Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ 6 – ಪಾಕಿಸ್ತಾನ ಝೀರೋ, 1996ರಲ್ಲಿ ಬೆಂಗಳೂರಲ್ಲೂ ಸೋತಿತ್ತು ಪಾಕಿಸ್ತಾನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಭಾರತ 6 – ಪಾಕಿಸ್ತಾನ ಝೀರೋ, 1996ರಲ್ಲಿ ಬೆಂಗಳೂರಲ್ಲೂ ಸೋತಿತ್ತು ಪಾಕಿಸ್ತಾನ!

Cricket

ಭಾರತ 6 – ಪಾಕಿಸ್ತಾನ ಝೀರೋ, 1996ರಲ್ಲಿ ಬೆಂಗಳೂರಲ್ಲೂ ಸೋತಿತ್ತು ಪಾಕಿಸ್ತಾನ!

Public TV
Last updated: June 15, 2019 3:49 pm
Public TV
Share
4 Min Read
ind vs pak icc ct final 8 1
SHARE

ಮ್ಯಾಂಚೆಸ್ಟರ್: ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ಪಾಕಿಸ್ತಾನ ತಂಡ ಟೀಂ ಇಂಡಿಯಾ ವಿರುದ್ಧ 39 ರನ್‍ಗಳಿಂದ ಸೋಲನುಭವಿಸಿತ್ತು. ವಿಶ್ವಕಪ್‍ನಲ್ಲಿ ಇತ್ತಂಡಗಳೂ 4 ವರ್ಷ ಹಿಂದೆ 2015ರಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಭಾರತ 76 ರನ್‍ಗಳಿಂದ ಗೆಲುವು ಸಾಧಿಸಿತ್ತು.

world cup 2

ವಿಶ್ವಕಪ್ 1992: 1992ರಲ್ಲಿ ಭಾರತ-ಪಾಕ್ ಮೊದಲ ಬಾರಿಗೆ ವಿಶ್ವಕಪ್‍ನಲ್ಲಿ ಪರಸ್ಪರ ಸೆಣಸಾಡಿತ್ತು. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 43 ರನ್‍ಗಳಿಂದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 54 ರನ್ ಗಳಿಸಿದ್ದರು. ಜೊತೆಗೆ 10 ಓವರ್ ನಲ್ಲಿ 37 ರನ್ ನೀಡಿ 1 ವಿಕೆಟ್ ಗಳಿಸಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಗಳಿಸಿದ್ದರು.

sachin

ವಿಶ್ವಕಪ್ 1999 – ಬೆಂಗಳೂರಲ್ಲಿ ಸಿಧು, ವೆಂಕಟೇಶ್ ಪ್ರಸಾದ್, ಕುಂಬ್ಳೆ ಹೀರೋ: 1996ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‍ನ ಕಾರ್ಟರ್ ಫೈನಲ್ ಅಹರ್ನಿಶಿ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 39 ರನ್‍ಗಳಿಂದ ಪರಾಭವಗೊಳಿಸಿತ್ತು. ಈ ಪಂದ್ಯದಲ್ಲಿ 93 ರನ್ ಗಳಿಸಿದ ನವಜೋತ್ ಸಿಂಗ್ ಸಿಧು ಪಂದ್ಯ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು. ಸಚಿನ್ 31, ಸಂಜಯ್ ಮಾಂಜ್ರೇಕರ್ 20, ಮೊಹಮ್ಮದ್ ಅಜರುದ್ದೀನ್ 20, ವಿನೋದ್ ಕಾಂಬ್ಳಿ 24, ಅಜಯ್ ಜಡೇಜ 45, ಅನಿಲ್ ಕುಂಬ್ಳೆ 10, ಜಾವಗಲ್ ಶ್ರೀನಾಥ್ 12, ನಯನ್ ಮೊಂಗಿಯ 3 ರನ್ ಗಳಿಸಿ ನಿಗದಿತ 50 ಓವರ್ ಮುಗಿದಾಗ ಭಾರತ 8 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿತ್ತು.

cricket venkatesh prasad

ಪಾಕಿಸ್ತಾನದ ಪರವಾಗಿ ವಖಾರ್ ಯೂನಿಸ್ ಹಾಗೂ ಮುಷ್ತಾಖ್ ಅಹ್ಮದ್ ತಲಾ 2 ವಿಕೆಟ್ ಗಳಿಸಿದರೆ. ಅತಾ-ಉರ್-ರೆಹ್ಮಾನ್, ಆಖಿಬ್ ಜಾವೇದ್, ಅಮೀಲ್ ಸೊಹೇಲ್ ತಲಾ 1 ವಿಕೆಟ್ ಗಳಿಸಿದರು. ವಖಾರ್ ಯೂನಿಸ್ ಹಾಗೂ ಆಖಿಬ್ ಜಾವೇದ್ 10 ಓವರ್‍ಗಳಲ್ಲಿ ತಲಾ 67 ರನ್ ನೀಡಿ ದುಬಾರಿ ಬೌಲರ್ ಎನಿಸಿದರು.

venkatesh sohail

288 ರನ್ ಸವಾಲನ್ನು ಬೆನ್ನಟ್ಟಿದ ಪಾಕಿಸ್ತಾನಕ್ಕೆ ಅಮೀರ್ ಸೊಹೇಲ್ ಹಾಗೂ ಸಯೀದ್ ಅನ್ವರ್ ಉತ್ತಮ ಆರಂಭವನ್ನೇ ನೀಡಿದರು. ಮೊದಲ ವಿಕೆಟ್ ಜೊತೆಯಾಟಕ್ಕೆ ಇಬ್ಬರೂ ಸೇರಿ 84 ರನ್ ಪೇರಿಸಿದ್ದರು. 15ನೇ ಓವರ್ ನಲ್ಲಿ ಅಮೀರ್ ಸೊಹೇಲ್ ಭಾರತೀಯ ವೇಗಿ ವೆಂಕಟೇಶ್ ಪ್ರಸಾದ್ ಅವರ ಎಸೆತವನ್ನು ಬೌಂಡರಿಗಟ್ಟಿ, ಬಾಲ್ ಹೋದ ದಿಕ್ಕನ್ನು ತೋರಿಸಿ ಕೆಣಕಿದರು. ಆದರೆ ಇದರ ನಂತರದ ಎಸೆತದಲ್ಲೇ ವೆಂಕಟೇಶ್ ಪ್ರಸಾದ್ ಅಮೀರ್ ಸೊಹೇಲ್ ಅವರನ್ನು ಬೌಲ್ಡ್ ಮಾಡಿ ಸೇಡು ತೀರಿಸಿಕೊಂಡರು. ಈ ವಿಕೆಟ್ ಬೀಳುತ್ತಿದ್ದಂತೆಯೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದ ಭಾರತದ ಅಭಿಮಾನಿಗಳ ಉತ್ಸಾಹ ಮುಗಿಲು ಮುಟ್ಟಿತ್ತು. ವೆಂಕಟೇಶ್ ಪ್ರಸಾದ್ ಹಾಗೂ ಅನಿಲ್ ಕುಂಬ್ಳೆ ಈ ಪಂದ್ಯದಲ್ಲಿ ತಲಾ 3 ವಿಕೆಟ್ ಪಡೆದರೆ, ಜಾವಗಲ್ ಶ್ರೀನಾಥ್ ಹಾಗೂ ವೆಂಕಟಪತಿ ರಾಜು ತಲಾ 1 ವಿಕೆಟ್ ಗಳಿಸಿದರು.

india vs pakista

ಪಾಕ್ ಪರವಾಗಿ ಅಮೀರ್ ಸೊಹೇಲ್ 55, ಸಯೀದ್ ಅನ್ವರ್ 48, ಇಜಾಜ್ ಅಹ್ಮದ್ 12, ಇಂಜಮಾಮ್ ಉಲ್ ಹಖ್ 12, ಸಲೀಮ್ ಮಲಿಕ್ 38, ಜಾವೇದ್ ಮಿಯಾಂದಾದ್ 38, ರಶೀದ್ ಲತೀಫ್ 26, ವಖಾರ್ ಯೂನಿಸ್ 4, ಅತಾ-ಉರ್-ರೆಹ್ಮಾನ್ 0, ಆಖಿಬ್ ಜಾವೇದ್ 6, ಮುಷ್ತಾಖ್ ಅಹ್ಮದ್ 0 ರನ್ ಗಳಿಸಿದರು. ನಿಧಾನಗತಿಯ ಬೌಲಿಂಗ್ ಹಿನ್ನೆಲೆಯಲ್ಲಿ ಪಾಕ್ ತಂಡಕ್ಕೆ ಬ್ಯಾಟಿಂಗ್‍ಗೆ 1 ಓವರ್ ಇಳಿಕೆ ಮಾಡಿ 49 ಓವರ್ ನಿಗದಿಗೊಳಿಸಲಾಗಿತ್ತು. ನಿಗದಿತ 49 ಓವರ್ ಮುಗಿದಾಗ ಪಾಕ್ ತಂಡ 9 ವಿಕೆಟ್ ನಷ್ಟಕ್ಕೆ 248 ರನ್ ಮಾತ್ರ ಗಳಿಸಿತ್ತು. ಈ ಮೂಲಕ ಭಾರತ ಪಂದ್ಯವನ್ನು 39 ರನ್‍ಗಳಿಂದ ಜಯಿಸಿತು.

anil kumble

ಈ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಡೇ ನೈಟ್ ಪಂದ್ಯವಾಗಿತ್ತು. ಅಂದು ನಡೆದ ಪಂದ್ಯವನ್ನು ವೀಕ್ಷಿಸಲು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 55 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಆಗಮಿಸಿದ್ದರು. ಅಲ್ಲದೆ ಇದೇ ಪಂದ್ಯದಲ್ಲಿ ವಖಾರ್ ಯೂನಿಸ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 200ನೇ ವಿಕೆಟ್ ಗಳಿಸಿದ ದಾಖಲೆ ಮಾಡಿದ್ದರು.

https://www.youtube.com/watch?v=lA2Ojyb0gqg&feature=youtu.be

1999ರ ವಿಶ್ವಕಪ್: ಮ್ಯಾಂಚೆಸ್ಟರ್ ನಲ್ಲಿ 1999ರಲ್ಲಿ ನಡೆದ ಪಂದ್ಯದಲ್ಲಿ ಪಾಕ್ 47 ರನ್‍ಗಳಿಂದ ಸೋತಿತ್ತು. ಭಾರತದ 227 ರನ್ ಟಾರ್ಗೆಟ್ ಬೆಂಬತ್ತಿದ ಪಾಕಿಸ್ತಾನ 180 ರನ್‍ಗಳಿಗೆ ಆಲೌಟಾಯಿತು. ಈ ಪಂದ್ಯದಲ್ಲಿ ವೇಗದ ಬೌಲರ್ ಕನ್ನಡಿಗ ವೆಂಕಟೇಶ್ ಪ್ರಸಾದ್ 9.3 ಓವರ್‍ ಗಳಲ್ಲಿ 27 ರನ್ ನೀಡಿ 5 ವಿಕೆಟ್ ಗಳಿಸಿದರು. ಅಲ್ಲದೆ ಅವರು 2 ಮೇಡನ್ ಓವರ್ ಎಸೆದಿದ್ದರು. ಈ ಪಂದ್ಯದಲ್ಲಿ ವೆಂಕಟೇಶ್ ಪ್ರಸಾದ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಗಳಿಸಿದರು.

sachinl 3

ವಿಶ್ವಕಪ್ 2003: ಸೆಂಚುರಿಯನ್‍ನಲ್ಲಿ 2003ರಲ್ಲಿ ನಡೆದ ಪಂದ್ಯದಲ್ಲಿ ಇನ್ನೂ 26 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್‍ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಪಾಕಿಸ್ತಾನ ನೀಡಿದ 273 ರನ್ ಟಾರ್ಗೆಟ್‍ಗೆ ಉತ್ತರವಾಗಿ ಟೀಂ ಇಂಡಿಯಾ 45.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತ್ತು. 75 ಎಸೆತಗಳಲ್ಲಿ 98 ರನ್ ಗಳಿಸಿದ ಸಚಿನ್ ತೆಂಡೂಲ್ಕರ್ ಪಂದ್ಯ ಶ್ರೇಷ್ಟ ಪ್ರಶಸ್ತಿ ಪಡೆದರು.

India Vs Pakistan

ವಿಶ್ವಕಪ್ 2011: ಚಂಡೀಗಢದಲ್ಲಿ 2011ರಲ್ಲಿ ನಡೆದ ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತ-ಪಾಕಿಸ್ತಾನ ಮತ್ತೆ ಮುಖಾಮುಖಿಯಾದವು. ಈ ಪಂದ್ಯದಲ್ಲಿ ಪಾಕಿಸ್ತಾನ 29 ರನ್‍ಗಳ ಸೋಲನುಭವಿಸಿತು. ಈ ಪಂದ್ಯದಲ್ಲಿ 85 ರನ್ ಗಳಿಸಿದ್ದ ಸಚಿನ್ ಮ್ಯಾನ್ ಆಫ್ ದಿ ಮ್ಯಾಚ್ ಗೌರವ ಪಡೆದರು.

ind vs pak

ವಿಶ್ವಕಪ್ 2015: ಆಸ್ಟ್ರೇಲಿಯಾದ ಆಡಿಲೇಡ್‍ನಲ್ಲಿ 2015ರಲ್ಲಿ ಭಾರತ ನೀಡಿದ 300 ರನ್ ಟಾರ್ಗೆಟ್ ಗೆ ಉತ್ತರವಾಗಿ ಬ್ಯಾಟಿಂಗ್ ಮಾಡಲು ಕಣಕ್ಕಿಳಿದ 224 ರನ್‍ಗಳಿಗೆ ಆಲೌಟಾಗಿ ಭಾರತಕ್ಕೆ 76 ರನ್‍ಗಳ ಗೆಲುವು ನೀಡಿತು. ಈ ಪಂದ್ಯದಲ್ಲಿ 107 ರನ್ ಗಳಿಸಿ ಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಟ ಪ್ರಶಸ್ತಿ ಪಡೆದಿದ್ದರು.

ind vs pak icc ct final 6

TAGGED:indiaIndo-Pak matchpakistanworld cupWorld Cup 2019ಇಂಡೋ-ಪಾಕ್ ಮ್ಯಾಚ್ಪಾಕಿಸ್ತಾನಭಾರತವಿಶ್ವಕಪ್ವಿಶ್ವಕಪ್ 2019
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

DK Shivakumar priyanka kharge in kamakhya temple
Latest

ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ

Public TV
By Public TV
10 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
28 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
50 minutes ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
1 hour ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
1 hour ago
majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?