ಮೊಬೈಲ್‍ನಲ್ಲೇ ಮುಳುಗಿದ ನೂತನ ಸಂಸದ ತೇಜಸ್ವಿ ಸೂರ್ಯ

Public TV
1 Min Read
tejaswi copy

ಬೆಂಗಳೂರು: ರಾಜ್ಯ ಸರ್ಕಾರದ ಅರಣ್ಯ ಇಲಾಖೆ ವತಿಯಿಂದ ಆಯೋಜನೆಗೊಂಡಿದ್ದ ಪರಿಸರ ಕಾರ್ಯಕ್ರಮದಲ್ಲಿ ನೂತನ ಸಂಸದ ತೇಜಸ್ವಿ ಸೂರ್ಯ ಮೊಬೈಲಿನಲ್ಲಿ ಮುಳುಗಿದ್ದು ಚರ್ಚೆಗೆ ಗ್ರಾಸವಾಗಿದೆ.

ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವೇದಿಕೆ ಮೇಲೆ ಇದ್ದರೂ ಮೊಬೈಲ್ ಚಾಟಿಂಗ್ ನಲ್ಲಿ ಬ್ಯುಸಿಯಾಗಿದ್ದರು.

vlcsnap 2019 06 05 14h16m31s567

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕಾರದ ಬಳಿಕ ವೇದಿಕೆ ಮೇಲೆ ಕುಳಿತು ಮೊಬೈಲ್‍ನಲ್ಲಿ ಚಾಟ್ ಮಾಡುತ್ತಾ ಕುಳಿತ್ತಿದ್ದರು. ವೇದಿಕೆಯಲ್ಲಿ ಗಣ್ಯರು ಮಾತನಾಡುತ್ತಿದ್ದರೂ ತೇಜಸ್ವಿ ಸೂರ್ಯ ಮೊಬೈಲ್ ನೋಡುತ್ತಾ ಮಗ್ನರಾಗಿದ್ದರು.

ಈ ಕಾರ್ಯಕ್ರಮಕ್ಕೆ ಉಪ ಸಭಾಪತಿ ಧರ್ಮೇಗೌಡ, ಶಾಸಕ ಅಶ್ವಥ್ ನಾರಾಯಣ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *