Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

Districts

ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

Public TV
Last updated: June 13, 2019 4:31 pm
Public TV
Share
2 Min Read
collage mnd
SHARE

ಮಂಡ್ಯ: 2018 ನವೆಂಬರ್ 24ರಂದು ಜಿಲ್ಲೆಯ ಪಾಂಡವಪುರದ ಕನಗನಮರಡಿ ಎಂಬ ಗ್ರಾಮದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 30 ಜನರು ಸಾವನ್ನಪಿದ್ದರು. ಈ ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂ. ಹಣ ಬಂದಿದೆ. ಆದರೆ ಈ ವಿಚಾರ ಈಗ ರಾಜಕೀಯ ತಿರುವು ಪಡೆದು ಚರ್ಚೆಗೆ ಕಾರಣವಾಗಿದೆ. ಇದೀಗ ಎಲ್ಲ ಗೊಂದಲಗಳಿಗೆ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.

https://www.facebook.com/permalink.php?story_fbid=2502437746650334&id=100006523990844

ಮಂಡ್ಯದಲ್ಲಿ ಈ ಹಣ ಕೇಂದ್ರ ಸರ್ಕಾರದಿಂದ ಬರಲು ನೂತನ ಸಂಸದೆ ಸುಮಲತಾ ಕಾರಣ ಎಂದು ಸುಮಲತಾ ಬೆಂಬಲಿಗರು ಮತ್ತು ಈ ನೆರವು ಬರಲು ಕಾರಣ ರಾಜ್ಯ ಸರ್ಕಾರದ ಸಿಎಂ ಕಾರಣ ಎಂದು ಜೆಡಿಎಸ್ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅವರು ನನಗೆ ಆ ಕ್ರೆಡಿಟ್ ಬೇಡ ಎಂದು ಹೇಳಿದ್ದಾರೆ.

ಇಂದು ಜಿಲ್ಲೆಯ ಮಾಚಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ದುರಂತದ ಸಂಗತಿ. ಆ ಕುಟುಂಬಗಳಿಗೆ ಅನುದಾನ ತಲುಪಿರೋದು ಮುಖ್ಯ. ಯಾರು ಕೊಟ್ಟಿದ್ದಾರೆ, ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ, ನೀವು ಕೊಟ್ಟಿಲ್ಲ ಅನ್ನೋದು ತುಂಬಾ ತಪ್ಪಾಗುತ್ತೆ. ಆ ರೀತಿ ತಪ್ಪು ಯಾರೂ ಮಾಡಬಾರದು ನಾನಂತೂ ಆ ತಪ್ಪು ಮಾಡೋದಿಲ್ಲ ಎಂದು ಹೇಳಿದ್ದಾರೆ.

sumalatha hdk 768x422 1

ಬಸ್ ದುರಂತವನ್ನು ಪ್ರಚಾರಕ್ಕೆ ಬಳಸೋದು ನನಗಿಷ್ಟ ಇಲ್ಲ. ಹಿಂದೆಯಿಂದಲೂ ನಾನು ಸಾಕಷ್ಟು ಬಾರಿ ಹೇಳಿದ್ದೀನಿ ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕು. ನಾವು ನಮ್ಮ ಸಾಧನೆಗಳ ಬಗ್ಗೆ ಮಾತಾಡಬಾರದು. ಯಾರೇ ಮಾಡಿರಲಿ ಅದನ್ನು ಹೇಳಿಕೊಳ್ಳಬಾರದು. ಈ ವಿಚಾರದಲ್ಲಿ ಯಾರು ಬೇಕಾದರೂ ಕ್ರೆಡಿಟ್ ತೆಗೆದುಕೊಳ್ಳಲಿ ನನಗೆ ಆ ಬಗ್ಗೆ ಬೇಜಾರ್ ಏನೂ ಇಲ್ಲ. ನನ್ನ ಕೆಲಸ ಈಗಷ್ಟೇ ಆರಂಭವಾಗಿದೆ. ಅದನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗುವ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

SUMALATHA

ಇದೇ ವೇಳೆ ಸಂಸತ್ ಅಧಿವೇಶನದ ಬಳಿಕ ಕ್ಷೇತ್ರ ಪ್ರವಾಸ ಮಾಡುತ್ತೇನೆ. ಬಜೆಟ್‍ನಲ್ಲಿ ಸಾಕಷ್ಟು ನಿರೀಕ್ಷೆ ಇದೆ, ಸಾಕಷ್ಟು ಕೊಡುಗೆ ನೀಡೋ ವಿಶ್ವಾಸ ಇದೆ. ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ಮಾಡುತ್ತೇನೆ. ಮಂಡ್ಯದ ಸಮಸ್ಯೆ ಬಗೆಹರಿಸಲು ಮತ್ತು ಮಂಡ್ಯ ರೈತರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡುತ್ತೇನೆ. ಮಂಡ್ಯದ ಶುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣ ರೈತರಿಗೆ ಒಳ್ಳೆಯದಾಗುವಂತ ನಿರ್ಧಾರ ತೆಗೆದುಕೊಂಡರೆ ಸಹಕಾರ ನೀಡುತ್ತೇನೆ. ಇದರ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡಿ ಮಾಹಿತಿ ಪಡೆದು ಯಾವುದು ಸೂಕ್ತ ಅನ್ನೋದನ್ನು ನಂತರ ತೀರ್ಮಾನ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು.

https://www.youtube.com/watch?v=XpZzL4RaCWk

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರದಿಂದ ಮಂಡ್ಯ ನಿರ್ಲಕ್ಷ್ಯ ವಿಚಾರದ ಬಗ್ಗೆ ಕೇಳಿದಾಗ, ಈ ವಿಚಾರದ ಬಗ್ಗೆ ಅವರನ್ನೇ ಕೇಳಬೇಕು. ಈಗಷ್ಟೇ ಚುನಾವಣೆ ಮುಗಿದಿದೆ. ಆ ವೇಳೆ ಸಾಕಷ್ಟು ಭರವಸೆ ಕೂಡ ಕೊಟ್ಟಿದ್ದರು. ಎಲ್ಲಾ ಭರವಸೆ ಈಡೇರಿಸೋ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಏನ್ ಮಾಡುತ್ತಾರೆ ಅನ್ನೋದನ್ನು ಕಾದು ನೋಡೋಣ ಎಂದರು. ಮಣಿಗೆರೆಯಲ್ಲಿ ಮೂವರ ದುರ್ಮರಣ ಪ್ರಕರಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಯಾರಿಂದ ಪರಿಹಾರ ಕೊಡಿಸಬೇಕೋ ಅವರಿಂದ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

TAGGED:Assistancebus accidentCentral GovernmentfamilymandyaState GovernmentSumalathaಕುಟುಂಬಕೇಂದ್ರ ಸರ್ಕಾರನೆರವುಬಸ್ ದುರಂತಮಂಡ್ಯರಾಜ್ಯ ಸರ್ಕಾರಸುಮಲತಾ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
19 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
37 minutes ago
daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
1 hour ago
Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
8 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
8 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?