– ಸಂಸದರ ಮನೆಗೆ ಮುತ್ತಿಗೆ
ಬೆಳಗಾವಿ: ಕೇಂದ್ರ ರಾಜ್ಯ ರೇಲ್ವೇ ಖಾತೆ ಸಚಿವ ಸುರೇಶ್ ಅಂಗಡಿ ಇಂಗ್ಲಿಷ್ನಲ್ಲಿ ಪ್ರಮಾಣ ಸ್ವೀಕರಿಸಿದಕ್ಕೆ ಆಕ್ರೋಶಗೂಂಡ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಇಂದು ಸಂಸದರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಚೆನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಕರವೇ ಕಾರ್ಯಕರ್ತರು ಸಂಸದರ ಪ್ರತಿಕೃತಿಯನ್ನು ದಹಿಸಿ ಸದಾಶಿವ ನಗರದಲ್ಲಿರುವ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ.
ಇದರ ಜೊತೆಗೆ ಸಂಸದ ಅನಂತ್ ಕುಮಾರ್ ಹೆಗಡೆಯವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ ಎಂದು ಅವರ ವಿರುದ್ಧವು ಧಿಕ್ಕಾರ ಕೂಗಿದರು. ಎಂಇಎಸ್ ನೊಂದಿಗೆ ಅಂಗಡಿ ಅನೈತಿಕ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಕೃತಿ ದಹನ ಮಾಡಿದರು. ಇದನ್ನು ಪೊಲೀಸರ ವಿರೋಧಿಸಿದ್ದಕ್ಕೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಇದೇ ವೇಳೆ ಮಾತನಾಡಿದ ಕರವೇ ಕಾರ್ಯಕರ್ತ ದೀಪಕ್, ಕರ್ನಾಟಕದಿಂದ ಆಯ್ಕೆಯಾದ ಎಲ್ಲ ಸಂಸದರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ ಸುರೇಶ್ ಅಂಗಡಿ ಮತ್ತು ಅನಂತ್ ಕುಮಾರ್ ಹೆಗಡೆ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡದೇ ಕನ್ನಡಕ್ಕೇ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕನ್ನಡ ವಿರೋಧಿ ಬೆಳಾಗವಿ ಸಂಸದರಿಗೆ ಧಿಕ್ಕಾರ ಕೂಗಿ, ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಕಾರ್ಯಕರ್ತರ ಪೊಲೀಸರು ವಶಕ್ಕೆ ಪಡೆದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]