ತಿರುಪತಿ ಮಾದರಿಯಲ್ಲಿ ರಾಮನಗರದಲ್ಲಿ ತಲೆ ಎತ್ತಲಿದೆ ತಿಮ್ಮಪ್ಪನ ದೇವಾಲಯ

Public TV
1 Min Read
Tirupati Balaji Temple 01

ಬೆಂಗಳೂರು: ವಿಶ್ವ ಪ್ರಸಿದ್ಧ ತಿರುಪತಿ ದೇವಸ್ಥಾನ ಮಾದರಿಯಲ್ಲಿ ರಾಜ್ಯದಲ್ಲೂ ತಿರುಪತಿ ತಿಮ್ಮಪ್ಪನ ದೇವಾಲಯ ತಲೆ ಎತ್ತಲಿದೆ.

ಆಂಧ್ರಪ್ರದೇಶದ ತಿರುಪತಿಗೆ ಪ್ರತಿ ದಿನ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕಾರಣ ಕೆಲ ಕ್ಷಣಗಳಷ್ಟೇ ದೇವರ ದರ್ಶನ ಪಡೆಯುವ ಅವಕಾಶ ಸಿಗುತ್ತದೆ. ಇದರಿಂದ ಗಂಟೆಗಂಟಲೇ ಸರತಿ ಸಾಲಿನಲ್ಲಿ ನಿಂತು ದರ್ಶನಕ್ಕಾಗಿ ಕಾಯುವ ಭಕ್ತರು ನಿರಾಸೆಯನ್ನ ಅನುಭವಿಸುತ್ತಾರೆ. ಇಂತಹ ಭಕ್ತರಿಗೆ ರಾಜ್ಯದಲ್ಲೇ ತಿಮ್ಮಪ್ಪನ ದರ್ಶನ ಪಡೆಯುವ ಅವಕಾಶ ಲಭಿಸಿದೆ.

ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಮುಜರಾಯಿ ಇಲಾಖೆಯ ಸಭೆಯಲ್ಲಿ ರಾಮನಗರದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

tirupati temple

ರಾಮನಗರದಲ್ಲಿ ದೇವಾಲಯ ನಿರ್ಮಾಣಕ್ಕೆ ಬೇಕಾದ ಅಗತ್ಯವಾದ 15 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ತಿರುಪತಿ ತಿಮ್ಮಪ್ಪನ ದೇವಸ್ಥಾನದ ಮಾದರಿಯಲ್ಲೇ ರಾಜ್ಯದಲ್ಲೂ ದೇವಸ್ಥಾನ ನಿರ್ಮಾಣವಾಗಲಿದೆ. ದೇವಸ್ಥಾನ ನಿರ್ಮಾಣ ಕಾರ್ಯವನ್ನ ಸಂಪೂರ್ಣವಾಗಿ ಟಿಟಿಡಿಯೇ ನೋಡಿಕೊಳ್ಳಲಿದ್ದು, ಅದರ ನಿರ್ವಹಣೆ ಕೂಡಾ ಟಿಟಿಡಿಯೇ ಮಾಡಲಿದೆ.

ಉಳಿದಂತೆ ಇಂದು ನಡೆದ ಸಭೆಯಲ್ಲಿ ಸಚಿವ ರೇವಣ್ಣ, ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯಕ್ ಹಾಗೂ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *