Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನೀವು ಧೀರ, ಶೂರ ಎಂದು ಹೊಗಳಿದವನು ಪಕ್ಷ ಬಿಟ್ಟು ಹೋದ: ಚಿಂಚನಸೂರಿಗೆ ಮಾಜಿ ಸಿಎಂ ಟಾಂಗ್

Public TV
Last updated: April 17, 2019 5:24 pm
Public TV
Share
2 Min Read
Siddu Baburao Chinchansur
SHARE

– ಖರ್ಗೆ ಬೆನ್ನಿಗೆ ಚೂರಿ ಹಾಕಿದ ಜಾಧವ್‍ರನ್ನು ಹೀನಾಯವಾಗಿ ಸೋಲಿಸಬೇಕು
– ಖರ್ಗೆ ಎದುರಿಸುವ ಶಕ್ತಿ ಮೋದಿಗಿಲ್ಲ

ಯಾದಗಿರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುರುಮಠಕಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೈದಾಪುರದಲ್ಲಿ ನಡೆದ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷ ಬಿಟ್ಟು ಹೋದ ನಾಯಕರನ್ನು ನೆನೆದು ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ ಅವರು, ನೀವು ಚಂದ್ರ, ಧೀರ, ಶೂರ ಎಂದು ನನ್ನನ್ನು ಹೊಗಳಿದ್ದ. ನಿಮ್ಮನ್ನ ಬಿಟ್ಟು ಹೋಗಲ್ಲ ಎಂದು ಹೇಳಿದ ಅಸಾಮಿ ಇದೀಗ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ. ಮಾಜಿ ಶಾಸಕರಾದ ಉಮೇಶ್ ಜಾಧವ್, ಮಾಲಿಕಯ್ಯ ಗುತ್ತೇದಾರ್, ಡಾ.ಎ.ಬಿ.ಮಾಲಕರೆಡ್ಡಿ ಎಲ್ಲರೂ ಬಂದರು, ಪಕ್ಷ ಬಿಟ್ಟು ಹೋದರು. ಆದರೆ ಅವರು ಯಾರೂ ನಿರ್ದಿಷ್ಟ ಕಾರಣ ನೀಡಲಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

Siddu A

ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಯಾವತ್ತೂ ಅಧಿಕಾರದಿಂದ ಹೋಗಲಿಲ್ಲ. ಅಧಿಕಾರವೇ ಅವರ ಹಿಂದೆ ಬಂದಿದೆ. ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಕಾಂಗ್ರೆಸ್‍ನಲ್ಲಿದ್ದಾಗ ಅವರು ಹೇಳಿದ ಎಲ್ಲ ಕೆಲಸವನ್ನು ಮಾಡಿಕೊಟ್ಟೆ. ಆದರೆ ಪಕ್ಷ ಬಿಟ್ಟು ಹೋದರು. ಮುಂಬೈಗೆ ಹೋಗಿ ಬಿಜೆಪಿ ಹತ್ತಿರ ದುಡ್ಡು ತೆಗೆದುಕೊಂಡು ಅವರ ಪಕ್ಷ ಸೇರಿಕೊಂಡರು. ಉಮೇಶ್ ಜಾಧವ್ ಅವರಿಗೆ ನಾಚಿಕೆ ಆಗಬೇಕು. ಮಲ್ಲಿಕಾರ್ಜುನ ಖರ್ಗೆ ಅವರ ಬೆನ್ನಿಗೆ ಚೂರಿ ಹಾಕಿದ ಅವರನ್ನು ಹೀನಾಯವಾಗಿ ಸೋಲಿಸಬೇಕು. ಆಗ ಅವರಿಗೆ ಬುದ್ಧಿ ಬರುತ್ತದೆ ಎಂದು ಗುಡುಗಿದರು.

Siddu B

ಮಂತ್ರಿ ಸ್ಥಾನ ನೀಡುತ್ತೇವೆ ಎಂದು ಹೇಳಿದರೂ ಉಮೇಶ್ ಜಾಧವ್ ಪಕ್ಷ ಬಿಟ್ಟರು. ಈಗ ದುಡ್ಡು ಪಡೆದು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಮರ್ಯಾದೆ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಎದುರಿಸುವಷ್ಟು ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಲ್ಲ. ಹೀಗಾಗಿ ಪ್ರಧಾನಿ ಮೋದಿ ಸಂಸತ್‍ಗೆ ಬರುವುದಿಲ್ಲ. ಸಂಸತ್‍ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಸ್ಥಾನ ಭರ್ತಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿಯವರು ಎಲ್ಲರೂ ಮಾನಗೆಟ್ಟವರು. ಅದಕ್ಕಾಗಿಯೇ ನನ್ನ ಮುಖ ನೋಡಬೇಡಿ, ಮೋದಿ ಮುಖ ನೋಡಿ ಮತ ಹಾಕಿ ಎನ್ನುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಐದು ವರ್ಷ ಏನು ಮಾಡಿದರು ಎಂದು ನಾವು ನೋಡಿದ್ದೇವೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಸೇವಲಾಲ ಜಯಂತಿ ಆಚರಣೆ ಮಾಡಿದೆ. ಕೋಲಿ ಹಾಗೂ ಕಬ್ಬಲಿಗ ಸಮುದಾಯವನ್ನು ಎಸ್‍ಟಿಗೆ ಸೇರಿಸಲು ಒತ್ತಡ ಹಾಕಿದ್ದೆ. ಅಂಬಿಗರ ಚೌಡಯ್ಯ ಜಯಂತಿ ಮಾಡಿದ್ದು ನಾನು. ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್, ಉಮೇಶ್ ಜಾಧವ್ ಏನು ಮಾಡಿದ್ದಾರೆ ಎಂದು ಕಿಡಿಕಾರಿದರು.

Glb mallikarjuna kharge

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ಹಿಂದುಳಿದವರಿಗೆ ಒಂದೇ ಒಂದು ಟಿಕೆಟ್ ನೀಡಿಲ್ಲ. ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಬಾಯ್ಬಡಕ. ಅವನ ಯೋಗ್ಯತೆಗೆ ಬೆಂಕಿ ಹಾಕ, ಕುರುಬ ಸಮಾಜ ಒಬ್ಬ ನಾಯಕನಿಗೆ ಟಿಕೆಟ್ ಕೊಡಿಸಲು ಶ್ರಮಿಸಲಿಲ್ಲ. ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಗ್ರಾಮ ಪಂಚಾಯತ್ ಸದಸ್ಯರಾಗಲು ಕೂಡ ನಾಲಾಯಕ್. ಇಂತಹವನು ಸಂವಿಧಾನ ಬದಲಿಸುವ ಮಾತನಾಡುತ್ತಾನೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

TAGGED:baburao chinchansurbjpcongressformer CM SiddaramaiahPublic TVumesh jadhavಉಮೇಶ್ ಜಾಧವ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮಲ್ಲಿಕಾರ್ಜುನ ಖರ್ಗೆಮಾಜಿ ಸಿಎಂ ಸಿದ್ದರಾಮಯ್ಯಯಾದಗಿರಿ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
57 minutes ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
16 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
35 minutes ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
37 minutes ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
58 minutes ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
2 hours ago
weather
Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
By Public TV
2 hours ago
Electronic City Flyover Accident copy
Bengaluru City

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?