Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬರದ ನಾಡಲ್ಲಿ ಸದ್ದಿಲ್ಲದೆ ನಡೆದಿದೆ ಜಲ ಸಂವರ್ಧನೆ

Public TV
Last updated: May 14, 2019 6:20 pm
Public TV
Share
2 Min Read
RCR Drought copy
SHARE

– ಜಿಲ್ಲೆಯ 33 ಕೆರೆಗಳ ಪುನಶ್ಚೇತನ ಕಾರ್ಯ
– ರೈತರ ಜಮೀನುಗಳಿಗೆ ಉಚಿತವಾಗಿ ಸಿಗುತ್ತಿದೆ ಫಲವತ್ತಾದ ಮಣ್ಣು
– ಖಾಸಗಿಯವರಿಂದ ಕೋಟ್ಯಂತರ ರೂಪಾಯಿ ಸಹಾಯ ಧನ

ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಭೀಕರ ಬರಗಾಲ ಎದುರಿಸುತ್ತಿದೆ. ಒಂದು ವೇಳೆ ಒಳ್ಳೆಯ ಮಳೆ ಬಂದರೂ ನೀರನ್ನ ಹಿಡಿದಿಟ್ಟುಕೊಳ್ಳುವ ವ್ಯವಸ್ಥೆಯೂ ಜಿಲ್ಲೆಯಲ್ಲಿಲ್ಲ. ಹೂಳು ತುಂಬಿರುವ ಜಿಲ್ಲೆಯ ನೂರಾರು ಕೆರೆಗಳು ಇದ್ದರೂ ಇಲ್ಲದಂತಾಗಿದೆ. ಹೀಗಾಗಿ ಖಾಸಗಿ ಸಂಸ್ಥೆಯೊಂದು ಮುಂದೆ ಬಂದಿದ್ದು ಕೆರೆಗಳ ಹೂಳು ತೆಗೆಯುತ್ತಿದೆ. ಒಂದಿಡೀ ಸರ್ಕಾರ ಮಾಡಬೇಕಾದ ಕೆಲಸವನ್ನ ಖಾಸಗಿಯವರು ಮಾಡುತ್ತಿದ್ದಾರೆ.

RCR Drought A copy

ರಾಯಚೂರು ಜಿಲ್ಲೆಯಲ್ಲಿ ತುಂಗಭದ್ರಾ, ಕೃಷ್ಣ ನದಿಗಳೆರಡು ಇದ್ದರೂ ಜಿಲ್ಲೆಯ ಜನ ಹಾಗೂ ರೈತರು ಪ್ರತೀ ವರ್ಷ ನೀರಿನ ಭೀಕರ ಸಮಸ್ಯೆಯನ್ನ ಎದುರಿಸುತ್ತಲೇ ಇದ್ದಾರೆ. ನಾಲ್ಕು ವರ್ಷಕ್ಕೊಮ್ಮೆ ಉತ್ತಮ ಮಳೆ ಬಂದರೆ ಆ ನೀರನ್ನ ಸದ್ಬಳಕೆ ಮಾಡಿಕೊಳ್ಳಲು ಆಗದೆ ರೈತರು ಪುನಃ ಕಂಗಾಲಾಗಿ ಕುಳಿತುಕೊಳ್ಳುತ್ತಲೇ ಇದ್ದಾರೆ. ಹೀಗಾಗಿ ನೀತಿ ಆಯೋಗದ ಸೂಚನೆ ಮೇರೆಗೆ ಭಾರತೀಯ ಜೈನ ಸಮುದಾಯ ರಾಯಚೂರು ಹಾಗೂ ಯಾದಗಿರಿಯ ಕೆರೆಗಳ ಹೂಳೆತ್ತುವ ಕಾಯಕ ಕೈಗೆತ್ತಿಕೊಂಡಿದೆ.

RCR Lake C copy

ಸರ್ಕಾರದೊಂದಿಗೆ ಕೇವಲ ಡೀಸೆಲ್ ನೀಡಲು ಒಪ್ಪಂದ ಮಾಡಿಕೊಂಡಿದ್ದು ಯಂತ್ರೋಪಕರಣ, ಹೂಳು ವಿಲೇವಾರಿ, ಜಾಗೃತಿ ಕಾರ್ಯಕ್ರಮಗಳ ಹೊಣೆಯನ್ನ ಭಾರತೀಯ ಜೈನ ಸಮುದಾಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ನಿರ್ವಹಿಸುತ್ತಿವೆ. ಈಗಾಗಲೇ ಫೆಬ್ರವರಿಯಿಂದ ಜಿಲ್ಲೆಯಲ್ಲಿ ಕಟ್ಲಾಟಕೂರ್, ಉಪ್ಪಾರನಂದಿಹಾಳ, ತುಂಟಾಪುರ ಸೇರಿ ಏಳು ಕೆರೆಗಳ ಹೂಳು ತೆಗೆಯಲಾಗುತ್ತಿದೆ. ಜಿಲ್ಲೆಯಲ್ಲಿ 5 ಲಕ್ಷ ಕ್ಯೂಬಿಕ್ ಮೀಟರ್, ಯಾದಗಿರಿಯಲ್ಲಿ 11 ಲಕ್ಷ ಕ್ಯೂಬಿಕ್ ಮೀಟರ್ ಹೂಳನ್ನ ತೆಗೆಯಲಾಗಿದ್ದು ರೈತರಿಗೆ ಉಚಿತವಾಗಿ ಮಣ್ಣನ್ನ ತೆಗೆದುಕೊಂಡು ಹೋಗಲು ಅನುವು ಮಾಡಿಕೊಡಲಾಗಿದೆ ಅಂತ ಬಿಜೆಎಸ್ ರಾಜ್ಯ ಸಂಘಟಕ ಕಮಲ್ ಕುಮಾರ್ ಜೈನ್ ತಿಳಿಸಿದ್ದಾರೆ.

RCR Lake b copy

ಜಿಲ್ಲಾಡಳಿತದ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಸ್ಥಳೀಯ ಖಾಸಗಿ ಸಂಸ್ಥೆಗಳು ಸಹ ಕೆರೆ ಹೂಳು ತೆಗೆಯಲು ಸಹಕಾರ ನೀಡುತ್ತಿವೆ. ರೈತರು ಸ್ವಯಂ ಪ್ರೇರಿತರಾಗಿ ಫಲವತ್ತಾದ ಮಣ್ಣನ್ನ ತಮ್ಮ ಖರ್ಚಿನಲ್ಲೆ ತೆಗೆದುಕೊಂಡು ಹೋಗುತ್ತಿದ್ದಾರೆ. 8 ರಿಂದ 9 ಅಡಿಯಷ್ಟು ಹೂಳನ್ನ ಪ್ರತಿ ಕೆರೆಯಲ್ಲೂ ತೆಗೆಯಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ 33 ಕೆರೆಗಳನ್ನ ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ 7 ಕೆರೆಗಳ ಹೂಳು ತೆಗೆಯಲಾಗುತ್ತಿದ್ದು, ಮೊದಲ ಹಂತದ ಕೆಲಸ ಮುಕ್ತಾಯ ಹಂತಕ್ಕೆ ತಲುಪಿದೆ. ಇದರಿಂದ ಜಿಲ್ಲೆಯ ರೈತರು ಖುಷಿ ವ್ಯಕ್ತಪಡಿಸಿದ್ದಾರೆ.

RCR Lake copy

ಒಟ್ಟಿನಲ್ಲಿ, ಬರಗಾಲದ ನಾಡಲ್ಲಿ ಜಲ ಸಂವರ್ಧನೆ ಹಾಗು ಕೆರೆಗಳ ಪುನಶ್ಚೇತನ ಕಾರ್ಯ ಸದ್ದಿಲ್ಲದೆ ನಡೆದಿದೆ. ಮಳೆ ಬಂದಾಗ ಹಳ್ಳಗಳಿಗೆ ಹರಿದು ಪೋಲಾಗುತ್ತಿದ್ದ ನೀರು ಇನ್ಮುಂದೆ ಕೆರೆಯಲ್ಲಿ ನಿಲ್ಲಲಿದೆ. ನೀರಿನ ಸಮಸ್ಯೆ ಎದುರಿಸುತ್ತಲೇ ಇರುವ ರೈತರಿಗೆ ಈಗ ಭರವಸೆಯ ಬೆಳಕೊಂದು ಕಾಣಿಸುತ್ತಿದೆ.

TAGGED:ಕೆರೆಕೆರೆ ಪುನಶ್ಚೇತನಜೈನ ಸಮುದಾಯನೀರುಪಬ್ಲಿಕ್ ಟಿವಿಬರಗಾಲರಾಯಚೂರುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
6 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
15 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
1 day ago

You Might Also Like

03 7
Big Bulletin

ಬಿಗ್‌ ಬುಲೆಟಿನ್‌ 11 June 2025 ಭಾಗ-3

Public TV
By Public TV
2 minutes ago
Biligiriranga hills
Bengaluru City

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ

Public TV
By Public TV
11 minutes ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
24 minutes ago
Meghalaya Honeymoon
Crime

ಹನಿಮೂನ್‌ ಮರ್ಡರ್‌ ಕೇಸ್‌ – ಹಂತಕಿ ಸೋನಂ ಜೊತೆ ಸಂಬಂಧ ಕಡಿದುಕೊಂಡ ಕುಟುಂಬ

Public TV
By Public TV
32 minutes ago
Helmet gift on birthday in bidar
Bidar

ಜನ್ಮದಿನದಂದು ಬೈಕ್ ಸವಾರರಿಗೆ ಹೆಲ್ಮೆಟ್ – ಗಿಫ್ಟ್ ನೀಡಿದ ಗ್ರಾ.ಪಂ ಉಪಾಧ್ಯಕ್ಷ

Public TV
By Public TV
46 minutes ago
Dinesh Gundurao 1
Bengaluru City

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ: ದಿನೇಶ್ ಗುಂಡೂರಾವ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?