ಹುಬ್ಬಳ್ಳಿ: ಕೆಎಸ್ಆರ್ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರಾದ ಘಟನೆ ಹುಬ್ಬಳ್ಳಿಯ ಬಂಕಾಪುರ್ ಚೌಕ್ ಬಳಿ ನಡೆದಿದೆ.
ಲಕ್ಷ್ಮೇಶ್ವರ ಮಾರ್ಗದಿಂದ ಹುಬ್ಬಳ್ಳಿಗೆ ಕೆಎಸ್ಆರ್ಟಿಸಿ ಬಸ್ ಬರುತ್ತಿತ್ತು. ಈ ವೇಳೆ ಬಸ್ಸಿನ ಹಿಂಬಂದಿಯ ಚಕ್ರದ ಟೈರ್ ಚಲಿಸುವ ವೇಳೆ ಸಂಪೂರ್ಣ ಹಾಳಾಗಿತ್ತು. ಇದನ್ನು ಅರಿತ ಬಸ್ ಚಾಲಕ ಸುಮಾರು 7 ಕಿ.ಮೀ ಕ್ರಮಿಸಿ ವಾಹನ ನಿಲ್ಲಿಸಿದ್ದಾರೆ.
ಬಸ್ ಚಾಲಕ ಹುಬ್ಬಳ್ಳಿ ಬಂಕಾಪೂರ್ ಚೌಕಿನವರೆಗೆ ತಂದು ನಿಲ್ಲಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಅಚ್ಚರಿಗೊಂಡಿದ್ದರು. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.