ ಉತ್ತಮ ಯೋಜನೆಗಳನ್ನು ಜಾರಿ ಮಾಡಿದ್ದು, ಒಂದು ಲಕ್ಷ ಮನೆ ನಿರ್ಮಾಣ ಕೆಲಸ ಪ್ರಾರಂಭ ಮಾಡಿದ್ದೇವೆ. 4 ವರ್ಷಗಳಲ್ಲಿ 8-10 ಲಕ್ಷ ಮನೆ ನಿರ್ಮಾಣ ಮಾಡಿ ಬಡವರಿಗೆ ಕೊಡುತ್ತೇವೆ. ಬೆಂಗಳೂರು ಅಭಿವೃದ್ಧಿಗೆ ಅನೇಕ ಯೋಜನೆ ಜಾರಿಗೆ ತರುತ್ತಿದ್ದೇವೆ. ಬಡವರ ಬಂದು ಯೋಜನೆ ಜಾರಿ ಮಾಡಿದ್ದೇವೆ. ಬಡ ಮಹಿಳೆಯರ ಆಶೀರ್ವಾದದಿಂದ ನಾನು ಈಗ ಸಿಎಂ ಆಗಿದ್ದೇನೆ. ನನಗೆ ಆರೋಗ್ಯದ ತೊಂದರೆ ಇದ್ದರು ಈ ಜೀವ ಗಟ್ಟಿಯಾಗಿ ಇರುತ್ತೆ. ನಿಮ್ಮ ಆಶೀರ್ವಾದಿಂದ ನಾನು ಬದುಕಿರುತ್ತೇನೆ. ನನ್ನ ತಾಯಿ ಬೆಳಗ್ಗೆ 4 ಗಂಟೆಗೆ ಎದ್ದು 12 ಗಂಟೆ ವರೆಗೆ ದೇವರ ಪೂಜೆ ಮಾಡುತ್ತಾರೆ. ಅವರ ಆಶೀರ್ವಾದ ಇರುವ ವರೆಗೂ ನನಗೆ ಏನು ಆಗಲ್ಲ. ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಗೆ ಪ್ರವಾಸ ಮಾಡುತ್ತೇನೆ ಎಂದರು.

ಬಿಜೆಪಿಯವರು ಮಾಧ್ಯಮಗಳಿಗೆ 500 ಕೋಟಿ ರೂ. ಹಣವನ್ನು ನೀಡಿದ್ದು, ಹೀಗಾಗಿ ಬೆಳಗ್ಗೆಯಿಂದ ಮೋದಿ ಬಗ್ಗೆಯೇ ತೋರಿಸುತ್ತಾರೆ. ಮೋದಿ ಹಣ ಪಡೆದು ಅವರ ಪರವೇ ಮಾಧ್ಯಮಗಳು ಪ್ರಚಾರ ಮಾಡಬೇಕು. ಮಾಧ್ಯಮಗಳು ಮಂಡ್ಯದ ಬಗ್ಗೆ ನಿತ್ಯ ತೋರಿಸುತ್ತಿವೆ. ಏನೋ ಆಗುತ್ತೆ ಎಂದು ನನ್ನನ್ನ ಮುಗಿಸಲು ಸಾಧ್ಯವಿಲ್ಲ. ಇದಕ್ಕೆ ಹೆದರುವುದಿಲ್ಲ. ಮಾಧ್ಯಮಗಳಿಗೆ ಮೇ 23 ರಂದು ನಾನು ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.

HDD Krishna ByreGowda

TAGGED:bengaluruCM HD Kumaraswamycongresselection commissionHD Deve Gowdapm narendra modiPublic TVಎಚ್‍ಡಿ ದೇವೇಗೌಡಕಾಂಗ್ರೆಸ್ಚುನಾವಣಾ ಆಯೋಗಪಬ್ಲಿಕ್ ಟಿವಿಪ್ರಧಾನಿ ಮೋದಿಬೆಂಗಳೂರುಸಿಎಂ ಎಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Sunetra Pawar Ajit Pawar
Latest

ಮಹಾರಾಷ್ಟ್ರ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್‌ ಪತ್ನಿ ಸುನೇತ್ರಾ ಹೆಸರು ಪ್ರಸ್ತಾಪಿಲು ಎನ್‌ಸಿಪಿ ಚಿಂತನೆ

Public TV
By Public TV
2 seconds ago
KJ George 1
Bengaluru City

ನಾನು ರಾಜೀನಾಮೆ ನೀಡಿಲ್ಲ, ಆ ಪ್ರಶ್ನೆಯೇ ಉದ್ಭವ ಆಗಿಲ್ಲ: ಕೆ.ಜೆ ಜಾರ್ಜ್ ಸ್ಪಷ್ಟನೆ

Public TV
By Public TV
17 minutes ago
India EU Trade Deal 1 1
Explainer

PublicTV Explainer: ಭಾರತ-ಇಯು ಡೀಲ್; ಐಷಾರಾಮಿ ಕಾರುಗಳು, ಬಿಯರ್‌, ವೈನ್‌, ಮೆಡಿಸಿನ್‌ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
21 minutes ago
Government Employees 1
Bengaluru City

ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

Public TV
By Public TV
27 minutes ago
Priyank Kharge V Sunil Kumar
Bengaluru City

ರಾಜ್ಯ ಸರ್ಕಾರದ ಯೋಜನೆಗೆ ಪಂಚಾಯತ್‌ಗಳು ವಿರೋಧಿಸಿ ಜಾಹೀರಾತು ನೀಡಿದ್ರೆ ಒಪ್ಪುತ್ತೀರಾ? – ಸದನದಲ್ಲಿ ಕೋಲಾಹಲ

Public TV
By Public TV
48 minutes ago
Council Session
Bengaluru City

ಹರಿಪ್ರಸಾದ್ ರಿಂದ ವಿವಾದಾತ್ಮಕ ಮಾತು – ವಿಧಾನ ಪರಿಷತ್ ‌ಕಲಾಪವೇ ಬಲಿ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?