ಕುಂದಗೋಳ ಉಪಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ನೀಡಿದ ಡಿಕೆಶಿ

Public TV
1 Min Read
DKSHI 1

ಧಾರವಾಡ: ಕುಂದಗೋಳ ಉಪ ಚುನಾವಣೆ ದಿನದಿಂದ ದಿನಕ್ಕೆ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಇಂದು ಧಾರವಾಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಬಸವರಾಜ್ ಅರಬಗೊಂಡ ಇಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬಸವರಾಜ್ ಅರಬಗೊಂಡ ಸದ್ಯ ಧಾರವಾಡ ಹಾಲು ಒಕ್ಕೂಟದ ನಿರ್ದೇಶಕರಾಗಿದ್ದಾರೆ.

kundgol bjp

ಕೆಲವು ದಿನಗಳ ಹಿಂದೆಯೇ ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗ ಪ್ರಚಾರದಲ್ಲಿ ಬಿಜೆಪಿ ನಾಯಕರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಗಮಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅಂದು ಸುಳಿವು ನೀಡಿದಂತೆ ಸ್ಥಳೀಯ ಪ್ರಭಾವಿ ಮುಖಂಡರಾಗಿರುವ ಬಸವರಾಜ್ ಅರಬಗೊಂಡರನ್ನು ಪಕ್ಷಕ್ಕೆ ಕರೆತರುವಲ್ಲಿ ಡಿ.ಕೆ.ಶಿವಕುಮಾರ್ ಯಶಸ್ವಿಯಾಗಿದ್ದು, ಬಿಜೆಪಿ ಭಾರೀ ಹೊಡೆತ ಎನ್ನಲಾಗಿದೆ. ಈ ಮೊದಲೇ ಸ್ಥಳೀಯ ಬಿಜೆಪಿ ಮುಖಂಡರ ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಸುಳಿವನ್ನು ಡಿ.ಕೆ.ಶಿವಕುಮಾರ್ ನೀಡಿದ್ದರು.

DKShi

ಬಿಜೆಪಿ ಕಾರ್ಯಕರ್ತರನ್ನು ತಮ್ಮತ್ತ ಸೆಳೆಯುವ ಕೆಲಸ ಡಿಕೆಶಿ ಮಾಡುತ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಕೈ ಹಾಕಿದರೆ ಹುಷಾರ್. ಇದರ ಪರಿಣಾಮ ನೆಟ್ಟಗಿರಲ್ಲ. ಇದು ಕನಕಪುರ, ರಾಮನಗರ ಅಲ್ಲ. ಇಲ್ಲಿ ಯಾರನ್ನು ಖರೀದಿಸಲು ಸಾಧ್ಯವಿಲ್ಲ. ಡಿಕೆ ಶಿವಕುಮಾರ್ ಅವರಿಗೆ ಕುಂದಗೋಳ ಉಪ ಚುನಾವಣೆಯ ಉಸ್ತುವಾರಿ ಕೊಟ್ಟಿದ್ದಾರೆ. ಯಾಕೆ ಕಾಂಗ್ರೆಸ್‍ನಲ್ಲಿ ಉತ್ತರ ಕರ್ನಾಟಕದಲ್ಲಿ ನಾಯಕರೇ ಇಲ್ಲವೇ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗುರುವಾರ ಎಚ್ಚರಿಕೆ ನೀಡಿದ್ದರು.

dkshi 1

ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಇಡೀ ರಾಜ್ಯದ ನಾಯಕರು ಚುನಾವಣೆ ನಡೆಸಲು ಆಗಮಿಸಿದ್ದಾರೆ. ನಮ್ಮ ಕಾರ್ಯಕರ್ತರು ಗ್ರಾಮ ಪಂಚಾಯತ್ ಮಟ್ಟದಲ್ಲಿ ತೆರಳಿ ಮಹಿತಿ ಕಲೆ ಹಾಕಿದ್ದು, ಶಿವಳ್ಳಿ ಅವರು ಯಾರಿಗೂ ಕಿರುಕುಳ ನೀಡಿಲ್ಲ. ನಮ್ಮ ಸರ್ಕಾರ ಮತ್ತು ಪಕ್ಷದ ಒಗ್ಗಟ್ಟಿನಿಂದ ಚುನಾವಣೆಯ ಕೆಲಸದಲ್ಲಿ ಭಾಗಿಯಾಗಿದೆ. ಜನ ನಮ್ಮ ಜೊತೆಗಿದ್ದಾರೆ. ಗ್ರಾಮಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರು ನಮಗೆ ಆಶಿರ್ವಾದ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಯಾರಿಗೂ ಹಣದ ಆಮಿಷ ಒಡ್ಡಿಲ್ಲ. ಯಾರ ಬಳಿ ಸಾಕ್ಷ್ಯಗಳಿದ್ದರೆ, ಬೇಕಾದರೆ ಪೊಲೀಸರಿಗೆ ದೂರು ನೀಡಬಹುದು ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *