Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮಯ್ಯ ಒತ್ತಡವೇ ಅಮಾನತಿಗೆ ಕಾರಣವಿರಬಹುದು: ರೋಷನ್ ಬೇಗ್

Public TV
Last updated: June 19, 2019 12:35 pm
Public TV
Share
2 Min Read
roshan baig 1
SHARE

-ಸತ್ಯ ಹೇಳಿದರೆ ಅವರಿಗೆ ತಡೆದುಕೊಳ್ಳೋಕೆ ಆಗಲ್ವಾ?
– ಕಾಂಗ್ರೆಸ್‍ನಲ್ಲೇ ಇರುತ್ತೇನೆ

ಬೆಂಗಳೂರು: ನಾನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿಯಾಗಿದ್ದೇನೆ. ಸಿದ್ದರಾಮಯ್ಯ ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿ ಅಲ್ಲ. ಸಿದ್ದರಾಮಯ್ಯ ಒತ್ತಡವೂ ನನ್ನ ಅಮಾನತಿಗೆ ಕಾರಣವಿರಬಹುದು ಎಂದು ಶಿವಾಜಿನಗರ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

roshan baig 2

ಕಾಂಗ್ರೆಸ್ ಪಕ್ಷದಿಂದ ಅನಾನತುಗೊಂಡ ವಿಚಾರವಾಗಿ ಶಾಸಕ ರೋಷನ್ ಬೇಗ್ ತಮ್ಮ ಫ್ರೇಜರ್ ಟೌನ್ ನಿವಾಸದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ನಾನು ಇವತ್ತು ಪಕ್ಷದ ಬಗ್ಗೆ ಮಾತ್ರ ಮಾತಾನಾಡುತ್ತೇನೆ. ಮಂಗಳವಾರ ರಾತ್ರಿ ನನ್ನನ್ನು ಪಕ್ಷದಿಂದ ಅಮಾನತು ಮಾಡಿರುವ ಸುದ್ದಿ ತಿಳಿಯಿತು. ಸಿದ್ದರಾಮಯ್ಯ ಒತ್ತಡವೂ ನನ್ನ ಅಮಾನತಿಗೆ ಕಾರಣವಿರಬಹುದು. ನಾನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಸಿಪಾಯಿ. ಸಿದ್ದರಾಮಯ್ಯ ಕಾಂಗ್ರೆಸ್ಸಿನ ಸಿಪಾಯಿ ಅಲ್ಲ. ಅವರೇ ಕಾಂಗ್ರೆಸ್ಸನ್ನು ಈ ದುರ್ಗತಿಗೆ ತಂದಿದ್ದಾರೆ. ನಾನು ಸತ್ಯ ಹೇಳಿದ್ದೀನಿ. ಸತ್ಯ ಹೇಳೋದು ಅಪರಾಧಾನಾ? ನಾನು ಸತ್ಯ ಹೇಳಿದರೆ ಅವರಿಗೆ ತಡ್ಕೊಳ್ಳೋಕಾಗಲ್ಲವಾ? ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

roshan baig 3

ನಾನು ರಾಹುಲ್ ಗಾಂಧಿಯವರನ್ನು ಟೀಕಿಸಿಲ್ಲ. ನಾನು ಈ ಕ್ಷಣದವರೆಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿಯೇ ಇದ್ದೇನೆ. ನಾನು ರಾಜ್ಯ ನಾಯಕರ ಬಗ್ಗೆ ಸತ್ಯ ಮಾತನಾಡಿದ್ದೀನಿ. ಹಿರಿಯ ಕಾಂಗ್ರೆಸ್ ನಾಯಕರಾದ ಮುನಿಯಪ್ಪ, ರಾಮಲಿಂಗಾರೆಡ್ಡಿ ಜೊತೆ ಚರ್ಚಿಸಿ ಮುಂದಿನ ನಿರ್ಣಯ ತೆಗೆದುಕೊಳ್ಳುತ್ತೇನೆ. ಕಾಂಗ್ರೆಸ್ ಕಾರ್ಯಕರ್ತರ ಮನದ ಅಭಿಪ್ರಾಯವನ್ನು ನಾನು ಮಾತಾಡಿದ್ದು ಅಷ್ಟೇ. ರಮೇಶ್ ಜಾರಕಿಹೊಳಿ, ಕೆ.ಎನ್ ರಾಜಣ್ಣ ಅವರ ವಿರುದ್ಧ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು. ನಾನು ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಚಿಂತನೆ ಇಲ್ಲ. ಅಮಾನತುಗೊಂಡಿರುವ ವಿಚಾರವನ್ನು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ, ರಾಮಲಿಂಗಾರೆಡ್ಡಿ, ಎಚ್.ಕೆ ಪಾಟೀಲ್ ಅವರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

CONGRESS SIDDARAMAIAH

ರಾಜ್ಯದಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿದೆ. ಮುನಿಯಪ್ಪರನ್ನ ಸೋಲಿಸುತ್ತೇವೆ ಎಂದು ಬಹಿರಂಗವಾಗಿ ಕೆಲವರು ಹೇಳಿದ್ದರು. ಅವರ ವಿರುದ್ಧ ಯಾಕೆ ಪಕ್ಷ ಕ್ರಮ ತೆಗೆದುಕೊಂಡಿಲ್ಲ. ಮಂಡ್ಯದಲ್ಲಿ ಸುಮಲತಾ ಅವರ ಪರ ಕೈ ಪಕ್ಷದವರು ಕೆಲಸ ಮಾಡಿದ್ದರು. ಮಂಡ್ಯದ ಕಾಂಗ್ರೆಸಿಗರ ವಿರುದ್ಧ ಯಾಕೆ ಕ್ರಮ ಇಲ್ಲ ಎಂದು ಹರಿಹಾಯ್ದರು.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ನಮ್ಮನ್ನೆಲ್ಲ ಕರೆದು ಚರ್ಚೆ ಮಾಡಬೇಕಿತ್ತು. ಕ್ಲೋಸ್ಡ್ ಡೋರ್ ನಲ್ಲಿ ಗುಸು ಗುಸು ಎಂದು ಪಕ್ಷದ ಬಗ್ಗೆ ಚರ್ಚೆ ಮಾಡಕ್ಕಾಗಲ್ಲ. ಎಲ್ಲರೂ ಒಟ್ಟಾಗಿ ಚರ್ಚೆ ಮಾಡಬೇಕು. ನಾನು ಪಕ್ಷದ ರಾಜ್ಯ ನಾಯಕರ ಬಗ್ಗೆ ಮಾತಾಡಿದ್ದಕ್ಕೆ ಹಲವರಿಂದ ಬೆಂಬಲ ಬಂತು. ತುಮಕೂರಲ್ಲಿ ಮುದ್ದಹನುಮೇಗೌಡರನ್ನು ಬಲಿಕೊಟ್ಟರು. ಅವರೇನು ತಪ್ಪು ಮಾಡಿದ್ದರು? ಮೈತ್ರಿ ಎಂದು ಹೇಳುತ್ತಲೇ ಮಾಜಿ ಪ್ರಧಾನಿ ದೇವೇಗೌಡರನ್ನೂ ಸೋಲಿಸಿದ್ರಲ್ಲ ಎಂದು ಕೆಲ ಕೈ ನಾಯಕರ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.

HDD SUMALATHA

ನಂತರ ಐಎಂಎ ಪ್ರಕರಣದ ಬಗ್ಗೆ ನಾನು ಮಾತಾಡಲ್ಲ. ಅದರ ತನಿಖೆ ನಡೀತಿದೆ ಎಂದು ಹೇಳಿದರು. ಇಂದು ರಾಹುಲ್ ಗಾಂಧಿ ಅವರ ಜನ್ಮದಿನ. ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತೇನೆ ಅವರೇ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಬೇಕು ಎನ್ನುತ್ತಾ ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ ಎಂದು ತಮ್ಮ ನಿರ್ಧಾರವನ್ನು ತಿಳಿಸಿದರು.

ಅವರೊಂದಿಗೆ ಗುಣಶೇಖರ್, ನೇತ್ರಾವತಿ ಕೃಷ್ಣೇಗೌಡ, ಮುರುಗಾ ಅವರು ಸೇರಿ ನಾಲ್ವರು ಕಾರ್ಪೊರೇಟರ್ ಗಳು ಸಾಥ್ ನೀಡಿದ್ದರು

TAGGED:bengaluruCoalition GovernmentcongresspressmeetPublic TVRoshan Baigsiddaramaiahಅಮಾನತುಕಾಂಗ್ರೆಸ್ಪಬ್ಲಿಕ್ ಟಿವಿಬೆಂಗಳೂರುರೋಷನ್ ಬೇಗ್ಸಿದ್ದರಾಮಯ್ಯಸುದ್ದಿಗೋಷ್ಠಿ
Share This Article
Facebook Whatsapp Whatsapp Telegram

You Might Also Like

Shrikanth Shetty karkala
Bagalkot

ಶ್ರೀಕಾಂತ್‌ ಶೆಟ್ಟಿಗೆ 3 ತಿಂಗಳು ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ

Public TV
By Public TV
45 seconds ago
Dinesh Gundurao 1
Bengaluru City

ಯಾರೇ ದ್ವೇಷ ಭಾಷಣ ಮಾಡಿದ್ರು ಸರ್ಕಾರ ಸುಮ್ಮನೆ ಇರಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್

Public TV
By Public TV
4 minutes ago
Gill Jaiswal
Cricket

England vs India, 1st Test: ಇಂಗ್ಲೆಂಡ್‌ ನೆಲದಲ್ಲಿ ಮೊದಲ ಪಂದ್ಯದಲ್ಲೇ ಜೈಸ್ವಾಲ್‌, ಗಿಲ್‌ ಶತಕದ ಸಾಧನೆ

Public TV
By Public TV
4 minutes ago
Droupadi Murmu
Latest

ಉತ್ತರಾಖಂಡ | ಅಂತರರಾಷ್ಟ್ರೀಯ ಯೋಗ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

Public TV
By Public TV
8 minutes ago
Neeraj Chopra
Latest

Diamond League | ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

Public TV
By Public TV
11 minutes ago
Narendra Modi
Latest

ಸಂಘರ್ಷ ತಾಂಡವ ಆಡ್ತಿರೋ ಜಗತ್ತಲ್ಲಿ ಯೋಗ ಶಾಂತಿ ತರಬಹುದು: ಮೋದಿ

Public TV
By Public TV
35 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?