ಯಾದಗಿರಿ: ಸುರಪುರ ಶಾಸಕ ರಾಜುಗೌಡ ಆಪರೇಷನ್ ಹಸ್ತಕ್ಕೆ ಒಳಗಾಗುತ್ತಾರೆಂಬ ಮಾತುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಇದೀಗ ಅವರೇ ಸ್ಪಷ್ಟನೆ ನೀಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಬಿಜೆಪಿ ತೊರೆಯುವ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೆ ಇಲ್ಲ. ನಾನು ಎಂದಿಗೂ ಬಿಜೆಪಿ ಪಕ್ಷದಲ್ಲೇ ಇರುವುದಾಗಿ ಸ್ಪಷ್ಟನೆ ನೀಡಿದ್ದಾರೆ.
ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ನಾನು ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಇದ್ದೇನೆ. ತಾಯಿ ಜೊತೆ ಆಸ್ಪತ್ರೆಯಲ್ಲಿ ಇರುವ ಕಾರಣ ನನ್ನ ಮೊಬೈಲ್ ಸ್ವಿಚ್ಛ್ ಆಫ್ ಮಾಡಿದ್ದೇನೆ. ಇದಕ್ಕೆ ಆಪರೇಷನ್ ಹಸ್ತ ಎಂದು ಹೇಳುವುದು ಬೇಡ ಎಂದು ತಿಳಿಸಿದ್ದಾರೆ.
ನಾನು ಯಾವತ್ತೂ ಬಿಜೆಪಿಯಲ್ಲಿ ಇರುತ್ತೇನೆ. ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿ ಇಲ್ಲ. ನಮ್ಮ ಕ್ಷೇತ್ರದ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ತಾಯಿ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಸದ್ಯ ಶಾಸಕರು ಬೆಂಗಳೂರಿನಲ್ಲಿದ್ದಾರೆ.