ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಿ: ಮೋದಿಗೆ ಉದ್ಧವ್ ಠಾಕ್ರೆ ಮನವಿ

Public TV
1 Min Read
Uddhav Thackeray

ಲಕ್ನೋ: 17ನೇ ಲೋಕಸಭೆಯ ಮೊದಲ ಅಧಿವೇಶದ ಆರಂಭದ ಮುನ್ನಾದಿನವಾದ ಇಂದು ಉದ್ಧವ್ ಠಾಕ್ರೆ ಅವರು ರಾಮ ಮಂದಿರ ನಿರ್ಮಾಣದ ಕುರಿತು ಹೇಳಿಕೆ ನೀಡಿದ್ದಾರೆ.

ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ 18 ಸಂಸದರು ಹಾಗೂ ಪುತ್ರನ ಜೊತೆಗೆ ಇಂದು ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದರು. ಬಳಿಕ ರಾಮ್ ಲಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆಯ ಬಳಿಕ ಮಾತನಾಡಿದ ಉದ್ಧವ್ ಠಾಕ್ರೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಕೇಂದ್ರದಲ್ಲಿ ಮೋದಿ ಜೀ ನೇತೃತ್ವದ ಪ್ರಬಲ ಸರ್ಕಾರವಿದೆ. ಈ ಮೂಲಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ಜಾರಿಗೊಳಿಸಬೇಕಿದೆ. ಬಿಜೆಪಿಯು ರಾಮ ಮಂದಿರ ನಿರ್ಮಾಣ ಮಾಡುತ್ತದೆ ಎಂಬ ಕಾರಣಕ್ಕೆ ದೇಶದ ಜನರು ಲೋಕಸಭಾ ಚುನಾವಣೆಯಲ್ಲಿ ಬಹುಮತ ನೀಡಿದ್ದಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *