Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೀಕೆಂಡ್: ಶೃಂಗೇರಿ ಸುರೇಶ್ ಮೂರು ದಶಕಗಳ ಅನುಭವಗಾಥೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೀಕೆಂಡ್: ಶೃಂಗೇರಿ ಸುರೇಶ್ ಮೂರು ದಶಕಗಳ ಅನುಭವಗಾಥೆ!

Bengaluru City

ವೀಕೆಂಡ್: ಶೃಂಗೇರಿ ಸುರೇಶ್ ಮೂರು ದಶಕಗಳ ಅನುಭವಗಾಥೆ!

Public TV
Last updated: May 20, 2019 6:12 pm
Public TV
Share
3 Min Read
weekend d
SHARE

ಬೆಂಗಳೂರು: ಇದೀಗ ತಾನೇ ಹೊಸತಾಗಿ ಎಂಟ್ರಿ ಕೊಟ್ಟವರ ಮೇಲೂ ಆಗಾಗ ಅಪ್ ಡೇಟ್ ಆಗಿಲ್ಲ ಎಂಬಂಥಾ ಆರೋಪಗಳು ಕೇಳಿ ಬರೋದಿದೆ. ಆದರೆ ಅದೆಷ್ಟೋ ದಶಕಗಳಿಂದ ಚಿತ್ರರಂಗದ ಭಾಗವಾಗಿದ್ದೂ, ಆಯಾ ಕಾಲಘಟ್ಟಗಳಿಗೆ ತಕ್ಕಂತೆ ಹೊಂದಿಕೊಳ್ಳುತ್ತಾ ಮುಂದುವರೆಯೋದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ಸಾಧ್ಯವಾಗಿಸಿಕೊಳ್ಳುವ ಕಸುವು ಕೆಲವೇ ಕೆಲ ಮಂದಿಗೆ ಮಾತ್ರವೇ ಸಿದ್ಧಿಸಿರುತ್ತೆ. ಸದ್ಯ ಭಾರೀ ನಿರೀಕ್ಷೆಗಳ ಜೊತೆಗೆ ಚಿತ್ರಮಂದಿರದತ್ತ ಪಯಣ ಬೆಳೆಸಿರುವ ವೀಕೆಂಡ್ ಚಿತ್ರದ ನಿರ್ದೇಶಕ ಶೃಂಗೇರಿ ಸುರೇಶ್ ಆ ವಿರಳರ ಸಾಲಿನಲ್ಲಿ ಪ್ರಧಾನವಾಗಿ ಗುರುತಿಸಿಕೊಳ್ಳುತ್ತಾರೆ. ಅಂಥಾ ಗುಣದಿಂದಲೇ ಅವರು ಈ ತಲೆಮಾರಿನ ನಿರ್ದೇಶಕರೂ ಬೆರಗಾಗುವಂಥಾ ವೀಕೆಂಡ್ ಚಿತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗೋ ಉತ್ಸಾಹದಿಂದಿದ್ದಾರೆ.

weekend c

ಸುರೇಶ್ ಶೃಂಗೇರಿ ಎಂಬುದು ಕನ್ನಡ ಚಿತ್ರರಂಗದ ಪಾಲಿಗೆ ಪರಿಚಿತ ಹೆಸರು. ತೀರಾ ಶಂಕರ್ ನಾಗ್ ಅವರ ಚಿತ್ರಗಳಿಂದ ಆರಂಭವಾಗಿ ಈವರೆಗೂ ಸಲೀಸಾಗಿ ಲೆಕ್ಕಕ್ಕೆ ಸಿಗದಷ್ಟು ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವವರು ಸುರೇಶ್. ಆ ನಂತರ ಸ್ವತಂತ್ರ ನಿರ್ದೇಶಕರಾಗಿಯೂ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಕೋಮಲ್ ಅಭಿನಯದ ಲೊಡ್ಡೆ ಸೇರಿದಂತೆ ಒಂದಷ್ಟು ಚಿತ್ರಗಳನ್ನು ನಿರ್ದೇಶನ ಮಾಡಿರೋ ಸುರೇಶ್ ಅವರೀಗ ವೀಕೆಂಡ್ ಚಿತ್ರದ ಮೂಲಕ ಯೂಥ್ ಫುಲ್ ಕಥೆಯೊಂದಿಗೆ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

weekend b

ಸುರೇಶ್ ಅವರ ಮೂಲವಿರೋದು ಶೃಂಗೇರಿಯಲ್ಲಿ. ಇಲ್ಲಿನ ಕೆರೆದಂಡೆ ಪ್ರದೇಶದಲ್ಲಿ ಇವತ್ತಿಗೂ ಇವರ ಸಂಬಂಧಿಕರಿದ್ದಾರೆ. ಆದರೆ ಸುರೇಶ್ ಅವರು ಬೆಳೆದದ್ದೆಲ್ಲ ಶಿವಮೊಗ್ಗದಲ್ಲಿ. ಅವರ ತಾಯಿ ಶಿಕ್ಷಕಿಯಾಗಿದ್ದವರು. ಈ ಕಾರಣದಿಂದಲೇ ಆರಂಭ ಕಾಲದಿಂದಲೂ ಓದು ಸೇರಿದಂತೆ ಎಲ್ಲ ಚಟುವಟಿಕೆಯಲ್ಲಿಯೂ ಮುಂದಿದ್ದ ಸುರೇಶ್ ಅವರು ಶಿವಮೊಗ್ಗದ ನ್ಯಾಷನಲ್ ಹೈಸ್ಕೂಲಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಆ ಕಾಲದಿಂದಲೇ ಚಿತ್ರರಂಗದ ಕನಸು ಕಟ್ಟಿಕೊಂಡಿದ್ದ ಅವರು ಅದನ್ನು ನನಸು ಮಾಡಿಕೊಂಡು ಮೂವತ್ತು ವರ್ಷಗಳ ಕಾಲ ಯಾನ ಕೈಗೊಂಡಿದ್ದೇ ಒಂದು ಚೆಂದದ ಕಥೆ.

weekend a

ಅದು ಹೇಗೋ ಕಷ್ಟಪಟ್ಟು ಚಿತ್ರರಂಗಕ್ಕೆ ಅಡಿಯಿರಿಸಿದ್ದ ಅವರಿಗೆ ಭಕ್ತವತ್ಸಲಂ ಸಹಾಯ ಮಾಡಿದ್ದರು. ಅದಾದ ನಂತರದಲ್ಲಿ ಸಿಕ್ಕಿದ ಸಣ್ಣಪುಟ್ಟ ಅವಕಾಶಗಳನ್ನೂ ಬಳಸಿಕೊಂಡು ಹಂತ ಹಂತವಾಗಿ ಮೇಲೇರಿ ಬಂದ ಸುರೇಶ್ ಅವರ ಪಾಲಿಗೆ ಅತಿರಥ ಮಹಾರಥರ ಸಾಂಗತ್ಯವೂ ದೊರೆತಿತ್ತು. ರಮೇಶ್ ಭಟ್ ಅವರಂಥಾ ಸಂಪರ್ಕಕ್ಕೆ ಬಂದು ಬಿ ಸಿ ಗೌರಿಶಂಕರ್ ಅವರ ಬಳಿ ಎಂಟು ವರ್ಷಗಳ ಕಾಲ ಸುರೇಶ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದರು. ರಾಜೇಂದ್ರ ಬಾಬು ಗರಡಿಯಲ್ಲಿಯೂ ಪಳಗಿಕೊಂಡಿದ್ದರು. ಉಪೇಂದ್ರ ನಿರ್ದೇಶನದ ಮೊದಲ ಚಿತ್ರ ತರ್ಲೆ ನನ್ಮಗಕ್ಕೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಸುರೇಶ್ ಕಾರ್ಯ ನಿರ್ವಹಿಸಿದ್ದರು. ಕಿಚ್ಚ ಸುದೀಪ್ ಅವರ ಮೈ ಆಟೋಗ್ರಾಫ್ ಚಿತ್ರಕ್ಕೂ ಕೂಡಾ ಅವರು ಕಾರ್ಯ ನಿರ್ವಹಿಸಿದ್ದಾರೆ.

weekend

ಹೀಗೆ ಸಾಗಿ ಬಂದಿರೋ ಅವರು ಎಲ್ಲ ಸಂದರ್ಭಗಳಲ್ಲಿಯೂ ಯುವ ಸಮೂಹದ ಸಂಪರ್ಕದಲ್ಲಿದ್ದದ್ದೇ ಹೆಚ್ಚು. ಆದ್ದರಿಂದಲೇ ಜನರೇಷನ್ ಗ್ಯಾಪ್ ನಂಥಾ ಸಮಸ್ಯೆ ಅವರನ್ನೆಂದೂ ಬಾಧಿಸಲೇ ಇಲ್ಲ. ಹೀಗೆ ಅವರು ಮೂರು ದಶಕಗಳ ಕಾಲ ಚಿತ್ರರಂಗದೊಂದಿಗೆ ಒಡನಾಡಿದ್ದಾರೆ. ಇಷ್ಟೊಂದು ಅನುಭವ ಹೊಂದಿದ್ದರೂ ಕೂಡಾ ನಿರ್ದೇಶಕನಾಗೋ ಕನಸು ಮೈ ತುಂಬಾ ಹೊದ್ದುಕೊಂಡಿದ್ದ ಕೆಲಸ ಕಾರ್ಯಗಳ ನಡುವೆ ನನಸಾಗಿರಲಿಲ್ಲ. ಒಂದರ ಹಿಂದೊಂದರಂತೆ ಚಿತ್ರಗಳು ಸಿಗುತ್ತಲೇ ಇದ್ದುದರಿಂದ ಸುರೇಶ್ ಅವರಿಗೆ ಅದೊಂದು ಕೊರಗಾಗಿಯೂ ಕಾಡಲಿಲ್ಲ. ಆದರೆ 2002ರಲ್ಲಿ ಅವರು ಪ್ರೇಮ ಎಂಬ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದರು. ಶಿವಧ್ವಜ್ ಮತ್ತು ಪ್ರೇಮ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ನಂತರ ಹೆಣ್ಣು ಭ್ರೂಣ ಹತ್ಯೆ ಕುರಿತಾದ ಸ್ತ್ರೀ ಶಕ್ತಿ ಎಂಬ ಸಿನಿಮಾವನ್ನೂ ಅವರು ನಿರ್ದೇಶನ ಮಾಡಿದ್ದರು. ಅದರಲ್ಲಿ ಸೋನು ಗೌಡ ಮನೋಜ್ಞ ಪಾತ್ರದಲ್ಲಿ ನಟಿಸಿದ್ದರು.

weekend f

ಈ ರೀತಿಯಲ್ಲಿ ಮೂವತ್ತು ವರ್ಷಗಳಿಗೂ ಹೆಚ್ಚು ಕಾಲ ಅನುಭವ ಹೊಂದಿರುವ ಸುರೇಶ್ ಅವರೀಗ ವೀಕೆಂಡ್ ಎಂಬ ಯುವ ಆವೇಗದ ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಇದರ ನವೀನ ಆಲೋಚನಾ ಕ್ರಮವನ್ನು ಹಿರಿಯ ನಟ ಅನಂತ್ ನಾಗ್ ಅವರೇ ಮೆಚ್ಚಿಕೊಂಡಿದ್ದೂ ಆಗಿದೆ. ಅದುವೇ ವೀಕೆಂಡ್ ಕಥೆಯ ಕಸುವೆಂಥಾದ್ದೆಂಬುದಕ್ಕೆ ಉದಾಹರಣೆಯೂ ಹೌದು. ಇದೀಗ ಟ್ರೈಲರ್ ಮೂಲಕ ಎಲ್ಲರನ್ನು ಸೆಳೆದುಕೊಂಡಿರೋ ಈ ಚಿತ್ರ ಇಷ್ಟರಲ್ಲಿಯೇ ತೆರೆ ಕಾಣಲಿದೆ.

weekend e

TAGGED:cinemaPublic TVsandalwoodSringeri SureshWeekend Kannada Cinemaಪಬ್ಲಿಕ್ ಟಿವಿವೀಕೆಂಡ್ ಕನ್ನಡ ಸಿನೆಮಾಶೃಂಗೇರಿ ಸುರೇಶ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

R.Nafeesa Ahmed nari narayani
Bengaluru City

ಪ್ರೆಸಿಡೆನ್ಸಿ ಗ್ರೂಪ್ ಆಫ್ ಸ್ಕೂಲ್ಸ್‌ನ ಶಕ್ತಿ ಡಾ. ನಫೀಸಾ ಅಹಮದ್‌ಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
3 minutes ago
Abhishek Sharma
Cricket

ಟೀಂ ಇಂಡಿಯಾ ಅಂತಿಮ 11ರ ಬಳಗದಲ್ಲಿ ಅಭಿಷೇಕ್‌ ಶರ್ಮಾ ಇರ್ತಾರಾ?

Public TV
By Public TV
5 minutes ago
Hassan Health Department Employee Heart Attack
Districts

ಮಲಗಿದ್ದ ವೇಳೆ ಹೃದಯಾಘಾತ – ಆರೋಗ್ಯ ಇಲಾಖೆ ನೌಕರ ಸಾವು

Public TV
By Public TV
5 minutes ago
papamma nari narayani
Bengaluru City

ಬೀಜ ಮಾತೆ ಪಾಪಮ್ಮಗೆ ನಾರಿ ನಾರಾಯಣಿ ಗೌರವ

Public TV
By Public TV
30 minutes ago
vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
55 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?