ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

Public TV
2 Min Read
resident ram nath kovind

– ಆರ್ಥಿಕ ಸದೃಢ 3 ರಾಷ್ಟ್ರಗಳಲ್ಲಿ ಭಾರತ ಒಂದಾಗಲಿ
– ಮುಂದಿನ ಪೀಳಿಗೆಗೆ ನಾವು ನೀರು ಉಳಿಸಬೇಕು

ನವದೆಹಲಿ: 17ನೇ ಲೋಕಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ ಇಂದು ಮಾತನಾಡಿದರು. ಭಾರತವನ್ನು ಪ್ರಬಲ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ಮಾಡಲು ನೂತನ ಸರ್ಕಾರ ಕೆಲಸ ಮಾಡಬೇಕಿದ ಎಂದು ಹೇಳಿದರು.

ನೂತನ ಮೋದಿ ಸರ್ಕಾರ ತ್ರಿಪಲ್ ತಲಾಖ್ ನಿಷೇಧ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ಮುಂದಿನ ಕಾರ್ಯ ನಿರ್ವಹಿಸಬೇಕಿದೆ. ದೇಶದ 75ನೇ ಸ್ವತಂತ್ರ ದಿನಾಚರಣೆಯ ವೇಳೆ ದೇಶ ಅಭಿವೃದ್ಧಿಯ ಕನಸು ಸಾಕಾರಗೊಳ್ಳುವಂತೆ ಮಾಡುವ ಮೂಲಕ ನಿಮ್ಮ ಕಾರ್ಯವನ್ನು ರೈತರು ಮತ್ತು ಸೈನಿಕರಿಗೆ ಅರ್ಪಿಸಬೇಕು.

ದೇಶದ ಜನತೆ ದೀರ್ಘ ಅವಧಿಯಿಂದ ಮೂಲಭೂತ ಸೌಲಭ್ಯಗಳನ್ನು ನಿರೀಕ್ಷಿಸುತ್ತಿದ್ದಾರೆ. ಆದ್ರೆ ಆ ಸ್ಥಿತಿ ಬದಲಾವಣೆಯತ್ತ ಸಾಗುತ್ತಿದೆ. ವಿಶ್ವದ ಅತಿದೊಡ್ಡ ಸದೃಢ ಮೂರು ದೇಶಗಳಲ್ಲಿ ಭಾರತ ಸಹ ಒಂದಾಗುವಂತೆ ನೂತನ ಸರ್ಕಾರ ಕಾರ್ಯ ನಿರ್ವಹಿಸಬೇಕೆಂದು ಗುರಿಯನ್ನು ನೀಡಿದರು.

ಕಿಸಾನ್ ಸಮ್ಮಾನ್ ಯೋಜನೆ ದೇಶದ ಪ್ರತಿಯೊಬ್ಬ ರೈತರಿಗೆ ತಲುಪಿದೆ. ರೈತರಿಗೆ ಪಿಂಚಣಿ ನೀಡುವ ಕಾರ್ಯ ಸಹ ಆರಂಭಗೊಂಡಿದೆ. ಸಣ್ಣ ವ್ಯಾಪಾರಸ್ಥನ ಆರ್ಥಿಕ ಸುರಕ್ಷತೆಯನ್ನು ಗಮನದಲ್ಲಿರಿಸಿ ಮೊದಲ ಬಾರಿಗೆ ಸರ್ಕಾರವೊಂದು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. 3 ಕೋಟಿಗೂ ಅಧಿಕ ಸಣ್ಣ ವ್ಯಾಪಾರಸ್ಥರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.

ಜಲ ಸಂರಕ್ಷಣೆ:
ಮುಂದಿನ ಪೀಳಿಗೆಗಾಗಿ ನಾವು ನೀರು ಉಳಿಸುವ ಅಚಲ ನಿರ್ಧಾರ ಮಾಡಬೇಕು. ಸಂಸತ್ತಿನ ಅಧಿವೇಶನದಲ್ಲಿ ಜೂನ್ 14 ರಂದು ಬಿಡುಗಡೆಯಾದ ನೀತಿ ಆಯೋಗದ ವರದಿಯನ್ನು ಆಧಾರವಾಗಿ ಇಟ್ಟುಕೊಂಡು ಮಾತನಾಡಿದ ಅವರು, ಭಾರತ ತನ್ನ ಇತಿಹಾಸದಲ್ಲೇ ಅತ್ಯಂತ ಕೆಟ್ಟ ನೀರಿನ ಬಿಕ್ಕಟ್ಟಿನಿಂದ ಬಳಲುತ್ತಿದೆ. ನಾವು ನಮ್ಮ ಮಕ್ಕಳಿಗೆ ಮತ್ತು ಮುಂದಿನ ಪೀಳಿಗೆಗೆ ನೀರನ್ನು ಉಳಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹೊಸ ಜಲಶಕ್ತಿ ಸಚಿವಾಲಯವನ್ನು ರಚಿಸುವುದು ನಿರ್ಣಾಯಕ ಹೆಜ್ಜೆಯಾಗಿದ್ದು, ಇದು ನೀರಿನ ಸಮಸ್ಯೆ ಮೇಲೆ ಬಹುದೊಡ್ಡ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಈ ವರದಿಯ ಪ್ರಕಾರ ಸುರಕ್ಷಿತ ನೀರಿನ ಕೊರೆತೆಯಿಂದಾಗಿ ಸುಮಾರು 60 ಕೋಟಿ ಜನರು ತೀವ್ರ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಪ್ರತೀ ವರ್ಷ ಸುಮಾರು ಎರಡು ಲಕ್ಷ ಜನರು ಇದರಿಂದ ಸಾಯುತ್ತಿದ್ದಾರೆ ಎಂದು ವರದಿ ಹೇಳಿದೆ. ಸಂಯೋಜಿತ ನೀರು ನಿರ್ವಹಣಾ ಸೂಚ್ಯಂಕ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಬಿಡುಗಡೆ ಮಾಡಿದ ಈ ವರದಿ ಮುಂದಿನ ದಿನಗಳಲ್ಲಿ ಭಾರತದಲ್ಲಿ ನೀರಿನ ಸಮಸ್ಯೆ ತುಂಬ ಉಲ್ಬಣಗೊಳ್ಳಬಹುದು ಎಂದು ಅತಂಕ ವ್ಯಕ್ತಪಡಿಸಿದೆ.

Nitin Gadkari

2030ರ ಹೊತ್ತಿಗೆ ದೇಶದಲ್ಲಿ ನೀರಿನ ಬೇಡಿಕೆಯು ಈಗ ಇರುವ ಬೇಡಿಕೆಗಿಂತ ಎರಡು ಪಟ್ಟು ಹೆಚ್ಚಾಗುತ್ತದೆ ಎಂದು ಊಹಿಸಲಾಗಿದೆ. ಇಂದು ಬಹಳ ಜನರಿಗೆ ನೀರಿನ ಕೊರೆತೆಯನ್ನು ಸೂಚಿಸುತ್ತದೆ ಮತ್ತು ದೇಶದ ಜಿಡಿಪಿಯಲ್ಲಿ ಶೇ. 6 ರಷ್ಟು ನಷ್ಟವಾಗುತ್ತದೆ ಎಂದು ಹೇಳಲಾಗಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *