ರೋಡ್ ಶೋ ವೇಳೆ ಉಲ್ಲಂಘನೆ – ತೇಜಸ್ವಿ ಸೂರ್ಯ ವಿರುದ್ಧ ದೂರು

Public TV
1 Min Read
tejasvi suya

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಯೋಗಾನಂದ್ ಅವರು ತೇಜಸ್ವಿ ಸೂರ್ಯ ವಿರುದ್ಧ ಬೆಂಗಳೂರು ದಕ್ಷಿಣ ಚುನಾವಣಾ ಅಧಿಕಾರಿಗೆ ದೂರು ದಾಖಲಿಸಿದ್ದಾರೆ. ತೇಜಸ್ವಿ ಸೂರ್ಯ ಪ್ರಚಾರ ವಾಹನದಲ್ಲಿ ಎಲ್‍ಇಡಿ ಲೈಟ್ ಬಳಕೆ ಆಗಿದೆ. ಇದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪ ಮಾಡಿ ದೂರು ದಾಖಲಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಅನ್ವಯ ಪ್ರಚಾರ ವಾಹನಕ್ಕೆ ಎಲ್‍ಇಡಿ ಲೈಟ್ ಅಳವಡಿಕೆ ಮಾಡುವಂತಿಲ್ಲ. ಆದರೆ ಬಿ.ಎಸ್ ಯಡಿಯೂರಪ್ಪ, ಅಮಿತ್ ಶಾ ಭಾಗವಹಿಸಿದ್ದ ರೋಡ್ ಶೋ ವೇಳೆ ಎಲ್‍ಇಡಿ ದೀಪ ಬಳಕೆ ಆಗಿತ್ತು. ಹಾಗಾಗಿ ಯೋಗಾನಂದ್ ಅವರು ತೇಜಸ್ವಿ ವಿರುದ್ಧ ದೂರು ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *