Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೇಜಸ್ವಿ ಸೂರ್ಯ ವಿರುದ್ಧ ಸ್ಫೋಟಕ ಆಡಿಯೋ ಕ್ಲಿಪ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತೇಜಸ್ವಿ ಸೂರ್ಯ ವಿರುದ್ಧ ಸ್ಫೋಟಕ ಆಡಿಯೋ ಕ್ಲಿಪ್ ರಿಲೀಸ್

Bengaluru City

ತೇಜಸ್ವಿ ಸೂರ್ಯ ವಿರುದ್ಧ ಸ್ಫೋಟಕ ಆಡಿಯೋ ಕ್ಲಿಪ್ ರಿಲೀಸ್

Public TV
Last updated: April 14, 2019 2:01 pm
Public TV
Share
4 Min Read
Tejasvi
SHARE

– ಆತ ಎಂಪಿ ಆದ್ರೆ ‘ಹಿ ಈಸ್ ಡೇಂಜರಸ್’ ಎಂದ ಸೋಮ್ ದತ್ತಾ!
– ನಾನು ಗರ್ಲ್ ಫ್ರೆಂಡ್ ಅಲ್ಲ, ಭಾವಿ ಪತ್ನಿಯಾಗಿದ್ದೆ!

ಬೆಂಗಳೂರು: ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ತಮ್ಮ ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧದ ಸ್ಫೋಟಕ ಆಡಿಯೋ ರಿಲೀಸ್ ಮಾಡಿದ್ದಾರೆ. ಡಾ. ಸೋಮ್ ದತ್ತಾ ತಮ್ಮ ಪರಿಚಿತ ವ್ಯಕ್ತಿ ಜೊತೆ 14 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋ ಕ್ಲಿಪ್ ಅನ್ನು ಕಾಂಗ್ರೆಸ್ ಬಿಡುಗಡೆಮಾಡಿದೆ.

ತೇಜಸ್ವಿ ಸೂರ್ಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದಂತೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತೇಜಸ್ವಿ ಸೂರ್ಯ ತಮ್ಮ ಅಫಿಡವಿಟ್ ನಲ್ಲಿ ಪ್ರಕರಣ ಬಗ್ಗೆ ಹೇಳಿಕೊಂಡಿಲ್ಲ. ಈ ಎಲ್ಲ ವಿಚಾರಗಳು ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರಿಗೆ ಗೊತ್ತಿದ್ರೂ ಸುಮ್ಮನಿದ್ದಾರೆ. ತೇಜಸ್ವಿ ಸೂರ್ಯ ಮೂರು ಮಹಿಳೆಯರಿಗೆ ಮೋಸ ಮಾಡಿದ್ದಾನೆ ಎಂಬುವುದು ಆಡಿಯೋ ಕ್ಲಿಪ್ ಹೇಳುತ್ತದೆ. ಸೋಮ್ ದತ್ತಾಗೆ ಬಿಜೆಪಿ ನಾಯಕರು ಕರೆ ಮಾಡಿ ಧಮ್ಕಿ ಹಾಕಿದ್ದು, ಹೀಗಾಗಿ ಮಾಧ್ಯಮಗಳ ಮುಂದೆ ಬರಲು ಸಾಧ್ಯ ಆಗುತ್ತಿಲ್ಲ ಎಂದು ಬ್ರಿಜೇಶ್ ಕಾಳಪ್ಪ ಆರೋಪಿಸಿದರು.

Brijesh Kalappa

ಆಡಿಯೋದಲ್ಲಿ ಏನಿದೆ?
ನಾನು ಮೊದಲಿನಿಂದಲೂ ಆ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಪಕ್ಷದ ಹಲವು ಮುಖಂಡರು ಸೇರಿದಂತೆ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೂ ನಮ್ಮಿಬ್ಬರ ವಿಷಯ ಗೊತ್ತಿದೆ. ಎಂಪಿ ಟಿಕೆಟ್ ಸಿಕ್ಕ ಬಳಿಕ ಆತ ಪಾಪ್ಯೂಲರ್ ಆಗಿದ್ದು, ಅವನಿಗಿಂತ ಹೆಚ್ಚು ಗೌರವವನ್ನು ನಾನು ಸಮಾಜದಲ್ಲಿ ಹೊಂದಿದ್ದೇನೆ. ಆತನಿಂದಾಗಿ ನಾನೇಕೆ ನನ್ನ ಗೌರವವನ್ನು ಹಾಳು ಮಾಡಿಕೊಳ್ಳಲಿ. ಶಾಸಕರೊಬ್ಬರು ಕರೆ ಮಾಡಿ ನನ್ನ ಬಳಿ ಎಲ್ಲ ದಾಖಲೆಗಳಿವೆ. ಕೋರಮಂಗಲದಲ್ಲಿ ನಾನು ದೂರು ದಾಖಲಿಸಿರುವ ಎಫ್‍ಐಆರ್, ವಾಟ್ಸಪ್ ಮೆಸೇಜ್ ಗಳಿವೆ ಎಂದರು.

ಆ ಶಾಸಕರ ಪರವಾಗಿ ಕ್ಯಾಂಪೇನ್ ಮಾಡಿದ್ದು, ನನ್ನನ್ನು ತಂಗಿಯಂತೆ ಕಾಣುತ್ತಾರೆ. ಶಾಸಕರೊಂದಿಗೆ ಇನ್ನಿಬ್ಬರು ಹುಡುಗಿಯರು ಸಹ ಮಾತನಾಡಿದ್ದಾರೆ. ಫೋನಿನಲ್ಲಿ ಇಬ್ಬರು ಹುಡುಗಿಯರ ಹೆಸರು ಹೇಳಲಾರೆ. ಒಬ್ಬ ಹುಡುಗಿ ಮ್ಯಾಗಜೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಇದೀಗ ಆಕೆ ಮದುವೆಯಾಗಿ ಮುಂಬೈನಲ್ಲಿ ಸೆಟಲ್ ಆಗಿದ್ದಾಳೆ.

TejaswiSURYA

ನನ್ನ ಹಣದಿಂದ ಬದುಕಿದ್ದ: ಆತ ಇಷ್ಟು ದಿನ ನನ್ನ ಹಣದಿಂದಲೇ ಬದುಕಿದ್ದ. ಬೇಕಾದ್ರೆ ಆತನ ಬ್ಯಾಂಕ್ ಅಕೌಂಟ್ ಚೆಕ್ ಮಾಡಿದ್ರೆ ನನ್ನಿಂದ ಎಷ್ಟು ಹಣ ಪಡೆದಿದ್ದಾನೆ ಎನ್ನುವುದು ಗೊತ್ತಾಗಲಿದೆ. ಹಣಕ್ಕಾಗಿ ನಾನು ಬ್ಲ್ಯಾಕ್ ಮೇಲ್ ಮಾಡುತ್ತೇನೆ ಎಂದು ಹೇಳುತ್ತಿರೋದು ಶುದ್ಧ ಸುಳ್ಳು. ನನ್ನ ಎಷ್ಟು ಶ್ರೀಮಂತಳು ಎಂಬುವುದು ಎಲ್ಲರಿಗೂ ಗೊತ್ತಿದೆ. ನನ್ನ ಕಂಪನಿಗಳು ಮುನ್ನೂರು ಮಿಲಿಯನ್ ಡಾಲರ್ ಮೌಲ್ಯವನ್ನು ಹೊಂದಿವೆ. ನಾನೇಕೆ ಹಣಕ್ಕಾಗಿ ಬೇರೆಯವರನ್ನ ಬ್ಲ್ಯಾಕ್ ಮೇಲ್ ಮಾಡಬೇಕು. ಕೋರಮಂಗಲ ಪೊಲೀಸ್ ಠಾಣೆಗೆ ತೆರಳಿದರೆ ನಿಮಗೆಲ್ಲ ಸಾಕ್ಷಿಗಳು ದೊರೆಯುತ್ತವೆ. ಈಗಾಗಲೇ ಕೆಲವು ಮಾಧ್ಯಮದವರಿಗೆ ಎಫ್‍ಐಆರ್ ಪ್ರತಿಯನ್ನು ತೆಗೆದುಕೊಂಡು ನನ್ನನ್ನು ಸಂಪರ್ಕಿಸಿದ್ದಾರೆ.

ಟ್ವೀಟ್ ಡಿಲೀಟ್ ಮಾಡಿದ್ಯಾಕೆ?
ಕಳೆದ ವರ್ಷ ಜೂನ್ ಅಥವಾ ಜುಲೈ ತಿಂಗಳಲ್ಲಿ ನಾನು ದೂರು ದಾಖಲಿಸಿದ್ದೇನೆ. ದೀಪಾವಳಿ ಹಬ್ಬದಂದು ನನ್ನ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾಗ ಪೊಲೀಸರು ಬಂದು ಆತನನ್ನು ಕರೆದುಕೊಂಡು ಹೋದರು. ಮಾರ್ಚ್ 12ನವರೆಗೂ ಆತನೊಂದಿಗೆ ಸಂಪರ್ಕದಲ್ಲಿದ್ದೆ. ನಾನು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತೇನೆ. ನನ್ನ ಮೇಲೆ ಈ ರೀತಿಯ ದೌರ್ಜನ್ಯ ನಡೆದಾಗ ನಾನು ಸಮ್ಮನೆ ಕುಳಿತರೆ ಹೇಗೆ ಎಂದು ಟ್ವೀಟ್ ಮಾಡಿದೆ. ಟ್ವೀಟ್ ಬಳಿಕ ನನ್ನ ಕುಟುಂಬದವರಿಗೆ ಅನಗತ್ಯವಾಗಿ ತೊಂದರೆ ಕೊಡುವುದು ಆರಂಭವಾಯಿತು. ನನ್ನ ಕುಟುಂಬದವರ ರಕ್ಷಣೆಗಾಗಿ ಟ್ವೀಟ್ ಡಿಲೀಟ್ ಮಾಡಿದೆ.

tejaswi surya a

ಆತನ ವಿರುದ್ಧ ಟ್ವೀಟ್ ಮಾಡಿ ಪ್ರಸಿದ್ಧಿ ಪಡೆಯಬೇಕೆಂಬ ಹುಚ್ಚು ಆಸೆ ನನಗಿಲ್ಲ. ನಾನು ಈಗಾಗಲೇ ಉದ್ಯಮದಲ್ಲಿ ಹೆಸರು ಮಾಡಿದ್ದೇನೆ. ಎಂಪಿ ಟಿಕೆಟ್ ಸಿಕ್ಕ ಬಳಿಕ ಆತ ನಾಲ್ಕು ಜನರಿಗೆ ಗೊತ್ತಾಗಿದ್ದಾನೆ. ಇ-ಮೇಲ್ ಮೂಲಕ ಸಹ ಆತ ನನಗೆ ಬೆದರಿಕೆ ಹಾಕುತ್ತಿದ್ದ. ಮೇಲ್ ನಲ್ಲಿಯೂ ನನಗೆ ತೊಂದರೆ ನೀಡಿರುವುದನ್ನು ಎಲ್ಲವನ್ನು ಒಪ್ಪಿಕೊಂಡಿದ್ದಾನೆ. ನಾನು ಇದೆಲ್ಲದರಿಂದ ಹೊರಬರಬೇಕಿತ್ತು. ನಾನು ಅವನನ್ನು ಬಹು ಹಿಂದೆಯೇ ತಡೆಯಬೇಕಿತ್ತು. ಒಬ್ಬ ತಪ್ಪು ಮನುಷ್ಯನಿಂದಾಗಿ ಅವರ ಇಡೀ ಕುಟುಂಬ ತೊಂದರೆಯನ್ನು ಅನುಭವಿಸಬಾರದು. ನನ್ನ ಕುಟುಂಬವು ಸಹ ತುಂಬಾ ಗೌರವಸ್ಥ ಕುಟುಂಬ. ಇಂದಿಗೂ ನಾನು ಅವನ ಕುಟುಂಬಸ್ಥರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದೇನೆ.

ಪ್ರತಾಪ್ ಸಿಂಹಗೆ ಗೊತ್ತಿತ್ತು:
ಅವನೇ ನನ್ನ ಹಣದಿಂದ ಬದುಕುತ್ತಿದ್ದ, ನಾನು ಏಕೆ ಅವನಿಗೆ ಬ್ಲ್ಯಾಕ್ ಮೇಲ್ ಮಾಡಲಿ. ಬ್ಲ್ಯಾಕ್ ಮೇಲ್ ಮಾಡುವದರಿಂದ ಏನು ಉಪಯೋಗವಾಗಲಿದೆ. ನನಗೇನು ಅದರಿಂದ ಖ್ಯಾತಿ ಬರುತ್ತಾ? ಹೆಚ್ಚಿನ ಮಾಹಿತಿ ಬೇಕಾದ್ರೆ ಐಪಿಎಸ್ ಮಹಿಳಾ ಅಧಿಕಾರಿಯೊಬ್ಬರನ್ನು ಭೇಟಿ ಮಾಡಿ. ಅವರೊಂದಿಗೆ ಮಾತನಾಡಿ ಈ ವ್ಯಕ್ತಿಯ ಬಗ್ಗೆ ದೂರು ನೀಡಿದ್ದೇನೆ. ಈ ವಿಷಯ ಸಂಸದ ಪ್ರತಾಪ್ ಸಿಂಹರಿಗೂ ಗೊತ್ತಿದೆ. ಪ್ರತಾಪ್ ಸಿಂಹರಿಗೆ ನಮ್ಮಿಬ್ಬರ ಮಾತುಕತೆ ಸ್ಕ್ರೀನ್ ಶಾಟ್ ಕಳುಹಿಸಿದ್ದೇನೆ.

tejaswi surya

ನಾನು ಭಾವಿಪತ್ನಿಯಾಗಿದ್ದೆ:
ನಾನು ಅವನ ಗರ್ಲ್ ಫ್ರೆಂಡ್ ಅಲ್ಲ, ಭಾವಿಪತ್ನಿಯಾಗಿದ್ದವಳು. ನಮ್ಮಿಬ್ಬರ ನಿಶ್ಚಿತಾರ್ಥ ಸಹ ನಡೆದಿದೆ. ನಾವಿಬ್ಬರು ಮದುವೆ ಆಗಲಿದ್ದೇವೆ ಎಂದು ಇಡೀ ಜಗತ್ತಿಗೆ ಗೊತ್ತಿತ್ತು. ನಿಶ್ಚಿತಾರ್ಥದ ಬಳಿಕ ಪ್ರಪಂಚದಲ್ಲಿ ನಾವು ಒಟ್ಟಾಗಿ ಓಡಾಡುತ್ತಿದ್ದೇವು. ಈಗ ಎಲ್ಲವೂ ಸುಳ್ಳು ಎಂದು ಹೇಗೆ ತಪ್ಪಿಸಿಕೊಳ್ಳಲು ಸಾಧ್ಯ? ಎಲ್ಲರಿಗೂ ನಾವು ಜೊತೆಯಾಗಿ ಒಡಾಡುತ್ತಿದ್ದ ವಿಚಾರ ಗೊತ್ತಿತ್ತು. ಮಾತುಕತೆಯ ಸ್ಕ್ರೀನ್ ಶಾಟ್ ಗಳು, ಫೋಟೋಗಳು ಇದೆಲ್ಲವೂ ಎಲ್ಲರಿಗೂ ಗೊತ್ತಿದೆ. ಆದ್ರೆ ಈ ವಿಷಯ ಹೇಗೆ ಲೀಕ್ ಆಯ್ತು ಎಂಬುವುದು ನನಗೆ ಗೊತ್ತಿಲ್ಲ.

‘ಹಿ ಈಸ್ ಡೇಂಜರಸ್’:
ಈ ಎಲ್ಲ ಬೆಳವಣಿಗೆಯ ಬಳಿಕ ನಾವಿಬ್ಬರು ಒಳ್ಳೆಯ ಸ್ನೇಹಿತರಾಗಿದ್ದೇವೆ. ಆತ ಟಿಕೆಟ್ ಪಡೆಯಲು ಪ್ರಯತ್ನಿಸುತ್ತಿರೋದು ಗೊತ್ತಿತ್ತು. ತೊಂದರೆ ಕೊಡುವುದಿದ್ದರೆ ಅಂದೆ ಕೊಡುತ್ತಿದ್ದೆ. ಸಂತೋಷ್ ಜೀ ಮತ್ತು ಮುಕುಂದ್ ಜೀ ಸಹಾಯದಿಂದ ಆತ ಟಿಕೆಟ್ ಪಡೆದುಕೊಂಡಿದ್ದಾನೆ. ನಾನು ಪ್ರಧಾನಿ ನರೇಂದ್ರ ಮೋದಿ ಸಲಹೆಗಾರರ ಮಾನಸ ಪುತ್ರಿ. ನಾವಿಬ್ಬರು ಮದುವೆ ಆಗಬೇಕು ಎಂದಿದ್ದವರು, ನಾನು ಅದರಿಂದ ಹೊರ ನಡೆದೆ ಅಷ್ಟೇ. ಸುರಭಿ ಎಂಬವರನ್ನು ನೀವು ಸಂಪರ್ಕ ಮಾಡಿ ಮಾತನಾಡಿ. ನನಗೆ ಬಿಜೆಪಿ ಶಾಸಕರೊಬ್ಬರು ಫೋನ್ ಮಾಡಿ, ಸುರಭಿ ಎಂಬವರು ಬಿಜೆಪಿ, ಆರ್‍ಎಸ್‍ಎಸ್ ಮುಖಂಡರೊಂದಿಗೆ ಮಾತನಾಡಿ ವಿಷಯ ತಿಳಿಸಿದ್ದಾರೆ. ತೇಜಸ್ವಿನಿ ಅನಂತ್ ಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ. ಆಕೆಯೇ ಅವನಿಂದ ಮೊದಲು ದೌರ್ಜನ್ಯಕ್ಕೆ ತುತ್ತಾದವಳು. ಮುಂಬೈನಲ್ಲಿ ಐಶ್ವರ್ಯ ಎಂಬವರ ಬಗ್ಗೆ ಕೇಳಿದ್ದೇನೆ. ಒಂದು ವೇಳೆ ಆತ ಎಂಪಿ ಆದ್ರೆ ‘ಹಿ ಈಸ್ ಡೇಂಜರಸ್’ (He Is Dangerous) ಎಂದು ಆಡಿಯೋದಲ್ಲಿ ಸೋಮ್ ದತ್ತಾ ಹೇಳಿಕೊಂಡಿದ್ದಾರೆ.

https://www.youtube.com/watch?v=b_yx7ATOliM

TAGGED:bjpbrijesh kalappaLok Sabha Election 2019Public TVTejaswi Suryaತೇಜಸ್ವಿ ಸೂರ್ಯಪಬ್ಲಿಕ್ ಟಿವಿಬಿಜೆಪಿಬ್ರಜೇಶ್ ಕಾಳಪ್ಪಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
5 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
6 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
6 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
6 hours ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
7 hours ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?