Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಾವೇನು ಹಾಸ್ಯಗಾರರಾ? – ಮಾಧ್ಯಮಗಳ ವಿರುದ್ಧ ಸಿಎಂ ಕೆಂಡಾಮಂಡಲ

Public TV
Last updated: May 19, 2019 2:53 pm
Public TV
Share
2 Min Read
HDK
SHARE

ಮೈಸೂರು: ಕಳೆದ ಮೂರು ವಾರಗಳಿಂದ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗರಂ ಆಗಿದ್ದಾರೆ.

ನಾನು ಮಾಧ್ಯಮದವರ ಜೊತೆ ಉತ್ತಮ ಸ್ನೇಹ ಇಟ್ಟುಕೊಂಡ ವ್ಯಕ್ತಿ. ಕೆಲ ದಿನಗಳ ಹಿಂದೆ ಮಾಧ್ಯಮದವರ ಸಹವಾಸವೇ ಡೇಂಜರ್ ಅಂತಾ ದೂರ ಉಳಿದುಕೊಂಡಿದ್ದೇನೆ. ನಾನು ಮಾಧ್ಯಮದಿಂದ ಬದುಕಿಲ್ಲ. ನಾಡಿನ ಆರೂವರೆ ಕೋಟಿ ಜನರ ಆಶೀರ್ವಾದದಿಂದ ಬದುಕಿದ್ದೇನೆ. ಮಾತು ಎತ್ತಿದರೆ ಸಿಎಂ ಕುರ್ಚಿ ಗಢ ಗಢ ಅಂತಾ ಶುರು ಮಾಡಿಕೊಳ್ಳುತ್ತಾರೆ. ಕೆಲವು ದೃಶ್ಯ ಮಾಧ್ಯಮಗಳು ತಮ್ಮ ಟೈಮ್ ಫಿಲ್ ಮಾಡಿಕೊಳ್ಳೋಕೆ ನಾವು ಹೇಳಿರದ ವಿಷಯಗಳನ್ನು ಅರ್ಧ ಗಂಟೆ ಎಪಿಸೋಡ್ ಮಾಡ್ತಾರೆ. ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬ ವಿಷಯದ ಬಗ್ಗೆ ಅರ್ಧ ಗಂಟೆ ಸಂಚಿಕೆ ಮಾಡುತ್ತಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಹರಿಹಾಯ್ದರು.

HDK a

ಮಾಧ್ಯಮಗಳ ಮೇಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಾನೂನು ತರಲು ಚರ್ಚೆ ನಡೆಸಿದ್ದೇವೆ. ಕೆಲವೊಂದು ವಾಹಿನಿಗಳು ರಾಜಕಾರಣಿಗಳನ್ನು ವ್ಯಂಗ್ಯವಾಗಿ ತೋರಿಸುತ್ತಾರೆ. ನಾವೇನು ಬಿಟ್ಟಿ ಸಿಕ್ಕಿದ್ದೇವಾ? ನಮ್ಮ ಪ್ರತಿಯೊಂದು ಹೇಳಿಕೆಗಳನ್ನು ವ್ಯಂಗ್ಯವಾಗಿ ತೋರಿಸುವ ಅಧಿಕಾರವನ್ನು ಮಾಧ್ಯಮಗಳಿಗೆ ಯಾರು ನೀಡಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ಈ ಸಮ್ಮಿಶ್ರ ಸರ್ಕಾರ ಸದೃಢವಾಗಿದ್ದು, ಅಷ್ಟೊಂದು ಸುಲಭವಾಗಿ ಹೋಗಲ್ಲ.

HDK B

ಶನಿವಾರ ಬಸವರಾಜ್ ಹೊರಟ್ಟಿ ಅವರ ಹೇಳಿಕೆ ಬಳಿಕ ನಾನು ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದೇವೆ ಎಂಬ ಸುದ್ದಿ ಬಿತ್ತರವಾಗಿತ್ತು. ನಾವು ಯಾವುದೇ ಸಮಾಲೋಚನೆಯೂ ನಡೆಸದೇ ನಮ್ಮ ಕೆಲಸದಲ್ಲಿ ನಾವು ನಿರತವಾಗಿದ್ದೇವು. ಬಿಜೆಪಿ ನಾಯಕರು ಕಳೆದ 10 ತಿಂಗಳುಗಳಿಂದ ಗರಿ ಗರಿ ಹೊಸ ಬಟ್ಟೆ ಹೊಲಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ನಾಯಕರು ಅನಾವಶ್ಯಕವಾಗಿ ಸರ್ಕಾರ ಬೀಳುತ್ತೆ ಹೇಳುತ್ತಿರೋದನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಬಂದಿದ್ದೇನೆ.

ಮೈತ್ರಿ ಸರ್ಕಾರ ಮಾಜಿ ಸಿಎಂ ಸಿದ್ದರಾಮಯ್ಯರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಭಾವನೆಗಳಿಗೆ ಬೆಲೆಕೊಟ್ಟು ನಡೆಯುತ್ತಿದೆ. ಇಲ್ಲಿ ಏನೇ, ಯಾರೇ ಮಾತನಾಡಿದರೂ ಸರ್ಕಾರ ಸುಭದ್ರವಾಗಿದೆ. ನಾನು ದೇವಸ್ಥಾನಗಳಿಗೆ ಹೋದ್ರೆ ಟೆಂಪಲ್ ರನ್, ಅದೇ ಪ್ರಧಾನಿ ಮೋದಿ ಹೋದ್ರೆ ವಿಷಯವೇ ಅಲ್ಲ.

HDK SIDDU

ಸೀಟಿನ ಅಭದ್ರತೆಯಿಂದ ಮೋದಿ ಧ್ಯಾನ:
ಪ್ರಧಾನಿ ಮೋದಿ ಬದರಿನಾಥ ಸನ್ನಿಧಾನದಲ್ಲಿ ತಮಗೋಸ್ಕರ ಧ್ಯಾನಕ್ಕೆ ಕುಳಿತಿಲ್ಲ ಅಂತಾ ಕೆಲವರು ಹೇಳುತ್ತಾರೆ. ತಮ್ಮ ಕುರ್ಚಿಯ ಅಭದ್ರತೆ ಕಂಡು ಬಂದಿದ್ದರಿಂದ ಶಿವನ ಧ್ಯಾನದಲ್ಲಿ ಮೋದಿ ಕುಳಿತಿದ್ದಾರೆ. ಬದರಿನಾಥದಲ್ಲಿ ಪ್ರವಾಹ ಬಂದು ಇಷ್ಟು ವರ್ಷಗಳಾದ್ರೂ ಇಲ್ಲಿಯವರೆಗೂ ಅಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವನ್ನು ಅಲ್ಲಿ ಮಾಡಿಲ್ಲ. ಇಷ್ಟು ದಿನ ಏನು ಮಾಡದೇ ಇದ್ದವರು ಮುಂದಿನ ಬಾರಿ ಕೆಲಸ ಮಾಡಿಕೊಡ್ತಾರೆ ಅಂತಾ ಹೇಳುತ್ತಾರೆ. ಕಳೆದ ಐದು ವರ್ಷ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಇದ್ದರೂ ಅಭಿವೃದ್ಧಿ ಕೆಲಸ ಮಾಡಿಲಿಲ್ಲ ಯಾಕೆ ಎಂದು ಪ್ರಶ್ನಿಸಿದರು.

Modi Cave

ರಾಜ್ಯ ಸರ್ಕಾರ ಕೊಡಗು ಪ್ರವಾಹ ಸಂತ್ರಸ್ತರಿಗೆ ಹತ್ತೂವರೆ ಲಕ್ಷದ ಮೌಲ್ಯದಲ್ಲಿ 800 ಗುಣಾತ್ಮಕ ಮನೆಗಳನ್ನು ಕಟ್ಟುತ್ತಿದ್ದೇವೆ. ಈ ಬಾರಿ ಮಳೆಯಾದ್ರೆ ಕೊಡಗಿನಲ್ಲಿ ಅನಾಹುತ ಆಗಬಾರದೆಂದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಸೋಲಿನ ಚಿಂತೆ ನನಗಿಲ್ಲ: 1989ರಲ್ಲಿ ಹೆಚ್.ಡಿ.ದೇವೇಗೌಡರು ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ಅವರು ಲೋಕಸಭಾ ಚುನಾವಣೆಯಲ್ಲಿ ಸೋಲ್ತಾರೆ. ಅಂದು ನಾನು, ಹೆಚ್.ಡಿ.ರೇವಣ್ಣ ಸೋಲು ಕಂಡಿದ್ದೇವೆ. ಸೋಲು ಎಂಬುವುದು ನಮ್ಮ ಕುಟುಂಬಕ್ಕೆ ಹೊಸತಲ್ಲ. ಸೋಲು-ಗೆಲುವನ್ನು ಸಮಚಿತ್ತವಾಗಿ ತೆಗೆದುಕೊಂಡು ರಾಜಕಾರಣ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ.

Nikhil C.S.Puttaraju B

ಮಂಡ್ಯದಲ್ಲಿ ಶಾಸಕರು, ಕಾರ್ಯಕರ್ತರ ಮತ್ತು ಪಕ್ಷ ಸಂಘಟನೆಗಾಗಿ ಪುತ್ರ ನಿಖಿಲ್ ಸ್ಪರ್ಧೆ ಮಾಡಿದರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೋತ್ತರ ಸಮೀಕ್ಷೆಗಳನ್ನು ತರಿಸಿಕೊಂಡಿಲ್ಲ. ಈ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

TAGGED:hd kumaraswamyjdsmysorePublic TVಜೆಡಿಎಸ್ಪಬ್ಲಿಕ್ ಟಿವಿಮೈಸೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

BR Patil 1
Bengaluru City

ಭ್ರಷ್ಟಾಚಾರ ಬಾಂಬ್‌ ಸಿಡಿಸಿದ ಶಾಸಕ ಬಿ.ಆರ್ ಪಾಟೀಲ್‌ಗೆ ಸಿಎಂ ಫುಲ್‌ ಕ್ಲಾಸ್‌

Public TV
By Public TV
1 hour ago
Himachal Pradesh Flood 3 1
Latest

ಮೇಘಸ್ಫೋಟ | ರಣ ಪ್ರವಾಹಕ್ಕೆ ಹಲವೆಡೆ ಭೂಕುಸಿತ – 171 ರಸ್ತೆಗಳು ಹಾಳು, 150ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಜಖಂ

Public TV
By Public TV
1 hour ago
big bulletin 25 June 2025 part 1
Big Bulletin

ಬಿಗ್‌ ಬುಲೆಟಿನ್‌ 25 June 2025 ಭಾಗ-1

Public TV
By Public TV
1 hour ago
big bulletin 25 June 2025 part 2
Big Bulletin

ಬಿಗ್‌ ಬುಲೆಟಿನ್‌ 25 June 2025 ಭಾಗ-2

Public TV
By Public TV
2 hours ago
big bulletin 25 June 2025 part 3
Big Bulletin

ಬಿಗ್‌ ಬುಲೆಟಿನ್‌ 25 June 2025 ಭಾಗ-3

Public TV
By Public TV
2 hours ago
Chalavadi Narayaswamy
Bidar

ಕಾಂಗ್ರೆಸ್‌ನವ್ರು ಗ್ಯಾರಂಟಿ ಹಣ ನೀಡದೇ ಜನರನ್ನು ಭಿಕ್ಷಕರು ಅನ್ಕೊಂಡಿದ್ದಾರೆ – ಛಲವಾದಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?